AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗೊಂಬೆ ಮಾಸ್ಕ್ ಧರಿಸಿ ಕಾರು, ಬೈಕ್​ಗಳ ಧ್ವಂಸಗೊಳಿಸಿದ ಆರು ಮಂದಿಯ ಬಂಧನ

ಗೊಂಬೆ ಮಾಸ್ಕ್ ಧರಿಸಿಕೊಂಡು ರಸ್ತೆ ಬದಿ ಪಾರ್ಕ್ ಮಾಡಿದ್ದ ಕಾರು ಮತ್ತು ಬೈಕ್​ಗಳನ್ನು ಧ್ವಂಸ ಮಾಡಿದ್ದ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಬೆಂಗಳೂರು ನಗರದ ರಾಜಗೋಪಾಲನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಲಗ್ಗೆರೆ ಬಳಿ 15 ಕಾರು, ಬೈಕ್​ಗಳನ್ನು ಪುಂಡರು ಧ್ವಂಸ ಮಾಡಿ ಅಟ್ಟಹಾಸ ಮೆರೆದಿದ್ದರು.

ಬೆಂಗಳೂರು: ಗೊಂಬೆ ಮಾಸ್ಕ್ ಧರಿಸಿ ಕಾರು, ಬೈಕ್​ಗಳ ಧ್ವಂಸಗೊಳಿಸಿದ ಆರು ಮಂದಿಯ ಬಂಧನ
ಬೆಂಗಳೂರಿನ ಲಗ್ಗೆರೆ ಬಳಿ ಗೊಂಬೆ ಮಾಸ್ಕ್ ಧರಿಸಿ ಕಾರು, ಬೈಕ್​ಗಳ ಧ್ವಂಸಗೊಳಿಸಿದ ಆರು ಮಂದಿಯ ಬಂಧನ (ಸಾಂದರ್ಭಿಕ ಚಿತ್ರ)
Jagadisha B
| Updated By: Rakesh Nayak Manchi|

Updated on:Nov 16, 2023 | 10:05 AM

Share

ಬೆಂಗಳೂರು, ನ.16: ಗೊಂಬೆ ಮಾಸ್ಕ್ ಧರಿಸಿಕೊಂಡು ರಸ್ತೆ ಬದಿ ಪಾರ್ಕ್ ಮಾಡಿದ್ದ ಕಾರು ಮತ್ತು ಬೈಕ್​ಗಳನ್ನು ಧ್ವಂಸ ಮಾಡಿದ್ದ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಬೆಂಗಳೂರು (Bengaluru) ನಗರದ ರಾಜಗೋಪಾಲನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಏರಿಯಾದಲ್ಲಿ ಹವಾ ಇಡಲು ಲಗ್ಗೆರೆ ಬಳಿ ಬೈಕ್​ನಲ್ಲಿ ಬಂದಿದ್ದ ಪುಂಡರ ಗ್ಯಾಂಗ್, 15 ಕಾರು ಹಾಗೂ ಬೈಕ್​ಗಳನ್ನು ಪೈಡಿಗೈದಿದ್ದರು. ಕಂಠ ಪೂರ್ತಿ ಕುಡಿದು ಬೈಕ್​ಗಳಲ್ಲಿ ಬಂದು ತೂರಾಡುತ್ತಾ ಮನಬಂದಂತೆ ರಾಡ್ ಮತ್ತು ಲಾಂಗ್​ಗಳಿಂದ ಕಾರುಗಳ ಗ್ಲಾಸ್ ಪುಡಿ ಮಾಡಿ ಪರಾರಿಯಾಗಿದ್ದರು.

ಸ್ಥಳಕ್ಕೆ ಶಾಸಕ ಮುನಿರತ್ನ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದರು. ಇತ್ತ, ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದ ರಾಜಗೋಪಾಲನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಸದ್ಯ, ಪಕ್ಕದ ಏರಿಯಾದಿಂದ ಲಗ್ಗೆರೆಗೆ ಬಂದು ಕೃತ್ಯ ಎಸಗಿ ಬೇರೆಬೇರೆ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ಒಂದು ಚೊಂಬಿನ ಕಥೆ! ಕಳ್ಳತನದ ಕೇಸ್ ಅಂತ ಹೋದ ಹೊಯ್ಸಳ ಪೊಲೀಸರು ಕಕ್ಕಾಬಿಕ್ಕಿಯಾದರು!

ಬಾರ್​ ಶೆಟರ್​ ಮುರಿದು ಹಣ ಕಳ್ಳತನ

ಆನೇಕಲ್: ಶೆಟರ್​ ಮುರಿದು ಪ್ರಜ್ವಲ್ ಬಾರ್ ಒಳಗೆ ನುಗ್ಗಿದ ಕಳ್ಳರು, ಹಣ ದೋಚಿ ಪರಾರಿಯಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್​ ತಾಲೂಕಿನ ತಿರುಪಾಳ್ಯದಲ್ಲಿ ನಡೆದಿದೆ. ನಿನ್ನೆ ರಾತ್ರಿ ಮೂರು ಜನ ಖದೀಮರು ಬಾರ್​ಗೆ ನುಗ್ಗಿ ಕಳ್ಳತನ ಮಾಡಿದ್ದಾರೆ.

ಕಳೆದ ರಾತ್ರಿ ಬಾರ್ ಬಳಿ ಬಂದಿದ್ದ ಮೂವರ ಪೈಕಿ ಇಬ್ಬರು ಹೊರಗಡೆ ಮಾಹಿತಿದಾರರಾಗಿ ನಿಂತುಕೊಂಡು ಮತ್ತೊಬ್ಬ ಬಾರ್ ಒಳಗೆ ನುಗ್ಗಿ ಹಣ ದೋಚಿ ಪರಾರಿಯಾಗಿದ್ದಾರೆ. ಬಾರ್​ನಲ್ಲಿ 6 ಲಕ್ಷಕ್ಕೂ ಹೆಚ್ಚು ನಗದು ಇತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಸದ್ಯ, ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 am, Thu, 16 November 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ