AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕಿತ ಉಗ್ರರ ಬಂಧನ, ಸ್ಫೋಟಕ ಪತ್ತೆ ಹಿನ್ನೆಲೆ; ಸ್ವಾತಂತ್ರ್ಯೋತ್ಸವ ಭದ್ರತೆಗಾಗಿ ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸಭೆ

ಸ್ವಾತಂತ್ರ್ಯ ದಿನಾಚರಣೆಗೆ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ಮೊದಲ ಸಭೆಯಲ್ಲಿ ಚರ್ಚಿಸಲಾಗಿದೆ. ಸಭೆಯಲ್ಲಿ ನಗರ ಪೊಲೀಸ್ ಕಮಿಷನರ್, ಹೆಚ್ಚುವರಿ ಪೊಲೀಸ್ ಆಯುಕ್ತರು, ಸಂಚಾರ ವಿಭಾಗದ ಜಂಟಿ ಅಯುಕ್ತರು, ಡಿಸಿ, ಬಿಬಿಎಂಪಿ ಅಧಿಕಾರಿಗಳು ಭಾಗಿಯಾಗಿದ್ದಾರೆ.

ಶಂಕಿತ ಉಗ್ರರ ಬಂಧನ, ಸ್ಫೋಟಕ ಪತ್ತೆ ಹಿನ್ನೆಲೆ; ಸ್ವಾತಂತ್ರ್ಯೋತ್ಸವ ಭದ್ರತೆಗಾಗಿ ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸಭೆ
ಸಾಂದರ್ಭಿಕ ಚಿತ್ರ
Shivaprasad B
| Edited By: |

Updated on:Jul 20, 2023 | 10:22 PM

Share

ಬೆಂಗಳೂರು, ಜುಲೈ 20: ನಗರದಲ್ಲಿ ಶಂಕಿತ ಉಗ್ರರ ಬಂಧನ ಹಾಗೂ ಸ್ಫೋಟಕಗಳು ಪತ್ತೆಯಾಗಿರುವ ಕಾರಣ ಬೆಂಗಳೂರು ನಗರ ಪೊಲೀಸ್ ಆಯುಕ್ತರ (Bengaluru Police) ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಗೆ (Independence Day) 25 ದಿನ ಮುನ್ನವೇ ಪೊಲೀಸ್ ಅಧಿಕಾರಿಗಳು ಸಭೆ ಸೇರಿದ್ದು, ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಸಾಮಾನ್ಯವಾಗಿ ಸ್ವಾತಂತ್ರ್ಯೋತ್ಸವಕ್ಕೆ 10 ದಿನ ಮುಂಚಿತವಾಗಿ ಭದ್ರತಾ ಸ್ಥಿತಿಗತಿ ಕುರಿತು ಚರ್ಚಿಸಲು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಯುತ್ತದೆ. ಆದರೆ, ಈ ಬಾರಿ ಮೊದಲೇ ಸಭೆ ನಡೆಸಿ ಭದ್ರತಾ ಕ್ರಮಗಳ ಬಗ್ಗೆ ಚರ್ಚಸಿಸಲಾಗಿದೆ.

ಸ್ವಾತಂತ್ರ್ಯ ದಿನಾಚರಣೆಗೆ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ಮೊದಲ ಸಭೆಯಲ್ಲಿ ಚರ್ಚಿಸಲಾಗಿದೆ. ಸಭೆಯಲ್ಲಿ ನಗರ ಪೊಲೀಸ್ ಕಮಿಷನರ್, ಹೆಚ್ಚುವರಿ ಪೊಲೀಸ್ ಆಯುಕ್ತರು, ಸಂಚಾರ ವಿಭಾಗದ ಜಂಟಿ ಅಯುಕ್ತರು, ಡಿಸಿ, ಬಿಬಿಎಂಪಿ ಅಧಿಕಾರಿಗಳು ಭಾಗಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಮತ್ತು ರಾಜ್ಯದ ಇತರೆಡೆಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಮತ್ತು ಭದ್ರತಾ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.

ಈ ಮಧ್ಯೆ, ಶಂಕಿತ ಉಗ್ರರ ಬಂಧನ ಹಾಗೂ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 4 ಸಜೀವ ಗ್ರೆನೇಡ್ ಪತ್ತೆಯಾದ ಕಾರಣ ಕರ್ನಾಟಕದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ರೈಲು ನಿಲ್ದಾಣ, ಬಸ್​ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹ್ಯಾಂಡ್​​ ಗ್ರೆನೇಡ್ ಪತ್ತೆ; ಪೊಲೀಸರಲ್ಲಿ ಹೆಚ್ಚಿದ ಆತಂಕ, ಎಲ್ಲೆಡೆ ಕಟ್ಟೆಚ್ಚರ

ವಿಜಯಪುರ ಬಸ್​ ಹಾಗೂ ರೈಲು ನಿಲ್ದಾಣಗಳಲ್ಲಿ ಬುಧವಾರವೇ ತಪಾಸಣೆ ಬಿಗಿಗೊಳಿಸಲಾಗಿತ್ತು. ಇದೀಗ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಹೈಅಲರ್ಟ್​​​ ಘೋಷಿಸಲಾಗಿದೆ. ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದ್ದು, ಪ್ರಯಾಣಿಕರ ಬ್ಯಾಗ್​​ಗಳನ್ನೂ ಪರಿಶೀಲನೆ ಮಾಡಲಾಗುತ್ತಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:21 pm, Thu, 20 July 23

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!