ಇನ್ಮುಂದೆ ಕೋರ್ಟ್ ತೀರ್ಪು ಕನ್ನಡದಲ್ಲೇ ಓದಿ: ಕನ್ನಡ ಭಾಷೆ ತೀರ್ಪುಗಳು ಇರುವ ವೆಬ್ ಸೈಟ್​​ ಆರಂಭಿಸಿದ ಹೈಕೋರ್ಟ್

Artificial Intelligence Assisted Legal Translation: ತೀರ್ಪುಗಳನ್ನು ಸ್ಥಳೀಯ ಭಾಷೆಗಳಲ್ಲಿ ಪ್ರಕಟಿಸುವ ಮೂಲಕ ಜನಸಾಮಾನ್ಯರಿಗೆ ಹತ್ತಿರವಾಗಲು ನ್ಯಾಯಾಂಗ ಮುಂದಾಗಿದೆ. ‘ಸುವಾಸ್ʼ ಕೃತಕ ಬುದ್ದಿಮತ್ತೆ ಟೂಲ್ ಬಳಕೆ ಮಾಡಿ ನ್ಯಾಯಾಂಗ ದಾಖಲೆಗಳು ಮತ್ತು ತೀರ್ಪುಗಳನ್ನು ಕನ್ನಡೀಕರಿಸಲಾಗುತ್ತಿದೆ.

ಇನ್ಮುಂದೆ ಕೋರ್ಟ್ ತೀರ್ಪು ಕನ್ನಡದಲ್ಲೇ ಓದಿ: ಕನ್ನಡ ಭಾಷೆ ತೀರ್ಪುಗಳು ಇರುವ ವೆಬ್ ಸೈಟ್​​ ಆರಂಭಿಸಿದ ಹೈಕೋರ್ಟ್
ಇನ್ಮುಂದೆ ಕೋರ್ಟ್ ತೀರ್ಪು ಕನ್ನಡದಲ್ಲೇ ಓದಿ
Follow us
| Updated By: ಸಾಧು ಶ್ರೀನಾಥ್​

Updated on: Apr 20, 2023 | 11:05 AM

ಬೆಂಗಳೂರು: ಜನ ಸಾಮಾನ್ಯರಿಗೂ ಅರ್ಥವಾಗುವಂತೆ ಕನ್ನಡ ಭಾಷೆಯಲ್ಲಿ ಸುಪ್ರೀಂಕೋರ್ಟ್, ಹೈಕೋರ್ಟ್‌ ತೀರ್ಪುಗಳು ಸಿಗಬೇಕೆಂಬ ಬಹುದಿನಗಳ ಬೇಡಿಕೆಯನ್ನು ಹೈಕೋರ್ಟ್ ಕೊನೆಗೂ ಈಡೇರಿಸಿದೆ. ಅದರಂತೆ ಕರ್ನಾಟಕ ಹೈಕೋರ್ಟ್‌ (Karnataka High court) ಕನ್ನಡಕ್ಕೆ ಅನುವಾದಿಸಿದ ತೀರ್ಪುಗಳ (Judgments) ವೆಬ್‌ ಸೈಟ್ ಅನ್ನು (Legal Translation into Kannada Web Page) ಪ್ರಾರಂಭಿಸಿದೆ. ಏಪ್ರಿಲ್ 18 ರಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಈ ವೆಬ್ ಪುಟವನ್ನು ಲೋಕಾರ್ಪಣೆಗೊಳಿಸಿದ್ದಾರೆ.

ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್‌ ನ ಆಯ್ದ ತೀರ್ಪುಗಳು ಜನಸಾಮಾನ್ಯರಿಗೆ ಮತ್ತು ದಾವೆದಾರರಿಗೆ ಅನುಕೂಲವಾಗುವಂತೆ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗಬೇಕು ಎಂಬ ನಿಟ್ಟಿನಲ್ಲಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರ ನೇತೃತ್ವದಲ್ಲಿ ‘ಕೃತಕ ಬುದ್ಧಿಮತ್ತೆಯ ಕಾನೂನು ಅನುವಾದ ಸಲಹಾ ಸಮಿತಿ (Artificial Intelligence Assisted Legal Translation Advisory Committee) ಹೆಸರಿನ ಕೇಂದ್ರ ಸಮಿತಿ ರಚಿಸಿದೆ. ಈ ಸಮಿತಿಯಲ್ಲಿ ರಾಜ್ಯ ಹೈಕೋರ್ಟ್‌ ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಸಹ ಸದಸ್ಯರಾಗಿದ್ದಾರೆ. ‘ಸುವಾಸ್ʼ ಕೃತಕ ಬುದ್ದಿಮತ್ತೆ ಟೂಲ್ ಬಳಕೆ ಮಾಡಿ ನ್ಯಾಯಾಂಗ ದಾಖಲೆಗಳು ಮತ್ತು ತೀರ್ಪುಗಳನ್ನು ಕನ್ನಡೀಕರಿಸಲಾಗುತ್ತಿದೆ.

ರಾಜ್ಯಮಟ್ಟದಲ್ಲಿ ಕರ್ನಾಟಕ ಹೈಕೋರ್ಟ್‌ ಕೂಡ ಇದೇ ರೀತಿಯ ಸಮಿತಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ನೇತೃತ್ವದಲ್ಲಿ ರಚಿಸಿದೆ. ಇದೀಗ ಹೈಕೋರ್ಟ್‌ ಆಂತರಿಕ ಅನುವಾದಕರ ಸಹಾಯದಿಂದ ಭಾಷಾಂತರ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಪ್ರಾರಂಭಿಕವಾಗಿ ಸುಪ್ರೀಂ ಕೋರ್ಟ್‌ ನ 28 ತೀರ್ಪುಗಳು ಹಾಗೂ ಹೈಕೋರ್ಟ್ ನ 169 ಭಾಷಾಂತರಿಸಿದ ತೀರ್ಪುಗಳನ್ನು ಹೈಕೋರ್ಟ್ ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ (ಕಂಪ್ಯೂಟರ್) ಎನ್ ಜಿ ದಿನೇಶ್ ಅವರು ತಿಳಿಸಿದ್ದಾರೆ.

ಕನ್ನಡದಲ್ಲಿ ಸುಪ್ರೀಂ ಕೋರ್ಟ್‌ ಹಾಗೂ ಹೈಕೋರ್ಟ್‌ ತೀರ್ಪುಗಳನ್ನು ಓದಲು ಈ ಕೆಳಗಿನ ಲಿಂಕ್ ಗಳನ್ನು ಕ್ಲಿಕ್ ಮಾಡಿ.

ಕನ್ನಡದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪುಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನ್ನಡದಲ್ಲಿ ಹೈಕೋರ್ಟ್‌ ತೀರ್ಪುಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ