AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಟರ್‌ಬಡ್ಡಿ ದಂಧೆಕೋರರ ಕಿರುಕುಳ.. ಮಗನನ್ನು ಕಳೆದುಕೊಂಡು ಕಣ್ಣೀರಿಟ್ಟ ಜಾನಪದ ಕಲಾವಿದೆ ಬೋವಿ ಜಯಮ್ಮ

ಮಾನವೀಯತೆ ಮರೆತು ಸಾವಿನ ಮನೆಗೆ ಬಂದು ಬಡ್ಡಿ ಹಣಕ್ಕಾಗಿ ಕುಟುಂಬಸ್ಥರನ್ನು ಪೀಡಿಸಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಮೀಟರ್‌ಬಡ್ಡಿ ದಂಧೆಕೋರರ ಕಿರುಕುಳ.. ಮಗನನ್ನು ಕಳೆದುಕೊಂಡು ಕಣ್ಣೀರಿಟ್ಟ ಜಾನಪದ ಕಲಾವಿದೆ ಬೋವಿ ಜಯಮ್ಮ
ಶವ ಅಂತ್ಯಕ್ರಿಯೆ ಮಾಡಲೂ ಬಿಡದೆ ಸಾಲದ ಹಣಕ್ಕೆ ಬೇಡಿಕೆ ಇಟ್ಟ ಮೀಟರ್‌ಬಡ್ಡಿ ದಂಧೆಕೋರರು
ಆಯೇಷಾ ಬಾನು
|

Updated on: Jan 10, 2021 | 9:28 AM

Share

ಚಿತ್ರದುರ್ಗ: ಜಿಲ್ಲೆಯಲ್ಲಿ ಮೀಟರ್‌ಬಡ್ಡಿ ದಂಧೆಕೋರರ ಹಾವಳಿ ಹೆಚ್ಚಾಗಿದೆ. ಮಾನವೀಯತೆ ಮರೆತು ಸಾವಿನ ಮನೆಗೆ ಬಂದು ಬಡ್ಡಿ ಹಣಕ್ಕಾಗಿ ಕುಟುಂಬಸ್ಥರನ್ನು ಪೀಡಿಸಿದ ಘಟನೆ ನಡೆದಿದೆ. ಮೃತದೇಹ ಮಣ್ಣು ಮಾಡಲೂ ಬಿಡದೆ ಸಾಲದ ಹಣಕ್ಕೆ ಬೇಡಿಕೆ ಇಟ್ಟು ದರ್ಪ ಮೆರೆಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಜಾನಪದ ಕಲಾವಿದೆ ಬೋವಿ ಜಯಮ್ಮರ ಪುತ್ರ ಅರುಣ್ ಮತ್ತು ಕುಟುಂಬ ಅಂಬೇಡ್ಕರ್ ಬಡಾವಣೆಯಲ್ಲಿ ವಾಸವಾಗಿದ್ದರು. ಕೆಲ ಕಾರಣಗಳಿಂದ ಅರುಣ್, ಬೋವಿಹಟ್ಟಿಯ ಭಾಗ್ಯಮ್ಮ, ಸುಮಾ ಎಂಬುವವರ ಬಳಿ ಸಾಲಪಡೆದಿದ್ದರು. ಆದ್ರೆ ಸಾಲ ತೀರಿಸುವ ಮುನ್ನವೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತದೇಹ ಮನೆಯಲ್ಲೇ ಇರುವಾಗಲೇ ಮಾನವೀಯತೆ ಮರೆತು ಸಾವಿನ ಮನೆಗೆ ಬಂದು ಬಡ್ಡಿ ಹಣಕ್ಕಾಗಿ ಕುಟುಂಬಸ್ಥರನ್ನು ಪೀಡಿಸಿದ್ದಾರಂತೆ. ಶವ ಅಂತ್ಯಕ್ರಿಯೆ ಮಾಡಲೂ ಬಿಡದೆ ಸಾಲದ ಹಣ ಕೇಳಿದ್ದಾರೆ ಎಂದು ಅರುಣ್ ಪತ್ನಿ ಅನುಷಾ ಬೋವಿಹಟ್ಟಿಯ ಭಾಗ್ಯಮ್ಮ, ಸುಮಾ ವಿರುದ್ಧ ದರ್ಪ ಆರೋಪಿಸಿದ್ದಾರೆ. ಜಾನಪದ ಕಲಾವಿದೆ ಬೋವಿ ಜಯಮ್ಮ ಪುತ್ರನ ಸಾವು, ಸಾಲಗಾರರ ಕಾಟದಿಂದ ಕಣ್ಣೀರಿಟ್ಟಿದ್ದಾರೆ. ಸಾಲಗಾರರ ಕಾಟದಿಂದ ಮುಕ್ತಿ ನೀಡುವಂತೆ ಟಿವಿ9 ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಸದ್ಭವ ಕನ್‌ಸ್ಟ್ರಕ್ಷನ್‌ ಸಂಸ್ಥೆ ವಿರುದ್ಧ ಆರೋಪ, ಕಾಮಗಾರಿ ಹೆಸರಲ್ಲಿ ನಡೀತಿದೆಯಾ ಅಕ್ರಮ ಮಣ್ಣು ಗಣಿಗಾರಿಕೆ?

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ