ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡ ಅರುಣ್ ಕುಮಾರ್ ಪುತ್ತಿಲ: ಮೊದಲ ದಿನವೇ ಪುತ್ತಿಲ ಪರಿವಾರದ ಗೂಂಡಾಗಿರಿ

ಅರುಣ್​ ಕುಮಾರ್​​ ಪುತ್ತಿಲ ಇದೀಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಗೊಂಡಿದ್ದಾರೆ. ಕಾರ್ಯಕರ್ತರ ಪಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಛೇರಿಗೆ ಆಗಮಿಸಿದ್ದರು. ಅರುಣ್ ಪುತ್ತಿಲ್​ಗೆ ಬಿಜೆಪಿ ಶಾಲು ಹೊದಿಸಿ ಧ್ವಜವನ್ನ ನೀಡುವ ಮೂಲಕ ಅಧಿಕೃತವಾಗಿ ಸೇರ್ಪಡೆ ಮಾಡಲಾಯಿತು. ಈ ವೇಳೆ ಪುತ್ತಿಲ ಪರಿವಾರದವರಿಂದ ಗೂಂಡಾಗಿರಿ ಮಾಡಲಾಗಿದೆ.

ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡ ಅರುಣ್ ಕುಮಾರ್ ಪುತ್ತಿಲ: ಮೊದಲ ದಿನವೇ ಪುತ್ತಿಲ ಪರಿವಾರದ ಗೂಂಡಾಗಿರಿ
ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Mar 16, 2024 | 9:29 PM

ಮಂಗಳೂರು, ಮಾರ್ಚ್​​ 16: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡುವ ಮೂಲಕ ಬಿಜೆಪಿಗೆ ದೊಡ್ಡ ಸವಾಲಾಗಿದ್ದ ಅರುಣ್​ ಕುಮಾರ್​​ ಪುತ್ತಿಲ (arun kumar puthila) ಇದೀಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಗೊಂಡಿದ್ದಾರೆ. ಕಾರ್ಯಕರ್ತರ ಪಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಛೇರಿಗೆ ಆಗಮಿಸಿದ್ದರು. ಅರುಣ್ ಪುತ್ತಿಲ್​ಗೆ ಬಿಜೆಪಿ ಶಾಲು ಹೊದಿಸಿ ಧ್ವಜವನ್ನ ನೀಡುವ ಮೂಲಕ ಅಧಿಕೃತವಾಗಿ ಸೇರ್ಪಡೆ ಮಾಡಲಾಯಿತು. ಈ ವೇಳೆ ಅರುಣ್ ಕುಮಾರ್ ಪುತ್ತಿಲ್​ಗೆ ನೂರಾರು ಕಾರ್ಯಕರ್ತರ ಸಾಥ್ ನೀಡಿದರು. ಬಳಿಕ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರನ್ನು ಭೇಟಿ ಮಾಡಿದ್ದಾರೆ.

ಬಿಜೆಪಿ ಸೇರ್ಪಡೆ ಮೊದಲ ದಿನವೇ ಪುತ್ತಿಲ ಪರಿವಾರದ ಗೂಂಡಾಗಿರಿ: ಮಾಧ್ಯಮದವರ ಮೇಲೆ ದರ್ಪ

ಬಿಜೆಪಿ ಸೇರ್ಪಡೆ ಮೊದಲ ದಿನವೇ ಪುತ್ತಿಲ ಪರಿವಾರದವರಿಂದ ಗೂಂಡಾಗಿರಿ ಮಾಡಲಾಗಿದೆ. ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮದವರ ಮೇಲೆ ಪುತ್ತಿಲ ಪರಿವಾರದ ಸಂದೀಪ್ ಉಪ್ಪಿನಂಗಡಿ ಎಂಬಾತನಿಂದ ಪುಂಡಾಟ ಮಾಡಲಾಗಿದೆ. ವರದಿ ಮಾಡಲು ಹೋದ ಮಾಧ್ಯಮದವರನ್ನ ತಳ್ಳಾಡಿ, ಅನುಚಿತ ವರ್ತನೆ ತೋರಿದ್ದಾರೆ.

ಇದನ್ನೂ ಓದಿ: ಪುತ್ತಿಲ ಬಿಜೆಪಿ ಸೇರ್ಪಡೆ ಆಗಿದೆ, ಮಂಗಳೂರಿನಲ್ಲಿ ಸೇರ್ಪಡೆಯಂಥ ಪ್ರಕ್ರಿಯೆ ಇಲ್ಲ: ಸತೀಶ್ ಕುಂಪಲ

ಮಾಧ್ಯಮದವರು ಇಲ್ಲಿ ಬರುವುದು ಯಾಕೆ? ನಮಗೆ ಮಾಧ್ಯಮದವರ ಅವಶ್ಯಕತೆ ಇಲ್ಲ. ನಮಗೆ ಮಾಧ್ಯಮದವರ ಅಗತ್ಯವಿಲ್ಲ ನಾವು ಒಂದಾಗಿ ಆಯಿತು ಎಂದು ಬಿಜೆಪಿ ಸೇರ್ಪಡೆ ಮೊದಲ ದಿನವೇ ಅಹಂಕಾರ ಪ್ರದರ್ಶನ ಮಾಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಒಪ್ಪಿದರೂ ಪುತ್ತಿಲ ಸೇರ್ಪಡೆಗೆ ಪುತ್ತೂರು ಬಿಜೆಪಿಯಲ್ಲಿ ಅಪಸ್ವರ ಕೇಳಿಬಂದಿತ್ತು. ಆ ಮೂಲಕ ಹಿಂದೂ ನಾಯಕ ಅರುಣ್ ಪುತ್ತಿಲ ಬಿಜೆಪಿ ಎಂಟ್ರಿಗೆ ಮತ್ತೆ ವಿಘ್ನ ಎದುರಾಗಿತ್ತು. ಪುತ್ತೂರಿನ ಕೆಲ ಬಿಜೆಪಿ ನಾಯಕರ ಅಪಸ್ವರದಿಂದ ಪಕ್ಷ ಸೇರ್ಪಡೆ ಮತ್ತೆ ಗೊಂದಲ ಉಂಟಾಗಿತ್ತು. ಹೀಗಾಗಿ ಸಾಮಾಜಿಕ ತಾಣಗಳಲ್ಲಿ ಪುತ್ತಿಲ ಪರಿವಾರದ ವಕ್ತಾರ ಶ್ರೀಕೃಷ್ಣ ಉಪಾಧ್ಯಾಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಅರುಣ್ ಕುಮಾರ್ ಪುತ್ತಿಲ ಜತೆಗಿನ ಸಂಧಾನ ಯಶಸ್ವಿ, ಹಿಂದೂ ಮುಖಂಡ ನಾಳೆ ಬಿಜೆಪಿ ಸೇರ್ಪಡೆ

ಅಲ್ಲದೇ ಪುತ್ತಿಲ ವರ್ಸಸ್ ಬಿಜೆಪಿ ಗಲಾಟೆಯಲ್ಲಿ ಕೆಲ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾಗಿರುವ ಕೇಸ್​​ಗಳನ್ನು ವಾಪಾಸ್ ಪಡೆದು ಬಿಜೆಪಿ ಸೇರ್ಪಡೆಗೆ ಪಟ್ಟು ಹಿಡಿಯಲಾಗಿತ್ತು. ಬೆಂಗಳೂರಿನಲ್ಲೇ ಪುತ್ತಿಲ ಬಿಜೆಪಿ ಸೇರ್ಪಡೆ ಆಗಿದೆ ಎಂದು ಬಿಜೆಪಿ ನಾಯಕರು ಹೇಳಿದ್ದರು. ಆದರೆ ಮಂಗಳೂರು ಕಚೇರಿಯಲ್ಲೇ ಸೇರ್ಪಡೆ ಅಂತ ಪುತ್ತಿಲ ತಂಡ ಸಿದ್ದವಾಗಿದ್ದರು. ಜೊತೆಗೆ ಅರುಣ್ ಪುತ್ತಿಲಗೆ ಮಂಡಲ ಅಧ್ಯಕ್ಷ ಸ್ಥಾನ ನೀಡದಂತೆ ಹಲವರು ಪಟ್ಟು ಹಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ