ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡ ಅರುಣ್ ಕುಮಾರ್ ಪುತ್ತಿಲ: ಮೊದಲ ದಿನವೇ ಪುತ್ತಿಲ ಪರಿವಾರದ ಗೂಂಡಾಗಿರಿ

ಅರುಣ್​ ಕುಮಾರ್​​ ಪುತ್ತಿಲ ಇದೀಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಗೊಂಡಿದ್ದಾರೆ. ಕಾರ್ಯಕರ್ತರ ಪಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಛೇರಿಗೆ ಆಗಮಿಸಿದ್ದರು. ಅರುಣ್ ಪುತ್ತಿಲ್​ಗೆ ಬಿಜೆಪಿ ಶಾಲು ಹೊದಿಸಿ ಧ್ವಜವನ್ನ ನೀಡುವ ಮೂಲಕ ಅಧಿಕೃತವಾಗಿ ಸೇರ್ಪಡೆ ಮಾಡಲಾಯಿತು. ಈ ವೇಳೆ ಪುತ್ತಿಲ ಪರಿವಾರದವರಿಂದ ಗೂಂಡಾಗಿರಿ ಮಾಡಲಾಗಿದೆ.

ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡ ಅರುಣ್ ಕುಮಾರ್ ಪುತ್ತಿಲ: ಮೊದಲ ದಿನವೇ ಪುತ್ತಿಲ ಪರಿವಾರದ ಗೂಂಡಾಗಿರಿ
ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆ
Edited By:

Updated on: Mar 16, 2024 | 9:29 PM

ಮಂಗಳೂರು, ಮಾರ್ಚ್​​ 16: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡುವ ಮೂಲಕ ಬಿಜೆಪಿಗೆ ದೊಡ್ಡ ಸವಾಲಾಗಿದ್ದ ಅರುಣ್​ ಕುಮಾರ್​​ ಪುತ್ತಿಲ (arun kumar puthila) ಇದೀಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಗೊಂಡಿದ್ದಾರೆ. ಕಾರ್ಯಕರ್ತರ ಪಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಛೇರಿಗೆ ಆಗಮಿಸಿದ್ದರು. ಅರುಣ್ ಪುತ್ತಿಲ್​ಗೆ ಬಿಜೆಪಿ ಶಾಲು ಹೊದಿಸಿ ಧ್ವಜವನ್ನ ನೀಡುವ ಮೂಲಕ ಅಧಿಕೃತವಾಗಿ ಸೇರ್ಪಡೆ ಮಾಡಲಾಯಿತು. ಈ ವೇಳೆ ಅರುಣ್ ಕುಮಾರ್ ಪುತ್ತಿಲ್​ಗೆ ನೂರಾರು ಕಾರ್ಯಕರ್ತರ ಸಾಥ್ ನೀಡಿದರು. ಬಳಿಕ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರನ್ನು ಭೇಟಿ ಮಾಡಿದ್ದಾರೆ.

ಬಿಜೆಪಿ ಸೇರ್ಪಡೆ ಮೊದಲ ದಿನವೇ ಪುತ್ತಿಲ ಪರಿವಾರದ ಗೂಂಡಾಗಿರಿ: ಮಾಧ್ಯಮದವರ ಮೇಲೆ ದರ್ಪ

ಬಿಜೆಪಿ ಸೇರ್ಪಡೆ ಮೊದಲ ದಿನವೇ ಪುತ್ತಿಲ ಪರಿವಾರದವರಿಂದ ಗೂಂಡಾಗಿರಿ ಮಾಡಲಾಗಿದೆ. ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮದವರ ಮೇಲೆ ಪುತ್ತಿಲ ಪರಿವಾರದ ಸಂದೀಪ್ ಉಪ್ಪಿನಂಗಡಿ ಎಂಬಾತನಿಂದ ಪುಂಡಾಟ ಮಾಡಲಾಗಿದೆ. ವರದಿ ಮಾಡಲು ಹೋದ ಮಾಧ್ಯಮದವರನ್ನ ತಳ್ಳಾಡಿ, ಅನುಚಿತ ವರ್ತನೆ ತೋರಿದ್ದಾರೆ.

ಇದನ್ನೂ ಓದಿ: ಪುತ್ತಿಲ ಬಿಜೆಪಿ ಸೇರ್ಪಡೆ ಆಗಿದೆ, ಮಂಗಳೂರಿನಲ್ಲಿ ಸೇರ್ಪಡೆಯಂಥ ಪ್ರಕ್ರಿಯೆ ಇಲ್ಲ: ಸತೀಶ್ ಕುಂಪಲ

ಮಾಧ್ಯಮದವರು ಇಲ್ಲಿ ಬರುವುದು ಯಾಕೆ? ನಮಗೆ ಮಾಧ್ಯಮದವರ ಅವಶ್ಯಕತೆ ಇಲ್ಲ. ನಮಗೆ ಮಾಧ್ಯಮದವರ ಅಗತ್ಯವಿಲ್ಲ ನಾವು ಒಂದಾಗಿ ಆಯಿತು ಎಂದು ಬಿಜೆಪಿ ಸೇರ್ಪಡೆ ಮೊದಲ ದಿನವೇ ಅಹಂಕಾರ ಪ್ರದರ್ಶನ ಮಾಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಒಪ್ಪಿದರೂ ಪುತ್ತಿಲ ಸೇರ್ಪಡೆಗೆ ಪುತ್ತೂರು ಬಿಜೆಪಿಯಲ್ಲಿ ಅಪಸ್ವರ ಕೇಳಿಬಂದಿತ್ತು. ಆ ಮೂಲಕ ಹಿಂದೂ ನಾಯಕ ಅರುಣ್ ಪುತ್ತಿಲ ಬಿಜೆಪಿ ಎಂಟ್ರಿಗೆ ಮತ್ತೆ ವಿಘ್ನ ಎದುರಾಗಿತ್ತು. ಪುತ್ತೂರಿನ ಕೆಲ ಬಿಜೆಪಿ ನಾಯಕರ ಅಪಸ್ವರದಿಂದ ಪಕ್ಷ ಸೇರ್ಪಡೆ ಮತ್ತೆ ಗೊಂದಲ ಉಂಟಾಗಿತ್ತು. ಹೀಗಾಗಿ ಸಾಮಾಜಿಕ ತಾಣಗಳಲ್ಲಿ ಪುತ್ತಿಲ ಪರಿವಾರದ ವಕ್ತಾರ ಶ್ರೀಕೃಷ್ಣ ಉಪಾಧ್ಯಾಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಅರುಣ್ ಕುಮಾರ್ ಪುತ್ತಿಲ ಜತೆಗಿನ ಸಂಧಾನ ಯಶಸ್ವಿ, ಹಿಂದೂ ಮುಖಂಡ ನಾಳೆ ಬಿಜೆಪಿ ಸೇರ್ಪಡೆ

ಅಲ್ಲದೇ ಪುತ್ತಿಲ ವರ್ಸಸ್ ಬಿಜೆಪಿ ಗಲಾಟೆಯಲ್ಲಿ ಕೆಲ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾಗಿರುವ ಕೇಸ್​​ಗಳನ್ನು ವಾಪಾಸ್ ಪಡೆದು ಬಿಜೆಪಿ ಸೇರ್ಪಡೆಗೆ ಪಟ್ಟು ಹಿಡಿಯಲಾಗಿತ್ತು. ಬೆಂಗಳೂರಿನಲ್ಲೇ ಪುತ್ತಿಲ ಬಿಜೆಪಿ ಸೇರ್ಪಡೆ ಆಗಿದೆ ಎಂದು ಬಿಜೆಪಿ ನಾಯಕರು ಹೇಳಿದ್ದರು. ಆದರೆ ಮಂಗಳೂರು ಕಚೇರಿಯಲ್ಲೇ ಸೇರ್ಪಡೆ ಅಂತ ಪುತ್ತಿಲ ತಂಡ ಸಿದ್ದವಾಗಿದ್ದರು. ಜೊತೆಗೆ ಅರುಣ್ ಪುತ್ತಿಲಗೆ ಮಂಡಲ ಅಧ್ಯಕ್ಷ ಸ್ಥಾನ ನೀಡದಂತೆ ಹಲವರು ಪಟ್ಟು ಹಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us