AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಳೀನ್ ಕುಮಾರ್​ದು ಎನ್ನಲಾದ ಆಡಿಯೋ ವೈರಲ್: ಆಪ್ತರ ಮೂಲಕ ಆಡಿಯೋ ಮಾಹಿತಿ ಪಡೆದುಕೊಂಡ ಉಸ್ತುವಾರಿ ಅರುಣ್ ಸಿಂಗ್

ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಡಿಯೋ ಕ್ಲಿಪ್ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಆಪ್ತರ ಮೂಲಕ ಆಡಿಯೋ ಕ್ಲಿಪ್ ತರೆಸಿಕೊಂಡು ಅದರ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ನಳೀನ್ ಕುಮಾರ್​ದು ಎನ್ನಲಾದ ಆಡಿಯೋ ವೈರಲ್: ಆಪ್ತರ ಮೂಲಕ ಆಡಿಯೋ ಮಾಹಿತಿ ಪಡೆದುಕೊಂಡ ಉಸ್ತುವಾರಿ ಅರುಣ್ ಸಿಂಗ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
TV9 Web
| Edited By: |

Updated on: Jul 19, 2021 | 1:11 PM

Share

ಬೆಂಗಳೂರು: ನಾಯಕತ್ವ ಬದಲಾವಣೆ ಬಡಿದಾಟಲ್ಲಿ ರಾಜ್ಯ ಬಿಜೆಪಿ ಈಗಾಗಲೇ ಬಣಗಳಾಗಿ ಚೂರು ಚೂರಾಗಿ ನಿಂತಿದೆ. ಬಿಎಸ್ವೈ ವಿರುದ್ಧ ಶಾಸಕರ ತಂಡವೇ ರೆಬೆಲ್ ಆಗಿ ನಾಯಕತ್ವ ಬದಲಾವಣೆ ಪಟ್ಟು ಹಿಡಿದಿದೆ. ಸಿಎಂ ಪರ ಹಾಗೂ ವಿರೋಧಿ ಬಣದ ಹಾದಿರಂಪ ಬೀದಿರಂಪದಿಂದ ಹೈಕಮಾಂಡ್ ಕೂಡಾ ಹೈರಾಣಾಗಿ ಹೋಗಿದೆ. ಇನ್ನೇನು ಬದಲಾವಣೆ ಬಡಿದಾಟ ಕ್ಲೈಮ್ಯಾಕ್ಸ್ ಹಂತ ತಲುಪಿದೆ ಅನ್ನುವಷ್ಟರಲ್ಲಿ ಹೊಸ ಬಾಂಬ್ ಸಿಡಿದಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ರದ್ದು ಎನ್ನಲಾಗಿರೋ ಆಡಿಯೋ ಬಿಜೆಪಿಯಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ತುಳು ಭಾಷೆಯಲ್ಲಿ ಮಾತಾಡಿರೋ 47 ಸೆಕೆಂಡುಗಳ ಆಡಿಯೋದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಸ್ಫೋಟಕ ಮಾತುಗಳು ರೆಕಾರ್ಡ್ ಆಗಿವೆ. ಆಡಿಯೋದ ಮೊದಲ ಭಾಗದಲ್ಲೇ ರಾಜ್ಯ ಬಿಜೆಪಿಯ ಹಿರಿಯ ನಾಯಕರಾದ ಈಶ್ವರಪ್ಪ ಹಾಗೂ ಜಗದೀಶ್ ಶೆಟ್ಟರ್ರನ್ನು ಮೂಲೆಗುಂಪು ಮಾಡೋ ಮಾತು ಕೇಳಿಬಂದಿದೆ.

ಆಡಿಯೋ ಮಾಹಿತಿ ಪಡೆದುಕೊಂಡ ಅರುಣ್ ಸಿಂಗ್ ಇನ್ನು ಮತ್ತೊಂದು ಕಡೆ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಡಿಯೋ ಕ್ಲಿಪ್ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಆಪ್ತರ ಮೂಲಕ ಆಡಿಯೋ ಕ್ಲಿಪ್ ತರೆಸಿಕೊಂಡು ಅದರ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಆಡಿಯೋದಲ್ಲಿ ಹೇಳಿರೋದೇನು? ಯಾರಿಗೂ ಹೇಳೋಕೆ ಹೋಗ್ಬೇಡ. ಈಶ್ವರಪ್ಪ, ಜಗದೀಶ್ ಶೆಟ್ಟರ್ರ ಟೀಮನ್ನೇ ತೆಗೆದು ಹಾಕ್ತಾರೆ. ಎಲ್ಲಾ ಹೊಸ ಟೀಂ ಮಾಡ್ತಾ ಇದ್ದೇವೆ. ಯಾರ ಬಳಿಯೂ ಹೇಳೋಕೆ ಹೋಗ್ಬೇಡ. ಈಗ ಸದ್ಯಕ್ಕೆ ಯಾರಿಗೂ ಕೊಡ್ಬೇಡಿ ಅಂದಿದ್ದಾರೆ. ಏನೂ ತೊಂದರೆ ಆಗಲ್ಲ, ಹೆದರಬೇಡ ನಾವಿದ್ದೇವೆ ಎಂದು ಆಡಿಯೋದಲ್ಲಿ ಹೇಳಲಾಗಿದೆ. ಆದರೆ ಆಡಿಯೋ ಬಹಿರಂಗವಾಗುತ್ತಿದ್ದಂತೆಯೇ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಆ ಧ್ವನಿ ತಮ್ಮದಲ್ಲ ಎಂದು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ: ನಳಿನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ಆಡಿಯೋ ವೈರಲ್; ಶಿವಮೊಗ್ಗದಲ್ಲಿ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್