AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡ್ತಾರೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಲ್ಲದ ಕಿಡಿ

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ್, ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡುತ್ತಾರೆ ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯಗೆ ಮುಸ್ಲಿಮರು ಅಂದರೆ ಪ್ರೀತಿ. ಎಲ್ಲರ ಮೀಸಲಾತಿ ತೆಗೆದು ಅವರಿಗೆ ಕೊಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡ್ತಾರೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಲ್ಲದ ಕಿಡಿ
ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡ್ತಾರೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಲ್ಲದ ಕಿಡಿ
ಶಿವಕುಮಾರ್ ಪತ್ತಾರ್
| Edited By: |

Updated on:Dec 14, 2024 | 3:16 PM

Share

ಹುಬ್ಬಳ್ಳಿ, ಡಿಸೆಂಬರ್​​ 14: ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಮುಸ್ಲಿಮರೆಂದರೆ ಪ್ರೀತಿ. ಅವರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡುತ್ತಾರೆ ಎಂದು ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರಿಗೆ ಇವರು ಮುತ್ತು ಕೊಡುತ್ತಾರೆ, ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರಿಗೆ ಮುತ್ತು ಕೊಡುತ್ತಾರೆ, ಕುಕ್ಕರ್ ಬಾಂಬ್ ಇಟ್ಟವರಿಗೂ ಮುತ್ತು ಕೊಡುತ್ತಾರೆ. ಆದರೆ ಶಾಂತ ರೀತಿಯಿಂದ ಹೋರಾಟ ಮಾಡಿದ ನಮ್ಮ ಮೇಲೆ ಲಾಠಿ ಚಾರ್ಜ್ ಮಾಡುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಸ್ಸಿಮರು

ಎಲ್ಲರ ಮೀಸಲಾತಿ ತೆಗೆದು ಮುಸ್ಲಿಮರಿಗೆ ಕೊಡಲು ಹೊರಟಿದ್ದಾರೆ. ಹಸಿ ಗೋಡೆ ಮೇಲೆ ಹಳ್ಳು ಒಗೆಯುವ ಕೆಲಸವನ್ನು ಸಿಎಂ ಮಾಡಿದ್ದಾರೆ. ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಸ್ಸಿಮರು. ಮೀಸಲಾತಿ ಕೊಡುವುದು ಹೇಗೆ ಸಂವಿಧಾನ ವಿರೋಧಿಯಾಗುತ್ತೆ? ಈ ಬಗ್ಗೆ ಸಿಎಂ ಶ್ವೇತ ಪತ್ರ ಹೊರಡಿಸಲಿ ಎಂದಿದ್ದಾರೆ.

ಲಾಠಿ ಚಾರ್ಜ್ ಸಂಪೂರ್ಣ ಜವಾಬ್ದಾರಿ ಸಿದ್ದರಾಮಯ್ಯನವರದ್ದು

ಲಿಂಗಾಯತರಿಗೆ, ಒಕ್ಕಲಿಗರಿಗೆ, ಮರಾಠರಿಗೆ ಮೀಸಲಾತಿ ಕೊಡಲ್ಲ ಅಂತ ಘೋಷಣೆ ಮಾಡಲಿ. ಸಂವಿಧಾನದ ವಿರುದ್ಧವಾಗಿ ಮುಸ್ಲಿಮರಿಗೆ ಮೀಸಲಾತಿ ಕೊಡಲಾಗಿದೆ. ಅದರ ಬಗ್ಗೆ ಇವರು ಮಾತನಾಡುವುದಿಲ್ಲ. ಸಿಎಂ ಪ್ರಕಾರ ಮುಸ್ಲಿಮರು ಬಿಟ್ಟು ಬೇರೆ ಯಾರು ಏನು ಕೇಳಬಾರದು, ಏನೇ ಕೇಳಿದರೂ ಮುಸ್ಲಿಮರಷ್ಟೇ ಕೇಳಬೇಕು. ಕಾಂಗ್ರೆಸ್ ಸರ್ಕಾರ ನಮಗೆ ಮೀಸಲಾತಿ ಕೊಡುತ್ತೆ ಅಂತ ಗ್ಯಾರಂಟಿ ಇಲ್ಲ. ಲಾಠಿ ಚಾರ್ಜ್ ಸಂಪೂರ್ಣ ಜವಾಬ್ದಾರಿ ಸಿಎಂ ಸಿದ್ದರಾಮಯ್ಯನವರದ್ದು. ನಮ್ಮ ಸರ್ಕಾರ ಇದ್ದಾಗ ಇದಕ್ಕಿಂತ ಬಹಳ ಜನ ಕೂಡಿದ್ದರು. ಆವಾಗ ನಮ್ಮ ಸಿಎಂ ಮತ್ತು ಸಚಿವರು ಸೇರಿ ಒಂದು ಪರಿಹಾರ ಕಂಡುಹಿಡಿಯಲು ಮುಂದಾಗಿದ್ವಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಲ್ಲು ತೂರಿದವರು ನಮ್ಮ‌ ಸಮಾಜದವರಲ್ಲ, ಬಿಜೆಪಿ, ಆರ್‌ಎಸ್‌ಎಸ್​​ನವರು: ಕಾಶಪ್ಪನವರ್​ ಹೊಸ ಬಾಂಬ್​

ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಮುಸ್ಲಿಮರನ್ನು ಓಲೈಸುವುದನ್ನು ಬಿಟ್ಟರೆ ಏನು ಇಲ್ಲ. ಹಿಂದೂ ಸಮಾಜ ಅವರಿಗೆ ಮತ ಹಾಕಿದೆ ಎನ್ನುವ ಕಲ್ಪನೆ ಕೂಡ ಅವರಿಗಿಲ್ಲ. ಕೇವಲ ಮುಸ್ಲಿಂ ಸಮಾಜದ ಬಗ್ಗೆ ಕಾಳಜಿ ಇದೆ. ಮುಸ್ಲಿಂ ಸಮಾಜಕ್ಕೂ ಮಾಡಲಿ, ನಾವು ಬೇಡ ಅನ್ನಲ್ಲ, ಆದರೆ ಬೇರೆಯವರೂ ಇದಾರಲ್ಲ. ಎಲ್ಲಾ ದುಡ್ಡು ಮೀಸಲಾತಿ ಮುಸ್ಲಿಂ ಸಮಾಜಕ್ಕೆ ಕೊಡುವುದಾದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಶೇ. 36 ಒಬಿಸಿ ಮೀಸಲಾತಿ ಇದೆ. ಅದರಲ್ಲಿ ಶೇ. 23 ಮುಸ್ಲಿಂ ಸಮಾಜಕ್ಕಿದೆ. ಧರ್ಮ ಆಧಾರಿತ ಮೀಸಲಾತಿ ಇಲ್ಲ ಅಂತ ಅಂಬೇಡ್ಕರ್ ಸಂವಿಧಾನ ಹೇಳಿದೆ. ಶೈಕ್ಷಣಿಕ ಮತ್ತು ಸಾಮಾಜಿಕ ಆಧಾರದ ಮೇಲೆ ಮೀಸಲಾತಿ ಇದೆ. ಸಂಪೂರ್ಣ ಮುಸ್ಲಿಂ ಅಂತ ನಾಲ್ಕು ಪರ್ಸೆಂಟ್ ಕೆಟೆಗೆರಿ ಮಾಡಿದ್ದಾರೆ. ಕೆಟೆಗೆರಿ 2ಎ ದಲ್ಲಿ ಶೇ. 18 ರಷ್ಟು ಮುಸ್ಲಿಂಗೆ ನೀಡಿದ್ದಾರೆ. ಕೆಟೆಗೆರಿ 1ರಲ್ಲಿ ಮುಸ್ಲಿಂ ಸಮಾಜಕ್ಕೆ ನೀಡಿದ್ದಾರೆ. ಮುಸ್ಲಿಂಮರಿಗೆ ಶೇ. 23 ರಷ್ಟು ಕೊಟ್ಟರೆ ಬೇರೆಯವರು ಏನು ಮಾಡಬೇಕು? ಶೇ. 4 ರಷ್ಟು ಮೀಸಲಾತಿ ಸಂವಿಧಾನ ವಿರೋಧವಾಗಿ ಅದನ್ನ ತೆಗೆದು ಮರಾಠ, ಒಕ್ಕಲಿಗರು, ಲಿಂಗಾಯಿತರು, ರೆಡ್ಡಿಗೆ ಕೊಡಬೇಕು ಎಂದಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಹೋರಾಟ: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್: ಆದೇಶ ಪಾಲನೆ ಸರಿಯಾದ ಕ್ರಮವೆಂದ ಸಿಎಂ ಸಿದ್ದರಾಮಯ್ಯ

ರಾಹುಲ್ ಗಾಂಧಿ ಕೈಯಲ್ಲಿ ಸಂವಿಧಾನ ಹಿಡಿದುಕೊಂಡವರ ಹಾಗೆ ಬೈಬಲ್ ಹಿಡಿದುಕೊಂಡಿರುತ್ತಾರೆ. ಮಾತು ಎತ್ತಿದ್ರೆ ಕಾಂಗ್ರೆಸ್​ನವರು ಅಂಬೇಡ್ಕರ್ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ರಾಹುಲ್ ಗಾಂಧಿ ಮೆಲ್ನೋಟಕ್ಕೆ ಸಂವಿಧಾನದ ಪ್ರತಿ ಹಿಡಿದುಕೊಂಡಂತೆ ಮಾಡುತ್ತಾರೆ, ಆದರೆ ಅವರು ಬೈಬಲ್ ಹಿಡಿದಿರುತ್ತಾರೆ. ಅಂಬೇಡ್ಕರ್ ಸಂವಿಧಾನ ಅಂತ ಹೇಳಿಕೊಂಡು ಆಟ ಆಡುತ್ತಾರೆ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:13 pm, Sat, 14 December 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್