AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕಬಿನಿ ಬಲದಂಡೆ ನಾಲೆಗೆ ಉರುಳಿದ ಕಾರು -ಇಬ್ಬರು ವಕೀಲರು ಜಲಸಮಾಧಿ, ಈಜಿ ದಡ ಸೇರಿದ ಒಬ್ಬ ವಕೀಲ

ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಸಾಗರೆ ಗ್ರಾಮದ ಬಳಿ ಕಬಿನಿ ನಾಲೆಗೆ ಕಾರು ಉರುಳಿ ಬಿದ್ದು, ಇಬ್ಬರು ವಕೀಲರು ಜಲಸಮಾಧಿಯಾಗಿದ್ದಾರೆ.

ಮೈಸೂರು: ಕಬಿನಿ ಬಲದಂಡೆ ನಾಲೆಗೆ ಉರುಳಿದ ಕಾರು -ಇಬ್ಬರು ವಕೀಲರು ಜಲಸಮಾಧಿ, ಈಜಿ ದಡ ಸೇರಿದ ಒಬ್ಬ ವಕೀಲ
ಕಬಿನಿ ಬಲದಂಡೆ ನಾಲೆಗೆ ಉರುಳಿದ ಕಾರು, ಇಬ್ಬರು ವಕೀಲರು ಸಾವು, ಈಜಿ ದಡ ಸೇರಿದ ಒಬ್ಬ ವಕೀಲ
TV9 Web
| Edited By: |

Updated on:Jul 29, 2022 | 9:08 PM

Share

ಮೈಸೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಸಾಗರೆ ಗ್ರಾಮದ ಬಳಿ ಕಬಿನಿ ಬಲದಂಡೆ ನಾಲೆಗೆ (kabini canal) ಕಾರು ಉರುಳಿ ಬಿದ್ದು, ಇಬ್ಬರು ವಕೀಲರು (advocates) ಜಲಸಮಾಧಿಯಾಗಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ ವಕೀಲರು ಈಜಿಕೊಂಡು ಸುರಕ್ಷಿತವಾಗಿ ದಡ ಸೇರಿದ್ದಾರೆ (car mishap).

ಚಿಕ್ಕದೇವಮ್ಮ ದೇವಸ್ಥಾನದ ಬೆಟ್ಟದಿಂದ ಕಬಿನಿ ಜಲಾಶಯಕ್ಕೆ ಹೋಗುತ್ತಿದ್ದಾಗ ಅವಘಡ… ಹುಣಸೂರಿನ ವಕೀಲರಾದ ಅಶೋಕ್, ದಿನೇಶ್, ಶಂಕರ್ ಕಾರಿನಲ್ಲಿದ್ದ ವಕೀಲರು. ಇವರು ಚಿಕ್ಕದೇವಮ್ಮ ದೇವಸ್ಥಾನದ ಬೆಟ್ಟದಿಂದ ಕಬಿನಿ ಜಲಾಶಯಕ್ಕೆ ಹೋಗುತ್ತಿದ್ದರು. ಕಾರು ನಿಯಂತ್ರಣ ತಪ್ಪಿ ಕಬಿನಿ ಬಲದಂಡೆ ನಾಲೆಗೆ ಉರುಳಿ ಬಿದ್ದಿದೆ. ಈ ವೇಳೆ ವಕೀಲ ಅಶೋಕ್ ಈಜಿ ದಡ ಸೇರಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ದಿನೇಶ್ ಮತ್ತು ಶಂಕರ್ ಸಾವನ್ನಪ್ಪಿದ್ದಾರೆ. ಸ್ಥಳೀಯರ ನೆರವಿನಿಂದ ಕಾರು ಮತ್ತು ಮೃತದೇಹಗಳನ್ನು ಪೊಲೀಸರು ಮೇಲೆತ್ತಿದ್ದಾರೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:05 pm, Fri, 29 July 22

Follow Us
Web contact
Web contact

TV9 Kannada

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?