AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನಾ ಜಿಲ್ಲೆಗಳಲ್ಲಿ 4 ದಿನ ಸೀಲ್‌ಡೌನ್, ಲಾಕ್‌ಡೌನ್: ಕೊರೊನಾ ಫೀಲ್ಡ್​ ಕಮಾಂಡರ್​ಗಳಿಂದ ಕಠಿಣ ನಿರ್ಧಾರ

ಕೋಲಾರ: ದೇಶದ ಬಹುಭಾಗಗಳಲ್ಲಿ ಕೊರೊನಾ ಹೆಮ್ಮಾರಿ ಆರ್ಭಟ ಮುಂದುವರಿದೇ ಇದೆ. ಈ ಸಂದರ್ಭದಲ್ಲಿ ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಗಳನ್ನು ಹುರಿದುಂಬಿಸುತ್ತಾ ಕೊರೊನಾ ವಿರುದ್ಧ ಸಮರೋಪಾದಿಯಲ್ಲಿ ಹೋರಾಡಲು ಯುದ್ಧ ಕಮಾಂಡರ್​ಗಳಂತೆ ಕೆಲಸ ಮಾಡಿ ಎಂದು ಜಿಲ್ಲಾಧಿಕಾರಿಗಳಿಗೆ ಕರೆ ನೀಡಿದ್ದರು. ಅದರಿಂದ ಪ್ರೇರಿತರಾದವರಂತೆ ರಾಜ್ಯದಲ್ಲೂ ಒಬ್ಬೊಬ್ಬ ಜಿಲ್ಲಾಧಿಕಾರಿಯೂ ತಮ್ಮ ವ್ಯಾಪ್ತಿ ಪ್ರದೇಶಕ್ಕೆ ತಕ್ಕಂತೆ ಸಮರ್ಪಕ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಾರೆ. ಸೀಲ್‌ಡೌನ್ ಮತ್ತು ಲಾಕ್‌ಡೌನ್ ಬಿಗಿ ಕ್ರಮಗಳ ಮೊರೆಹೋಗಿದ್ದಾರೆ. ಕೋಲಾರ ಜಿಲ್ಲಾಧಿಕಾರಿ ಸೆಲ್ವಮಣಿ […]

ನಾನಾ ಜಿಲ್ಲೆಗಳಲ್ಲಿ 4 ದಿನ ಸೀಲ್‌ಡೌನ್, ಲಾಕ್‌ಡೌನ್: ಕೊರೊನಾ ಫೀಲ್ಡ್​ ಕಮಾಂಡರ್​ಗಳಿಂದ ಕಠಿಣ ನಿರ್ಧಾರ
ಲಾಕ್​ಡೌನ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 20, 2021 | 1:13 PM

Share

ಕೋಲಾರ: ದೇಶದ ಬಹುಭಾಗಗಳಲ್ಲಿ ಕೊರೊನಾ ಹೆಮ್ಮಾರಿ ಆರ್ಭಟ ಮುಂದುವರಿದೇ ಇದೆ. ಈ ಸಂದರ್ಭದಲ್ಲಿ ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಗಳನ್ನು ಹುರಿದುಂಬಿಸುತ್ತಾ ಕೊರೊನಾ ವಿರುದ್ಧ ಸಮರೋಪಾದಿಯಲ್ಲಿ ಹೋರಾಡಲು ಯುದ್ಧ ಕಮಾಂಡರ್​ಗಳಂತೆ ಕೆಲಸ ಮಾಡಿ ಎಂದು ಜಿಲ್ಲಾಧಿಕಾರಿಗಳಿಗೆ ಕರೆ ನೀಡಿದ್ದರು. ಅದರಿಂದ ಪ್ರೇರಿತರಾದವರಂತೆ ರಾಜ್ಯದಲ್ಲೂ ಒಬ್ಬೊಬ್ಬ ಜಿಲ್ಲಾಧಿಕಾರಿಯೂ ತಮ್ಮ ವ್ಯಾಪ್ತಿ ಪ್ರದೇಶಕ್ಕೆ ತಕ್ಕಂತೆ ಸಮರ್ಪಕ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಾರೆ. ಸೀಲ್‌ಡೌನ್ ಮತ್ತು ಲಾಕ್‌ಡೌನ್ ಬಿಗಿ ಕ್ರಮಗಳ ಮೊರೆಹೋಗಿದ್ದಾರೆ.

ಕೋಲಾರ ಜಿಲ್ಲಾಧಿಕಾರಿ ಸೆಲ್ವಮಣಿ ಅವರೂ ಸಹ ತಮ್ಮ ಜಿಲ್ಲೆಯಲ್ಲಿ ಕೊರೊನಾ ಮಿತಿಮೀರಿರುವುದನ್ನು ಗಮನದಲ್ಲಿಟ್ಟುಕೊಂಡು ಇಡೀ ಜಿಲ್ಲೆಯನ್ನು ನಾಲ್ಕು 4 ದಿನ ಕಂಪ್ಲೀಟ್ ಲಾಕ್‌ಡೌನ್ ಮಾಡಲು ನಿರ್ಧರಿಸಿದ್ದಾರೆ. ಅಂದಹಾಗೆ ರಾಜ್ಯ ಸರ್ಕಾರ ಈಗಾಗಲೇ ರಾಜ್ಯದಲ್ಲಿ ಸೆಮಿ ಲಾಕ್‌ಡೌನ್ ಜಾರಿಗೊಳಿಸಿದೆ. ಅದಷ್ಟಕ್ಕೇ ಕೊರೊನಾ ಕ್ರಿಮಿಯನ್ನು ಕಟ್ಟಿಹಾಕಲು ಸಾಧ್ಯವಾಗದು ಎಂದು ಪೂರ್ಣ ಪ್ರಮಾಣದಲ್ಲಿ ಇಡೀ ಜಿಲ್ಲೆಯನ್ನು ಬಂದ್​ ಮಾಡಲು ಜಿಲ್ಲಾಧಿಕಾರಿ ಸೆಲ್ವಮಣಿ ನಿರ್ಧರಿಸಿದ್ದಾರೆ.

ನಾಳೆಯಿಂದ ಮೇ 25ರವರೆಗೆ ಕೋಲಾರ ಜಿಲ್ಲೆಯನ್ನು ಕಂಪ್ಲೀಟ್ ಲಾಕ್‌ಡೌನ್ ಮಾಡುತ್ತಿರುವುದಾಗಿ ಕೋಲಾರದಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ ಇಂದು ಹೇಳಿದ್ದಾರೆ. ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ 21 ರಿಂದ 25 ರವರೆಗೆ ಕೋಲಾರದಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಣೆಯಾಗಿದೆ.

ನಾಳೆ ಶುಕ್ರವಾರ ಸಂಜೆ 6 ಗಂಟೆಯಿಂದ 25 ರ ಬೆಳಗ್ಗೆ 6 ಗಂಟೆಯವರೆಗೆ 4 ದಿನಗಳ ಕಾಲ ಕೋಲಾರ ಜಿಲ್ಲೆ ಸಂಪೂರ್ಣ ಲಾಕ್‌ಡೌನ್ ಆಗಲಿದೆ. ತರಕಾರಿ, ದಿನಸಿ ಅಂಗಡಿಗಳು ಸಂಪೂರ್ಣ ಬಂದ್ ಆಗಲಿವೆ. ತರಕಾರಿಗಳನ್ನು ತಳ್ಳುಗಾಡಿಯಲ್ಲಿ ಮಾರಾಟ ಮಾಡಬಹುದು. ಆಸ್ಪತ್ರೆ ಮತ್ತು ಹೋಟಲ್ ಪಾರ್ಸೆಲ್ ಇರುತ್ತದೆ. ಮತ್ತು ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿರುತ್ತದೆ. ಕಾನೂನು ಉಲ್ಲಂಘನೆ ಮಾಡಿದರೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಸೆಲ್ವಮಣಿ ಎಚ್ಚರಿಸಿದ್ದಾರೆ.

ಇನ್ನು ಅವಳಿ ಜಿಲ್ಲಾಯಾದ ಚಿಕ್ಕಬಳ್ಳಾಪುರದಲ್ಲಿಯೂ ಇಂತಹುದೇ ಕಠಿಣ ನಿಯಮ ಜಾರಿಯಲ್ಲಿದ್ದು ಇಡೀ ಚಿಕ್ಕಬಳ್ಳಾಪುರ ಜಿಲ್ಲೆ ಲಾಕ್‌ಡೌನ್ ಆಗಿದೆ.

ಬೆಳಗಾವಿ ನೇಗಿನಹಾಳ ಗ್ರಾಮ ಒಂದು ವಾರ ಸೀಲ್‌ಡೌನ್: ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲೂ ಮಹಾಮಾರಿ ಕೊರೊನಾದ ಅಬ್ಬರ ಹೆಚ್ಚಾಗ್ತಿದೆ. ಬೆಳಗಾವಿ ಜಿಲ್ಲೆಯ 331 ಹಳ್ಳಿಗಳಲ್ಲಿ ಮಹಾಮಾರಿ ಕೊರೊನಾ ಪತ್ತೆಯಾಗಿದೆ. ನೇಗಿಹಾಳ ಗ್ರಾಮದಲ್ಲಿ ಕೊರೊನಾಗೆ 6 ಜನ ಮೃತಪಟ್ಟಿದ್ದಾರೆ. ಬೈಲಹೊಂಗಲ ತಾಲೂಕಿನ ನೇಗಿಹಾಳದಲ್ಲಿ ಸೋಂಕಿತರು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮೇ 26ರವರೆಗೆ ಗ್ರಾಮ ಸೀಲ್‌ಡೌನ್ ಮಾಡಲು ನಿರ್ಧರಿಸಲಾಗಿದೆ.

ನೇಗಿನಹಾಳ ಗ್ರಾಮವೊಂದರಲ್ಲೇ ಕೊವಿಡ್ ಎರಡನೇ ಅಲೆಯಲ್ಲಿ 6 ಜನರು ಮೃತಪಟ್ಟಿದ್ದಾರೆ. ನೇಗಿನಹಾಳ ಗ್ರಾಮವೊಂದರಲ್ಲೇ 31 ಕೊವಿಡ್ ಪಾಸಿಟಿವ್ ಆ್ಯಕ್ಟೀವ್ ಕೇಸ್ಗಳಿವೆ. ಹೀಗಾಗಿ ನೇಗಿನಹಾಳ ಗ್ರಾಮ ಒಂದು ವಾರಗಳ ಕಾಲ ಸೀಲ್‌ಡೌನ್ ಮಾಡಲಾಗುತ್ತಿದೆ. ಮೇ 26ರವರೆಗೂ ನೇಗಿನಹಾಳ ಗ್ರಾಮ ಸೀಲ್‌ಡೌನ್‌ಗೆ ಗ್ರಾಮ ಪಂಚಾಯಿತಿಯಲ್ಲಿ ನಿರ್ಣಯ ಮಾಡಲಾಗಿದೆ.

ನೇಗಿನಹಾಳ ಗ್ರಾಮದ ಎಲ್ಲಾ ಅಂಗಡಿ ಮುಂಗಟ್ಟು, ಬಾರ್ & ರೆಸ್ಟೋರೆಂಟ್ ಬಂದ್ ಆಗಲಿವೆ. ಬೈಲಹೊಂಗಲ ತಾಲೂಕಿನ ದೊಡವಾಡ, ಬೆಳವಡಿ, ನೇಗಿನಹಾಳ ಗ್ರಾಮದಲ್ಲಿ 30ಕ್ಕೂ ಹೆಚ್ಚು ಕೇಸ್ಗಳು ಪತ್ತೆಯಾಗಿವೆ.

(as coronavirus aggravate district commissioner acting as field commanders against covid 19 declare 4 days lockdown seal down in the districts)

ಯುದ್ಧ ಕಮಾಂಡರ್‌ಗಳಂತೆ ಕೆಲಸ ಮಾಡಿ; ಜಿಲ್ಲಾ ಅಧಿಕಾರಿಗಳೇ ವೈರಸ್ ವಿರುದ್ಧ ಹೋರಾಟದ ಫೀಲ್ಡ್ ಕಮಾಂಡರ್​ಗಳು

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ