ಕೊರೊನಾ ಲಸಿಕೆ ಖರೀದಿಗಾಗಿ ಜಾಗತಿಕ ಟೆಂಡರ್ ಕೈಬಿಟ್ಟ ಕರ್ನಾಟಕ ಸರ್ಕಾರ: ಮುಂದೇನು?

corona vaccine purchase: ಹಣಕಾಸು ದಾಖಲೆಗಳೂ ಸೇರಿ ಪೂರೈಕೆ ಖಾತರಿಯ ದಾಖಲೆ ಹಾಗೂ ಲಸಿಕೆಯ ತಾಂತ್ರಿಕ ದಾಖಲೆಗಳನ್ನು ನಿಗದಿತ ಸಮಯದಲ್ಲಿ ಸಲ್ಲಿಸಲು ಎರಡು ಕಂಪನಿಗಳು ವಿಫಲಗೊಂಡವು. ಎರಡು ಸಲ ವರ್ಚುಯಲ್‌ ಸಭೆಗಳನ್ನು ಕರೆದರೂ ಎರಡೂ ಕಂಪನಿಗಳ ಅಧಿಕಾರಿಗಳು ಭಾಗವಹಿಸಲಿಲ್ಲ.

ಕೊರೊನಾ ಲಸಿಕೆ ಖರೀದಿಗಾಗಿ ಜಾಗತಿಕ ಟೆಂಡರ್ ಕೈಬಿಟ್ಟ ಕರ್ನಾಟಕ ಸರ್ಕಾರ: ಮುಂದೇನು?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​

Updated on: May 31, 2021 | 4:50 PM

ಬೆಂಗಳೂರು: ಜಾಗತಿಕವಾಗಿ ಕೋವಿಡ್‌ ಲಸಿಕೆ ಖರೀದಿ ಮಾಡಲು ಗ್ಲೋಬಲ್ ಟೆಂಡರ್ ಕರೆದಿದ್ದ ರಾಜ್ಯ ಸರ್ಕಾರ ಆ ಪ್ರಯತ್ನವನ್ನು ಕೈಬಿಟ್ಟಿದೆ. ಇ- ಟೆಂಡರ್‌ ಸಲ್ಲಿಸಿದ್ದ ಎರಡು ಕಂಪನಿಗಳು ಪೂರಕ ದಾಖಲೆ ಸಲ್ಲಿಸಲು ವಿಫಲವಾದ ಹಿನ್ನೆಲೆ ಟೆಂಡರ್ ಪ್ರಕ್ರಿಯೆನ್ನು ಸರ್ಕಾರ ಡ್ರಾಪ್ ಮಾಡಿದೆ. ಆದರ ಬದಲಿಗೆ ನೇರವಾಗಿ ಕಂಪನಿಗಳಿಂದಲೇ ಕೊವಿಡ್ ಲಸಿಕೆ ಖರೀದಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಕೋವಿಡ್‌ ಲಸಿಕೆ ಖರೀದಿಸಲು ಕರ್ನಾಟಕ ಸರ್ಕಾರ ಮೇ 15ರಂದು ಗ್ಲೋಬಲ್ ಟೆಂಡರ್ ಕರೆದಿತ್ತು. ಮುಂಬಯಿಯ ಬುಲಕ್‌ ಎಂಆರ್‌ಒ ಇಂಡಸ್ಟ್ರಿಯಲ್‌ ಸಪ್ಲೈ ಹಾಗೂ ಬೆಂಗಳೂರಿನ ತುಳಸಿ ಸಿಸ್ಟಮ್ಸ್‌ ಕಂಪನಿಗಳು ಟೆಂಡರ್‌ಗೆ ಅರ್ಜಿ ಸಲ್ಲಿಸಿದ್ದವು. ಈ ಎರಡೂ ಕಂಪನಿಗಳು ಲಸಿಕೆ ತಯಾರು ಮಾಡುವ ಕಂಪನಿಗಳಿಂದ ಲಸಿಕೆ ಪಡೆದು ರಾಜ್ಯಕ್ಕೆ ಪೂರೈಸುವುದಾಗಿ ಹೇಳಿದ್ದವು.

ಹಣಕಾಸು ದಾಖಲೆಗಳೂ ಸೇರಿ ಪೂರೈಕೆ ಖಾತರಿಯ ದಾಖಲೆ ಹಾಗೂ ಲಸಿಕೆಯ ತಾಂತ್ರಿಕ ದಾಖಲೆಗಳನ್ನು ನಿಗದಿತ ಸಮಯದಲ್ಲಿ ಸಲ್ಲಿಸಲು ಎರಡು ಕಂಪನಿಗಳು ವಿಫಲಗೊಂಡವು. ಎರಡು ಸಲ ವರ್ಚುಯಲ್‌ ಸಭೆಗಳನ್ನು ಕರೆದರೂ ಎರಡೂ ಕಂಪನಿಗಳ ಅಧಿಕಾರಿಗಳು ಭಾಗವಹಿಸಲಿಲ್ಲ. ರಷ್ಯಾ ಮೂಲದ ಸ್ಪುಟ್ನಿಕ್‌ ಲಸಿಕೆ ತಯಾರಿಸುವ ಕಂಪನಿಯ ಜತೆ ಮಾಡಿಕೊಂಡಿರುವ ಒಪ್ಪಂದದ ದಾಖಲೆಗಳನ್ನು ಸಲ್ಲಿಸುವಲ್ಲಿಯೂ ಎರಡು ಕಂಪನಿಗಳೂ ವಿಫಲವಾಗಿದ್ದವು.

ಈ ಹಿನ್ನೆಲೆಯಲ್ಲಿ ಜಾಗತಿಕ ಟೆಂಡರ್‌ ತಿರಸ್ಕೃತವಾದ ಕಾರಣ ಇದೀಗ ಮುಕ್ತ ಮಾರುಕಟ್ಟೆಯಲ್ಲಿ ನೇರವಾಗಿ ಲಸಿಕೆ ಖರೀದಿ ಮಾಡಲು ಕರ್ನಾಟಕ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಈ ಸಂಬಂಧ, ಈಗಾಗಲೇ ಜಾಗತಿಕ ಮಟ್ಟದಲ್ಲಿ ಲಸಿಕೆ ತಯಾರು ಮಾಡುವ ಎಲ್ಲಾ ಕಂಪನಿಗಳಿಗೆ ಸಂದೇಶ ರವಾನೆ ಮಾಡಲಾಗಿದೆ.

(as tender process incomplete karnataka goverment decided to purchase corona vaccine directly in open market)

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us