ಬಜೆಟ್‌ಗೂ ಮೊದಲೇ ಕಾಂಗ್ರೆಸ್ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

Asha workers protest: ಅತ್ತ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದರೆ ಇತ್ತ ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೂ ಪ್ರತಿಭಟನೆಯ ಬಿಸಿ ತಟ್ಟಲಿದೆ. ವಿಧಾನಮಂಡಲದ ಬಜೆಟ್ ಅಧಿವೇಶನದ ಸಂದರ್ಭದಲ್ಲಿಯೇ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್​​ನಲ್ಲಿ ಆಹೋರಾತ್ರಿ ಪ್ರತಿಭಟನೆ ನಡೆಸಲಿದ್ದಾರೆ.

ಬಜೆಟ್‌ಗೂ ಮೊದಲೇ ಕಾಂಗ್ರೆಸ್ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ
ಆಶಾ ಕಾರ್ಯಕರ್ತೆಯರು (ಸಂಗ್ರಹ ಚಿತ್ರ)
Follow us
| Updated By: ಗಣಪತಿ ಶರ್ಮ

Updated on: Feb 13, 2024 | 7:18 AM

ಬೆಂಗಳೂರು, ಫೆಬ್ರವರಿ 13: ಇದೇ 16ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ (Karnataka Budget) ಮಂಡನೆ ಮಾಡಲಿದ್ದು, ಇದಕ್ಕೂ ಮೊದಲೇ ಕಾಂಗ್ರೆಸ್ ಸರ್ಕಾರಕ್ಕೆ (Congress Government) ಪ್ರತಿಭಟನೆಯ ಬಿಸಿ ತಟ್ಟಲಿದೆ. ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಾವಿರಾರು ಅಂಗನವಾಡಿ, ಆಶಾ ಕಾರ್ಯಕರ್ತೆಯರು (Asha Workers) ಪ್ರತಿಭಟನೆ ನಡೆಸಲಿದ್ದಾರೆ. ಸರ್ಕಾರ ರಚನೆಗೂ ಮುನ್ನ ನೀಡಿದ 6 ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಎರಡು ದಿನಗಳ ಕಾಲ ಅಹೋರಾತ್ರಿ ಧರಣಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇಂದು (ಮಂಗಳವಾರ) ಬೆಳಗ್ಗೆ 11 ಗಂಟೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಆರಂಭವಾಗಲಿದೆ. ರಾಜ್ಯದ ಮೂಲೆ ಮೂಲೆಯಿಂದ ಪ್ರತಿಭಟನಾಕಾರರು ಆಗಮಿಸಲಿದ್ದಾರೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗಳೇನು?

  • ಕಳೆದ ಎಂಟು ವರ್ಷಗಳಿಂದ ದುಡಿದಷ್ಟು ಪ್ರೋತ್ಸಾಹ ಧನ ಸಿಗದೇ ಆಗುತ್ತಿರುವ ವಂಚನೆ ತಡೆಗಟ್ಟಲು ಆಶಾ ಪೇಮೆಂಟ್ ಪ್ರಕ್ರಿಯೆಯಿಂದ ಆರ್​ಸಿಎಚ್ ಪೋರ್ಟಲ್ ಅನ್ನು ಡೀಲಿಂಕ್ ಮಾಡಬೇಕು.
  • ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 15,000 ರೂ. ಒಟ್ಟು ಪ್ರೋತ್ಸಾಹ ಧನ ನೀಡಬೇಕು.
  • ಮೊಬೈಲ್ ಕೆಲಸಗಳನ್ನು ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಿ. ಅಥವಾ ಮೊಬೈಲ್, ಡಾಟಾ ಒದಗಿಸಿ. ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹ ಧನ ನಿಗದಿ ಮಾಡಿ. ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲವೋ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿ

ಈಗಾಗಲೇ ಇಲಾಖಾ ಸಚಿವರು, ಉನ್ನತ ಅಧಿಕಾರಿಗಳ ಸಭೆಯಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿ ಪ್ರಸ್ತಾವನೆ ಕಳುಹಿಸಿರುವ, ಸರ್ಕಾರದಿಂದ ಆದೇಶಿಸಬೇಕಾದ ಬೇಡಿಕೆಗಳು ಹೀಗಿವೆ;

  • ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 2000 ರೂ.ನಷ್ಟು ಗೌರವಧನವನ್ನು ಹೆಚ್ಚಿಗೆ ಮಾಡಬೇಕು.
  • 60 ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ 3 ಲಕ್ಷ ರೂ.ಗೆ ಹೆಚ್ಚಿಸುವುದು.
  • ತೀವ್ರವಾದ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ 3 ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರುಟೀನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಬೇಕು.
  • ಸುವರ್ಣ ಆರೋಗ್ಯ ಟ್ರಸ್ಟ್‌ ನ ಆರೋಗ್ಯ ವಿಮಾ ಯೋಜನೆಯಂತೆ 5 ಲಕ್ಷ ರೂ. ವರೆಗೆ ವಿವಿಧ ಕಾಯಿಲೆಗಳಿಗೆ ಉಚಿತ ಚಿಕಿತ್ಸೆಯನ್ನು ಆಶಾ ಮತ್ತು ಆಶಾ ಕುಟುಂಬಕ್ಕೆ ನೀಡಬೇಕು.
  • ಕಳೆದ 2 ವರ್ಷದಿಂದ ನೀಡದಿರುವ ಸಮವಸ್ತ್ರಗಳನ್ನು ಒದಗಿಸಲು ಕೂಡಲೆ ಕ್ರಮ ಕೈಗೊಳ್ಳಬೇಕು.
  • ಕಳೆದ 4 ವರ್ಷದಿಂದ ನೀಡದಿರುವ ಪ್ರತೀ ವರ್ಷ ನೀಡುವ ಡೈರಿಯನ್ನು ನಿಗದಿತ ಸಮಯಕ್ಕೆ ಒದಗಿಸಬೇಕು.

ಇದನ್ನೂ ಓದಿ: ಸ್ಪೀಕರ್ ಖಾದರ್‌ಗೆ ಹೊಸ ಐಶಾರಾಮಿ ಕಾರು: 360 ಡಿಗ್ರಿ ಕ್ಯಾಮೆರಾ, ವಿಶೇಷ LED ಲೈಟ್, ಬೆಲೆ ಎಷ್ಟು ಗೊತ್ತಾ?

ಆದ್ಯತೆಯ ಮೇರೆಗೆ ಸರ್ಕಾರದಿಂದ ಈಡೇರಬೇಕಾದ ಬೇಡಿಕೆಗಳು

  1. ಕಳೆದ ಹಲವಾರು ವರ್ಷಗಳಿಂದ ಆರ್​​ಸಿಎಚ್ ಪೋರ್ಟಲ್‌ ನ ವಿವಿಧ ಸಮಸ್ಯೆಗಳ ಕಾರಣಗಳಿಂದ ಬಾಕಿಯಿರುವ ಪ್ರೋತ್ಸಾಹಧನವನ್ನು ನೀಡಲು ಕ್ರಮಕೈಗೊಳ್ಳಬೇಕು. 2019-21ರ ವರೆಗಿನ ಕೋವಿಡ್ ವಿಶೇಷ ಪ್ರೋತ್ಸಾಹ ಧನ ಹಾಗೂ ನಾನ್ ಎಂಸಿಟಿಎಸ್ ಹಣ 2000 ರೂ. ಅನ್ನು ಎಲ್ಲಾ ಆಶಾಗಳಿಗೆ ಪಾವತಿಸಬೇಕು.
  2. ಆಶಾ ಕಾರ್ಯಕ್ರಮದಲ್ಲಿ ಫೆಸಿಲಿಟೇಟರ್ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಅವರ ಹುದ್ದೆಗೆ ತಕ್ಕಂತೆ ಮಾಸಿಕ ವೇತನ, ಪ್ರಯಾಣ ಭತ್ಯೆ ಇತ್ಯಾದಿಗಳನ್ನು ಹೆಚ್ಚಿಸಬೇಕು. ಆಶಾಗಳ ಸಂಖ್ಯೆಗೆ ಅನುಗುಣವಾಗಿ ಆಶಾ ಸುಗಮಗಾರರನನ್ನು ಹಳ್ಳಿ ಮತ್ತು ನಗರ ಪ್ರದೇಶಗಳಿಗೂ ನೇಮಿಸಬೇಕು.
  3. ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ ವೇತನ, ಗ್ರಾಜ್ಯುಟಿ, ಪಿಎಫ್-ಇಎಸ್‌ಐ ಸೌಲಭ್ಯ ನೀಡಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ