AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಕ್ ಫ್ರಮ್ ಹೋಮ್ ಪದ್ಧತಿಗೆ ಮಾನ್ಯತೆ ನೀಡುವಂತೆ ಮನವಿ ಮಾಡಲಾಗಿದೆ: ಸಚಿವ ಅಶ್ವತ್ಥ್ ನಾರಾಯಣ ಮಾಹಿತಿ

Work from Home: ಕೇಂದ್ರದ ಐಟಿ ಸಚಿವರು 24ನೇ ಟೆಕ್ ಸಮ್ಮಿಟ್​ನಲ್ಲಿದ್ದಾರೆ. ಐಟಿ ಇಲಾಖೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುತ್ತಿದೆ. ಪಿಪಿಪಿ ಮಾಡೆಲ್​ನಲ್ಲಿ ಹಲವು ಯೋಜನೆ ತರಲು ಚಿಂತನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವರ್ಕ್ ಫ್ರಮ್ ಹೋಮ್ ಪದ್ಧತಿಗೆ ಮಾನ್ಯತೆ ನೀಡುವಂತೆ ಮನವಿ ಮಾಡಲಾಗಿದೆ: ಸಚಿವ ಅಶ್ವತ್ಥ್ ನಾರಾಯಣ ಮಾಹಿತಿ
ಅಶ್ವತ್ಥ್ ನಾರಾಯಣ
TV9 Web
| Edited By: |

Updated on: Nov 02, 2021 | 8:27 PM

Share

ದೆಹಲಿ: ಪ್ರಸ್ತುತ ವರ್ಕ್ ಫ್ರಮ್ ಹೋಮ್ ಪದ್ಧತಿ ಹೆಚ್ಚಾಗಿದೆ. ಹೀಗಾಗಿ ವರ್ಕ್ ಫ್ರಮ್​ ಹೋಮ್​ಗೆ ಮಾನ್ಯತೆ ನೀಡುವಂತೆ ಮನವಿ ಮಾಡಲಾಗಿದೆ. ಕೇಂದ್ರ ಸಚಿವರ ಭೇಟಿ ವೇಳೆ ಈ ಬಗ್ಗೆ ಮನವಿ ಮಾಡಿದ್ದೇನೆ ಎಂದು ದೆಹಲಿಯಲ್ಲಿ ಐಟಿ-ಬಿಟಿ ಸಚಿವ ಅಶ್ವತ್ಥ್ ನಾರಾಯಣ ಇಂದು (ನವೆಂಬರ್ 2) ಹೇಳಿಕೆ ನೀಡಿದ್ದಾರೆ. ಕೇಂದ್ರದ ಐಟಿ ಸಚಿವರು 24ನೇ ಟೆಕ್ ಸಮ್ಮಿಟ್​ನಲ್ಲಿದ್ದಾರೆ. ಐಟಿ ಇಲಾಖೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುತ್ತಿದೆ. ಪಿಪಿಪಿ ಮಾಡೆಲ್​ನಲ್ಲಿ ಹಲವು ಯೋಜನೆ ತರಲು ಚಿಂತನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸ್ಟಾರ್ಟ್​ಅಪ್​ಗಳಿಗೆ ಸಾಲ ನೀಡುವ ಬಗ್ಗೆ ಹೊಸ ಯೋಜನೆ ಬಗ್ಗೆ ವಿಚಾರ ಮಾಡಲಾಗಿದೆ. ಯೋಜನೆ ಬಗ್ಗೆ ಕೇಂದ್ರ ಸರ್ಕಾರದ ಜತೆ ಚರ್ಚೆ ನಡೆಸಲಾಗಿದೆ. ಆರಂಭದಲ್ಲಿ ಬಂಡವಾಳ ಹೂಡಿಕೆಗೆ ಸರ್ಕಾರದಿಂದ ನೆರವು ನೀಡಲಾಗುತ್ತದೆ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ನೂತನ ಶಿಕ್ಷಣ ನೀತಿ ಬಗ್ಗೆ ಕೇಂದ್ರ ಶಿಕ್ಷಣ ಸಚಿವರ ಜತೆಗೆ ಚರ್ಚಿಸಿದ್ದೇನೆ. ರಾಜ್ಯಕ್ಕೆ ಬಂದು ಉನ್ನತ ಮಟ್ಟದ ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ತರಾತುರಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವುದಿಲ್ಲ. ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ ನಡೆಯುತ್ತಿದೆ ಎಂದು ಅಶ್ವತ್ಥ್​ ನಾರಾಯಣ ತಿಳಿಸಿದ್ದಾರೆ. ಜ್ಞಾನದ ಜತೆಗೆ ಉದ್ಯಮಶೀಲತೆ ಹೆಚ್ಚಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಮಾಡಿದೆ. ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಜತೆ ಚರ್ಚಿಸಿದ ಬಳಿಕ ನಿರ್ಧಾರ ಮಾಡಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಇತಿಹಾಸ ತಿರುಚುವ ಪ್ರಯತ್ನವಲ್ಲ. ಎನ್​ಇಪಿಯಿಂದ ಆಗುವ ಸಮಸ್ಯೆ ಏನೆಂದು ಸರಿಯಾಗಿ ಹೇಳ್ತಿಲ್ಲ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಕರ್ನಾಟಕ ಉಪಚುನಾವಣೆ ಫಲಿತಾಂಶದ​ ಬಗ್ಗೆ ಅಶ್ವತ್ಥ್​ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ. ಸಿಂದಗಿಯಲ್ಲಿ ಜನರು ಪಕ್ಷವನ್ನ ನೋಡಿ ಮತ ಹಾಕಿದ್ದಾರೆ. ಹಾನಗಲ್‌ ಕ್ಷೇತ್ರದಲ್ಲಿನ ಗೆಲುವು ಅದು ವ್ಯಕ್ತಿಗತ ಗೆಲುವು. ಹಾನಗಲ್‌ನಲ್ಲಿ ಅದು ಶ್ರೀನಿವಾಸ್ ಮಾನೆಗೆ ಸಿಕ್ಕ ಗೆಲುವು. ಹಾನಗಲ್​​ನಲ್ಲಿ ಕಾಂಗ್ರೆಸ್​ ಪಕ್ಷದ ಗೆಲುವು ಅಲ್ಲ ಎಂದು ಅಶ್ವತ್ಥ್​ ನಾರಾಯಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬಿಟ್ ಕಾಯಿನ್ ದಂಧೆ ವಿಚಾರವಾಗಿ ಅವರು ಮಾತನಾಡಿದ್ದಾರೆ. ಬಿಟ್ ಕಾಯಿನ್ ದಂಧೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಮರೆಮಾಚುವ ಉದ್ದೇಶ ಇಲ್ಲ, ದಾಖಲೆ ಇದ್ರೆ ನೀಡಲಿ. ತನಿಖಾ ಸಂಸ್ಥೆಗಳಿಗೆ ತನಿಖೆ ನಡೆಸಲು ಅವಕಾಶ ಇದೆ ಎಂದು ಅಶ್ವತ್ಥ್​ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಬಿಟ್ ಕಾಯಿನ್ ದಂಧೆ: ಸಿದ್ದರಾಮಯ್ಯ, ಸೋಮಣ್ಣ ಆರೋಪ ಪ್ರತ್ಯಾರೋಪ

ಇದನ್ನೂ ಓದಿ: ಹಾನಗಲ್, ಸಿಂದಗಿ ಉಪಚುನಾವಣೆ ಅಂತಿಮ ಫಲಿತಾಂಶ: ಯಾರಿಗೆ ಎಷ್ಟು ಅಂತರದ ಗೆಲುವು? ಇಲ್ಲಿದೆ ವಿವರ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ