Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರಗ ಕುಟುಂಬದ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಘಟನೆಗೆ ಕಾರಣರಾದ ಪೊಲೀಸರ ವಿರುದ್ಧ ಕ್ರಮ ಜರುಗಿಸಿ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದರು

ಕೊರಗ ಕುಟುಂಬದ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 28, 2021 | 10:00 PM

ಬೆಂಗಳೂರು: ಉಡುಪಿ ಜಿಲ್ಲೆ ಬ್ರಹ್ಮಾವರ ತಾಲ್ಲೂಕಿನ ಕೋಟ ಗ್ರಾಮದಲ್ಲಿ ಕೊರಗ ಕುಟುಂಬದ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಬೆಂಗಳೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಗರ ಕಾಲೋನಿಯಲ್ಲಿ ಈ ಘಟನೆ ನಡೆದಿತ್ತು. ಮದುವೆ ಸಮಾರಂಭಕ್ಕೆ ನುಗ್ಗಿದ್ದ ಪೊಲೀಸರು ಮದುಮಗನ ಸಹಿತ ಕೊರಗ‌ ಕುಟುಂಬದ ಮೇಲೆ ಹಲ್ಲೆ ಮಾಡಿದ್ದರು. ಘಟನೆ ಕುರಿತು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ ಹಾಗೂ ಪಶ್ಚಿಮ ವಲಯ ಐಜಿಪಿಯಂದಿಗೆ ಸಚಿವರು ಚರ್ಚಿಸಿದರು. ಘಟನೆಗೆ ಕಾರಣರಾದ ಪೊಲೀಸರ ವಿರುದ್ಧ ಕ್ರಮ ಜರುಗಿಸಿ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದರು. ಘಟನಾ ಸ್ಥಳಕ್ಕೆ ಬುಧವಾರ (ಡಿ.29) ಸಚಿವರು ಭೇಟಿ ನೀಡಲಿದ್ದಾರೆ.

ದೌರ್ಜನ್ಯ ಎಸಗಿದ ಪೊಲೀಸ್ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮದ ಭರವಸೆ

ಬ್ರಹ್ಮಾವರ ತಾಲ್ಲೂಕಿನ ಕೋಟ ಪೊಲೀಸ್ ಠಾಣೆಯ ಪೊಲೀಸರು ಕೊರಗ ಜನಾಂಗಕ್ಕೆ ಸೇರಿದವರ ಮದುವೆ ಸಂದರ್ಭದಲ್ಲಿ ನಡೆಸಿರುವ ದೌರ್ಜನ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಎಎಸ್​ಐ ಸಂತೋಷ್ ಸೇರಿದಂತೆ ಐವರು ಸಿಬ್ಬಂದಿಗೆ ಮುಂದಿನ ಸೂಚನೆಯವರೆಗೆ ಕರ್ತವ್ಯಕ್ಕೆ ಹಾಜರಾಗದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ ಸೂಚನೆ ನೀಡಿದ್ದಾರೆ. ಕೊರಗ ಜನಾಂಗದ ಮದುವೆ ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘಿಸಿದರು ಎನ್ನುವ ಕಾರಣಕ್ಕೆ ಪೊಲೀಸರು ಹಿಗ್ಗಾಮುಗ್ಗಾ ಲಾಠಿ ಬೀಸಿದ್ದರು. ಘಟನೆ ಬಗ್ಗೆ ಡಿವೈಎಸ್​ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಪ್ರಕರಣ ಸಂಬಂಧ ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಸ್​ಪಿ ಎನ್.ವಿಷ್ಣುವರ್ಧನ, ವಿಚಾರಣೆ ಮುಗಿಯುವ ತನಕ ಕೋಟ ಠಾಣೆಯ ಪೊಲೀಸರನ್ನು ಬೇರೆಡೆಗೆ ನಿಯೋಜಿಸಲಾಗುವುದು. ಉಡುಪಿ ಡಿವೈಎಸ್​ಪಿ ಪ್ರಕರಣದ ತನಿಖೆ ಆರಂಭಿಸಿದ್ದಾರೆ. ನಾಳೆ ಸಂಜೆಯ ಒಳಗೆ ತನಿಖೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ರಾತ್ರಿ 10 ಗಂಟೆಯ ನಂತರವೂ ಲೌಡ್​ಸ್ಪೀಕರ್ ಚಾಲು ಇದ್ದ ಕಾರಣ ಸ್ಥಳೀಯರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಿಬ್ಬಂದಿಯೊಬ್ಬರು ಶಬ್ದ ಕಡಿಮೆ ಮಾಡುವಂತೆ ಸೂಚನೆ ನೀಡಿದ್ದರು. ಮತ್ತೆ 11 ಗಂಟೆಗೆ ದೂರು ಬಂದ ಕಾರಣ ಪಿಎಸ್ಐ ಸ್ಥಳಕ್ಕೆ ಭೇಟಿ‌ ನೀಡಿದ್ದರು. ಹಲ್ಲೆ ನಡೆದಿರುವುದು ನಿಜವಾಗಿದ್ದಲ್ಲಿ ಸಿಬ್ಬಂದಿ ವಿರುದ್ಧ ಖಂಡಿತ ಕ್ರಮ ಕೈಗೊಳ್ಳುತ್ತೇವೆ. ಇಲಾಖೆ ಬಗ್ಗೆ ನಂಬಿಕೆ ಇರಲಿ ಎಂದು ವಿನಂತಿಸಿದರು.

ಇದನ್ನೂ ಓದಿ: ಮದುವೆ ಮನೆಯಲ್ಲಿ ಲಾಠಿಚಾರ್ಜ್: ಕೊರಗರ ಮೇಲೆ ದೌರ್ಜನ್ಯ ಎಸಗಿದ ಪೊಲೀಸ್ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮದ ಭರವಸೆ ಇದನ್ನೂ ಓದಿ: Sericulture: ನವೆಂಬರ್​ ಮಳೆ ಪರಿಣಾಮ:​ ಕೋಲಾರದಲ್ಲಿ ಚಿನ್ನಕ್ಕಿಂತ ರೇಷ್ಮೆಯೇ ದುಬಾರಿ

Published On - 9:48 pm, Tue, 28 December 21

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ