AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಧರಿಸದೇ ಕ್ರಿಕೆಟ್ ಆಡುತ್ತಿದ್ದವರ ಫೋಟೊ ತೆಗೆಯಲು ಯತ್ನಿಸಿದ ಪಿಡಿಒ ಮೇಲೆ ಹಲ್ಲೆ

ಬದ್ರಿಯಾನಗರ ಮೈದಾನದಲ್ಲಿ ಮಾಸ್ಕ್​ ಹಾಕದೆ ಆಟವಾಡುತ್ತಿದ್ದವರನ್ನು ಗಮನಿಸಿದ ಪಿಡಿಒ ರಾಜೇಂದ್ರ ಶೆಟ್ಟಿ ಮಾಸ್ಕ್​ ಧರಿಸದಿದ್ದನ್ನು ಪ್ರಶ್ನಿಸಿದ್ದಾರೆ. ಬದ್ರಿಯಾನಗರ ಕ್ರಿಕೆಟ್ ಮೈದಾನದಲ್ಲಿ ಗುಂಪು ಸೇರಿದ್ದ ಯುವಕರಿಗೆ ಮಾಸ್ಕ್ ಹಾಕುವಂತೆ ಸೂಚಿಸಿದ್ದಾರೆ.

ಮಾಸ್ಕ್ ಧರಿಸದೇ ಕ್ರಿಕೆಟ್ ಆಡುತ್ತಿದ್ದವರ ಫೋಟೊ ತೆಗೆಯಲು ಯತ್ನಿಸಿದ ಪಿಡಿಒ ಮೇಲೆ ಹಲ್ಲೆ
ಸಾಂದರ್ಭಿಕ ಚಿತ್ರ
guruganesh bhat
|

Updated on: May 25, 2021 | 7:53 PM

Share

ಮಂಗಳೂರು: ಮಾಸ್ಕ್​ ಧರಿಸದೇ ಕ್ರಿಕೆಟ್ ಆಡುತ್ತಿದ್ದವರನ್ನು ಪ್ರಶ್ನಿಸಿದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೋರ್ವರ ಮೇಲೆ ಇಬ್ಬರು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಬದ್ರಿಯಾನಗರದಲ್ಲಿ ನಡೆದಿದೆ. ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಪಿಡಿಒ ರಾಜೇಂದ್ರ ಶೆಟ್ಟಿ ಅವರ ಮೇಲೆ ಇಬ್ಬರು ಹಲ್ಲೆ ನಡೆಸಿದ್ದಾರೆ.

ಬದ್ರಿಯಾನಗರ ಮೈದಾನದಲ್ಲಿ ಮಾಸ್ಕ್​ ಹಾಕದೆ ಆಟವಾಡುತ್ತಿದ್ದವರನ್ನು ಗಮನಿಸಿದ ಪಿಡಿಒ ರಾಜೇಂದ್ರ ಶೆಟ್ಟಿ ಮಾಸ್ಕ್​ ಧರಿಸದಿದ್ದನ್ನು ಪ್ರಶ್ನಿಸಿದ್ದಾರೆ. ಬದ್ರಿಯಾನಗರ ಕ್ರಿಕೆಟ್ ಮೈದಾನದಲ್ಲಿ ಗುಂಪು ಸೇರಿದ್ದ ಯುವಕರಿಗೆ ಮಾಸ್ಕ್ ಹಾಕುವಂತೆ ಸೂಚಿಸಿದ್ದಾರೆ. ಮಾಸ್ಕ್ ಹಾಕದೇ ಗುಂಪು ಸೇರಿದ್ದನ್ನು ಪ್ರಶ್ನಿಸಿ ತಮ್ಮ ಮೊಬೈಲ್​ನಲ್ಲಿ ಫೋಟೋ ತೆಗೆಯಲು ಮುಂದಾಗಿದ್ದಾರೆ.

ಇದರಿಂದ ಸಿಟ್ಟಿಗೆದ್ದ ಕ್ರಿಕೆಟ್ ಆಡುತ್ತಿದ್ದವರ ಇಬ್ಬರು ಪುದುಗ್ರಾಮದ ಕುಂಪಲ ಮಜಲು ನಿವಾಸಿಗಳು ಪಿಡಿಒ ರಾಜೇಂದ್ರ ಶೆಟ್ಟಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆಯ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊವಿಡ್ ವಾರಿಯರ್ಸ್​ ಮೇಲೆ ಹಲ್ಲೆಗೆ ಕಠಿಣ ಶಿಕ್ಷೆ ಕೊವಿಡ್ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. 5 ವರ್ಷ ಜೈಲು, 1 ಲಕ್ಷ ರೂಪಾಯಿ ದಂಡ ವಿಧಿಸುತ್ತೇವೆ. ಯಾರೂ ಸಹ ವಾರಿಯರ್ಸ್ ಮೇಲೆ ಹಲ್ಲೆ ಮಾಡಬಾರದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ನಿನ್ನೆ (ಮೇ 24) ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಕೆಲ ತಜ್ಞ ವೈದ್ಯರು ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಇನ್ಮುಂದೆ ವೈದ್ಯರ ಕೆಲಸದ ಪಾಳಿಯನ್ನು ನಮಗೆ ಕಳುಹಿಸಿಕೊಡಬೇಕು. ನಾನು ಭೇಟಿ ನೀಡಿದ್ದ 12 ಜಿಲ್ಲೆಗಳಲ್ಲಿ ಚಿಕಿತ್ಸೆಗೆ ವೈದ್ಯರು ಹಿಂದೇಟು ಹಾಕಿರುವ ಕುರಿತು ದೂರುಗಳು ಕೇಳಿಬಂದಿದೆ. ಕಿರಿಯ ವೈದ್ಯರಿಂದ ಕೆಲಸ ಮಾಡಿಸಿ ಹಿರಿಯ ವೈದ್ಯರು ಗೈರು ಹಾಜರಾಗುತ್ತಿದ್ದಾರೆ ಎಂದು ಡಾ.ಕೆ. ಸುಧಾಕರ್ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕೊವಿಡ್​ನಿಂದ ಸಾಯುವ ಭಯ ಇದೆ ಎಂದು ನಿರೀಕ್ಷಣಾ ಜಾಮೀನು ನೀಡಬಾರದು: ಸುಪ್ರೀಂಕೋರ್ಟ್

ಸೋಂಕಿತರು ಹೋಂ ಕ್ವಾರಂಟೈನ್ ಆಗುವಂತಿಲ್ಲ, ಕೊವಿಡ್​ ಕೇರ್​ ಸೆಂಟರ್​ಗೆ ದಾಖಲಾಗಲೇಬೇಕು: ಮಹಾರಾಷ್ಟ್ರದಲ್ಲಿ ನೂತನ ನಿಯಮ

(Assault on PDO attempting to remove photos of cricketers playing mask without wearing mask in Mangaluru)

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ