AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಮೇಲೆ ಪತಿಯಿಂದ ಹಲ್ಲೆ: ತಡೆಯಲು ಬಂದ ಪೊಲೀಸರ ಕೈಕಚ್ಚಿ ಹಲ್ಲೆಗೆ ಯತ್ನ

ಪತ್ನಿ ಮೇಲೆ ಹಲ್ಲೆ ಮಾಡಿದ್ದ ಪತಿಯನ್ನ ಹಿಡಿಯಲು ಯತ್ನಿಸಿದಾಗ ಪೊಲೀಸರ ಕೈಕಚ್ಚಿ ಹಲ್ಲೆಗೆ ಯತ್ನಿಸಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​ ನಡೆದಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಆರೋಪದಡಿ ಪತಿಯನ್ನು ಬಂಧಿಸಲಾಗಿದೆ. ಸದ್ಯ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. 

ಪತ್ನಿ ಮೇಲೆ ಪತಿಯಿಂದ ಹಲ್ಲೆ: ತಡೆಯಲು ಬಂದ ಪೊಲೀಸರ ಕೈಕಚ್ಚಿ ಹಲ್ಲೆಗೆ ಯತ್ನ
ಬಂಧಿತ ನವೀನ್ ಕುಮಾರ್
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Mar 25, 2024 | 4:19 PM

Share

ನೆಲಮಂಗಲ, ಮಾರ್ಚ್​ 25: ಪತ್ನಿ ಮೇಲೆ ಹಲ್ಲೆ ಮಾಡಿದ್ದ ಪತಿಯನ್ನ ಹಿಡಿಯಲು ಯತ್ನಿಸಿದಾಗ ಪೊಲೀಸರ (police) ಕೈಕಚ್ಚಿ ಹಲ್ಲೆಗೆ ಯತ್ನಿಸಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​ ನಡೆದಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಆರೋಪದಡಿ ಪತಿ ನವೀನ್ ಕುಮಾರ್ (30) ಎಂಬಾತನನ್ನು ಬಂಧಿಸಲಾಗಿದೆ. ಪತ್ನಿ ರಶ್ಮಿ ಮೇಲೆ ಪತಿ ನವೀನ್ ಕುಮಾರ್ ಕ್ಷುಲ್ಲಕ ಕಾರಣಕ್ಕಾಗಿ ಕಾರಿನ ಗ್ಲಾಸ್ ಹೊಡೆದು ಹಲ್ಲೆ ಮಾಡಿದ್ದಾನೆ. ಈ ವೇಳೆ ಪತ್ನಿ ರಶ್ಮಿ 112ಗೆ ತುರ್ತು ಕರೆ ಮಾಡಿದ್ದಾರೆ. ಕರೆ ಆಧರಿಸಿ 112 ಇಆರ್​ಎಸ್​ಎಸ್​​ ಮಹಾಂತೇಶ್ ಗುಣಕಿ ಹಾಗೂ ಚಂದ್ರು ಎಂಬುವವರು ಬಂದಿದ್ದಾರೆ. ಅವರ ಮೇಲೂ ಹಲ್ಲೆಗೆ ಯತ್ನಿಸಲಾಗಿದೆ. ಸದ್ಯ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಗ್ರಾಮಸ್ಥರ ಮುಂದೆಯೇ ಮಚ್ಚಿನಿಂದ ವ್ಯಕ್ತಿ ಮೇಲೆ ಹಲ್ಲೆ

ರಾಮನಗರ: ಗ್ರಾಮಸ್ಥರ ಮುಂದೆಯೇ ಮಚ್ಚಿನಿಂದ ವ್ಯಕ್ತಿ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ರಾಮನಗರ ತಾಲೂಕಿನ ಪಾದರಹಳ್ಳಿಯಲ್ಲಿ ನಡೆದಿದೆ. ಮಚ್ಚಿನಿಂದ ಗೋವಿಂದರಾಜು ಎಂಬುವರ ಮೇಲೆ ರಮೇಶ್.ಜಿ.ಟಿ ಹಲ್ಲೆ ಮಾಡಿದ್ದಾರೆ. ಗಾಯಾಳು ಗೋವಿಂದ್​​ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಾಲಬಾಧೆ ತಾಳಲಾರದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ

ದಾವಣಗೆರೆ: ಸಾಲಬಾಧೆ ತಾಳಲಾರದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ದಾವಣಗೆರೆ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ. ಭೀಮಾನಾಯ್ಕ್ (38) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತ. ಜಮೀನಿನಲ್ಲಿ ಮೆಕ್ಕೆಜೋಳ ಬೆಳೆ ಹಾಕಿದ್ದು ಮಳೆ ಇಲ್ಲದೆ ಹಿನ್ನೆಲೆ ನಷ್ಟ ಅನುಭವಿಸಿದ್ದ ರೈತ. ಹೆಚ್​ಡಿಎಫ್​​ಸಿ ಬ್ಯಾಂಕ್​​ನಲ್ಲಿ 1.70 ಲಕ್ಷ ರೂ. ಧರ್ಮಸ್ಥಳ ಸಂಘದಲ್ಲಿ 3 ಲಕ್ಷ ರೂ. ಗ್ರಾಮೀಣ ಕೂಟದಲ್ಲಿ 40 ಸಾವಿರ ರೂ. ಸೇರಿದಂತೆ ಹಲವರು ಕಡೆಗಳಲ್ಲಿ ಸುಮಾರು 12 ಲಕ್ಷ ರೂ. ಸಾಲ ಮಾಡಿದ್ದ ರೈತ.

ಇದನ್ನೂ ಓದಿ: ಆಟೋ ಪಾರ್ಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್; ಭಗವಾ ಧ್ವಜದ ಬಗ್ಗೆ ಪ್ರಸ್ತಾಪ, ಮೂವರು ಅರೆಸ್ಟ್

ಮಳೆ ಇಲ್ಲ, ಬೆಳೆ ಇಲ್ಲದ ಕಾರಣ ಸಾಲ ತೀರಿಸಲಾಗದೆ ಮನನೊಂದಿದ್ದ ರೈತ ಭೀಮಾನಾಯ್ಕ್, ಇಂದು ಬೆಳಗ್ಗೆ ಕೂಡ ಸಾಲಗಾರರು ಮನೆ ಮುಂಭಾಗ ಬಂದು ಗಲಾಟೆ ಮಾಡಿದ್ದರು. ಇದರಿಂದ ಮನನೊಂದು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರೈತನ ಮೃತದೇಹ ರವಾನೆ ಮಾಡಲಾಗಿದೆ. ಮಾಯಕೊಂಡ ಶಾಸಕ ಕೆ ಎಸ್ ಬಸವಂತಪ್ಪ ಭೇಟಿ ನೀಡಿ ಸಾಂತ್ವನ ಹೇಳಿದರು. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು