AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಕೇಸ್: ಹೈಕೋರ್ಟ್​ನಲ್ಲೇ ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸುಪ್ರೀಂ ಸೂಚನೆ

Assets case against DK Shivakumar: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಇತ್ಯರ್ಥ ಪಡಿಸಿದ್ದು, ಕರ್ನಾಟಕ ಹೈಕೋರ್ಟ್ ನಲ್ಲೇ ವಿಚಾರಣೆ ಮುಂದುವರೆಸುವಂತೆ ಸಿಬಿಐಗೆ ಸೂಚನೆ ನೀಡಿದೆ.

ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಕೇಸ್: ಹೈಕೋರ್ಟ್​ನಲ್ಲೇ ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸುಪ್ರೀಂ ಸೂಚನೆ
ಹರೀಶ್ ಜಿ.ಆರ್​.
| Edited By: |

Updated on:Nov 10, 2023 | 1:23 PM

Share

ನವದೆಹಲಿ, (ನವೆಂಬರ್ 10): ಡಿಸಿಎಂ ಡಿಕೆ ಶಿವಕುಮಾರ್​ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್​ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸುಪ್ರೀಂಕೋರ್ಟ್(supreme court)​ ಸೂಚಿಸಿದೆ. ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್​ ಸಿಬಿಐ ತನಿಖೆಗೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಇಂದು (ನವೆಂಬರ್ 10) ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್​ನಲ್ಲಿ(Karnataka High Court) ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸೂಚಿಸಿದೆ.

2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಸಿಬಿಐ ತನಿಖೆಗೆ ವಹಿಸಲು ಅಂದಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಅವರು ಅನುಮತಿ ನೀಡಿದ್ದರು. ಬಳಿಕ ಡಿಕೆ ಶಿವಕುಮಾರ್, ಸಿಬಿಐ ತನಿಖೆಗೆ ಸರಕಾರ ವಹಿಸಿದ್ದನ್ನು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಹೈಕೋರ್ಟ್​ ವಿಭಾಗೀಯ ಪೀಠ, ಸಿಬಿಐ ತನಿಖೆಗೆ ತಡೆ ನೀಡಿತ್ತು. ಇದರೊಂದಿಗೆ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್​ ಸಿಕ್ಕಿತ್ತು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣ: ಸಿಬಿಐ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಬಳಿಕ ಸಿಬಿಐ ಹೈಕೋರ್ಟ್​ ವಿಭಾಗೀಯ ಪೀಠದ ತಡೆಯಾಜ್ಞೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರದ ತನಿಖೆ ಮಾಡಲು ಹೈಕೋರ್ಟ್ ವಿಧಿಸಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸಿಬಿಐ ಮೇಲ್ಮನವಿ ಅರ್ಜಿಯಲ್ಲಿ ಸುಪ್ರೀಂಕೋರ್ಟ್​ಗೆ ಮನವಿ ಮಾಡಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇದೀಗ ಮತ್ತೆ ಹೈಕೋರ್ಟ್​ನಲ್ಲೇ ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸೂಚನೆ ನೀಡಿದೆ.

Published On - 1:09 pm, Fri, 10 November 23

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ