AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಕೇಸ್: ಹೈಕೋರ್ಟ್​ನಲ್ಲೇ ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸುಪ್ರೀಂ ಸೂಚನೆ

Assets case against DK Shivakumar: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಇತ್ಯರ್ಥ ಪಡಿಸಿದ್ದು, ಕರ್ನಾಟಕ ಹೈಕೋರ್ಟ್ ನಲ್ಲೇ ವಿಚಾರಣೆ ಮುಂದುವರೆಸುವಂತೆ ಸಿಬಿಐಗೆ ಸೂಚನೆ ನೀಡಿದೆ.

ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಕೇಸ್: ಹೈಕೋರ್ಟ್​ನಲ್ಲೇ ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸುಪ್ರೀಂ ಸೂಚನೆ
ಹರೀಶ್ ಜಿ.ಆರ್​.
| Edited By: |

Updated on:Nov 10, 2023 | 1:23 PM

Share

ನವದೆಹಲಿ, (ನವೆಂಬರ್ 10): ಡಿಸಿಎಂ ಡಿಕೆ ಶಿವಕುಮಾರ್​ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್​ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸುಪ್ರೀಂಕೋರ್ಟ್(supreme court)​ ಸೂಚಿಸಿದೆ. ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್​ ಸಿಬಿಐ ತನಿಖೆಗೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಇಂದು (ನವೆಂಬರ್ 10) ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್​ನಲ್ಲಿ(Karnataka High Court) ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸೂಚಿಸಿದೆ.

2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಸಿಬಿಐ ತನಿಖೆಗೆ ವಹಿಸಲು ಅಂದಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಅವರು ಅನುಮತಿ ನೀಡಿದ್ದರು. ಬಳಿಕ ಡಿಕೆ ಶಿವಕುಮಾರ್, ಸಿಬಿಐ ತನಿಖೆಗೆ ಸರಕಾರ ವಹಿಸಿದ್ದನ್ನು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಹೈಕೋರ್ಟ್​ ವಿಭಾಗೀಯ ಪೀಠ, ಸಿಬಿಐ ತನಿಖೆಗೆ ತಡೆ ನೀಡಿತ್ತು. ಇದರೊಂದಿಗೆ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್​ ಸಿಕ್ಕಿತ್ತು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣ: ಸಿಬಿಐ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಬಳಿಕ ಸಿಬಿಐ ಹೈಕೋರ್ಟ್​ ವಿಭಾಗೀಯ ಪೀಠದ ತಡೆಯಾಜ್ಞೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರದ ತನಿಖೆ ಮಾಡಲು ಹೈಕೋರ್ಟ್ ವಿಧಿಸಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸಿಬಿಐ ಮೇಲ್ಮನವಿ ಅರ್ಜಿಯಲ್ಲಿ ಸುಪ್ರೀಂಕೋರ್ಟ್​ಗೆ ಮನವಿ ಮಾಡಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇದೀಗ ಮತ್ತೆ ಹೈಕೋರ್ಟ್​ನಲ್ಲೇ ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸೂಚನೆ ನೀಡಿದೆ.

Published On - 1:09 pm, Fri, 10 November 23

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ