AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಭಾಷೆಯಲ್ಲಿ ಸಹಾಯಕ ಲೋಕೋ ಪೈಲಟ್ ಮುಂಬಡ್ತಿ ಹುದ್ದೆ ಪರೀಕ್ಷೆ: ಶೀಘ್ರವೇ ಮರು ದಿನಾಂಕ ನಿಗದಿ

ಸಹಾಯಕ ಲೋಕೋ ಪೈಲಟ್ ಹುದ್ದೆ ಮುಂಬಡ್ತಿ ಪರೀಕ್ಷೆ ಕನ್ನಡದಲ್ಲಿ ನಡೆಸುವಂತೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಸಚಿವ ವಿ.ಸೋಮಣ್ಣ ಸೂಚಿಸಿದ್ದರು. ಅವರ ನಿರ್ದೇಶನದಂತೆ ಇದೀಗ ಕನ್ನಡದಲ್ಲಿಯೂ ಪರೀಕ್ಷೆ ನಡೆಸಲು ನೈರುತ್ಯ ರೈಲ್ವೆ ವಲಯವು ಕ್ರಮ ಕೈಗೊಂಡಿದೆ. ಶೀಘ್ರವೇ ದಿನಾಂಕ ಮರು ನಿಗದಿಪಡಿಸಿ ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿದೆ.

ಕನ್ನಡ ಭಾಷೆಯಲ್ಲಿ ಸಹಾಯಕ ಲೋಕೋ ಪೈಲಟ್ ಮುಂಬಡ್ತಿ ಹುದ್ದೆ ಪರೀಕ್ಷೆ: ಶೀಘ್ರವೇ ಮರು ದಿನಾಂಕ ನಿಗದಿ
ಕನ್ನಡ ಭಾಷೆಯಲ್ಲಿ ಸಹಾಯಕ ಲೋಕೋ ಪೈಲಟ್ ಮುಂಬಡ್ತಿ ಹುದ್ದೆ ಪರೀಕ್ಷೆ: ಶೀಘ್ರವೇ ಮರು ದಿನಾಂಕ ನಿಗದಿ
ಕಿರಣ್​ ಹನಿಯಡ್ಕ
| Edited By: |

Updated on: Aug 07, 2024 | 9:42 PM

Share

ಬೆಂಗಳೂರು, ಆಗಸ್ಟ್​​ 07: ವಿಷಯ ರೈಲ್ವೆ ಮತ್ತು ಜಲ ಶಕ್ತಿ ಖಾತೆ ಸಚಿವ ವಿ. ಸೋಮಣ್ಣ (V. Somanna) ನಿರ್ದೇಶನದಂತೆ ಕನ್ನಡ ಭಾಷೆಯಲ್ಲಿ ಸಹಾಯಕ ಲೋಕೋ ಪೈಲಟ್ (Assistant Loco Pilot) ಹುದ್ದೆ ಮುಂಬಡ್ತಿ ಪರೀಕ್ಷೆ ನಡೆಸಲು ಕ್ರಮಕೈಗೊಳ್ಳಲಾಗಿದೆ. ಶೀಘ್ರವೇ ದಿನಾಂಕ ಮರು ನಿಗದಿಪಡಿಸಿ ಪರೀಕ್ಷೆ ನಡೆಸಲು ನೈರುತ್ಯ ರೈಲ್ವೆ ವಲಯವು ಮುಂದಾಗಿದೆ. ಆಗಸ್ಟ್ 3ರಂದು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಿಗದಿಯಾಗಿತ್ತು. ಆದರೆ ಕೇವಲ ಇಂಗ್ಲಿಷ್‌, ಹಿಂದಿ ಭಾಷೆಗಳಲ್ಲಿ ಮಾತ್ರ ಬರೆಯಲು ಅವಕಾಶವಿತ್ತು. ಕನ್ನಡದಲ್ಲೂ ಪರೀಕ್ಷೆ ನಡೆಸಲು ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಸೂಚನೆ ನೀಡಲಾಗಿದೆ.

ಇಲಾಖೆಯ ಈ ಕ್ರಮದಿಂದ ನೈರುತ್ಯ ರೈಲ್ವೆ ವಲಯದಲ್ಲಿ ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಕನ್ನಡಿಗ ಅಭ್ಯರ್ಥಿಗಳಿಗೆ ಅನಾನುಕೂಲವಾಗುತ್ತಿದೆ ಎಂಬ ವಿಷಯ ರೈಲ್ವೆ ಮತ್ತು ಜಲ ಶಕ್ತಿ ಖಾತೆ ಸಚಿವ ವಿ ಸೋಮಣ್ಣ ಅವರ ಗಮನಕ್ಕೆ ಬಂದ ತಕ್ಷಣವೇ ಕಾರ್ಯಪ್ರವೃತ್ತರಾಗಿ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಕನ್ನಡದಲ್ಲಿಯೂ ಪರೀಕ್ಷೆ ನಡೆಸಲು ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು. ಇದರ ಫಲವಾಗಿ, ಸಹಾಯಕ ಲೋಕೋ ಪೈಲಟ್ ಹುದ್ದೆಗೆ ಮುಂಬಡ್ತಿ ಪರೀಕ್ಷೆಯನ್ನು ಕನ್ನಡದಲ್ಲಿಯೂ ನಡೆಸಲು ಇದೀಗ ನೈರುತ್ಯ ರೈಲ್ವೆ ವಲಯವು ಕ್ರಮ ಕೈಗೊಂಡಿದೆ.

ಇದನ್ನೂ ಓದಿ: ಗುಡ್​ನ್ಯೂಸ್: ನೈಋತ್ಯ ರೈಲ್ವೆ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ

ಈ ಸಂಬಂಧ ನೈರುತ್ಯ ರೈಲ್ವೆ ಕೇಂದ್ರ ಕಚೇರಿಯಿಂದ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಮೂರೂ ವಿಭಾಗೀಯ ಅಧಿಕಾರಿಗಳಿಗೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಇದರಿಂದ ರೈಲ್ವೆಯಲ್ಲಿ ಕಾರ್ಯನಿರ್ವಹಿಸುವ ಕನ್ನಡಿಗ ಸಿಬ್ಬಂದಿಗಳಿಗೆ ಸಹಾಯಕವಾಗಲಿದೆ. ಸದ್ಯದಲ್ಲಿಯೇ ದಿನಾಂಕ ಮರು-ನಿಗದಿಪಡಿಸಿ ಪರೀಕ್ಷೆಯನ್ನು ನಡೆಸಲು ಕ್ರಮವಹಿಸಲಾಗುತ್ತಿದೆ.

ಇದನ್ನೂ ಓದಿ: RRB JE Recruitment 2024: ರೈಲ್ವೆ ನೇಮಕಾತಿ ಮಂಡಳಿ ಜೂನಿಯರ್ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಕನ್ನಡ ಭಾಷೆಗೆ ಪ್ರಾತಿನಿಧ್ಯ, ಪ್ರಾಮುಖ್ಯತೆ ನೀಡುವ ಜೊತೆಗೆ ಕನ್ನಡ ಮಾಧ್ಯಮದಲ್ಲಿ ಓದಿದ, ಕನ್ನಡವನ್ನು ಮಾತೃಭಾಷೆಯಾಗಿ ಹೊಂದಿದ ಅನೇಕ ಗ್ರೂಪ್ -ಡಿ, ಗ್ರೂಪ್- ಸಿ ಸಿಬ್ಬಂದಿಗಳಿಗೆ ಪರೀಕ್ಷೆಯನ್ನು ತಮ್ಮ ಸ್ವಂತ ಭಾಷೆಯಲ್ಲಿಯೇ ಆತ್ಮವಿಶ್ವಾಸದಿಂದ ಎದುರಿಸಿಲು ಈ ನಿರ್ಧಾರ ಪೂರಕವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು