AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿ ಕೊರತೆ: ನೈಟ್ ಡ್ಯೂಟಿ ಮಾಡು ಎಂದ ಮಹಿಳಾ SI ಮೇಲೆ ASI ಹಲ್ಲೆ

ಮಂಡ್ಯ: ರಾತ್ರಿ ಗಸ್ತು ಕರ್ತವ್ಯಕ್ಕೆ ನಿಯೋಜನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಎಸ್​ಐ ಮೇಲೆ ಎಎಸ್​ಐ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಸರಾಳು ಪೊಲೀಸ್ ಠಾಣೆಯ ಮಹಿಳಾ ಎಸ್​ಐ ಜಯಗೌರಿ ಮೇಲೆ ಅದೇ ಠಾಣೆಯ ಎಎಸ್​ಐ ಶಿವನಂಜೇಗೌಡ ಹಲ್ಲೆ ನಡೆಸಿದ್ದಾರೆ. ನ. 9ರಂದು ಎಎಸ್​ಐ ಶಿವನಂಜೇಗೌಡ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ಅಂದು ಸಂಜೆ 4 ಗಂಟೆ ಸುಮಾರಿಗೆ ಮುಖ್ಯಮಂತ್ರಿಗಳ ಬಂದೋಬಸ್ತ್ ಕರ್ತವ್ಯ ಮುಗಿಸಿ ಎಸ್​ಐ ಜಯಗೌರಿ ಠಾಣೆಗೆ ವಾಪಸಾಗಿದ್ದರು. ಬಳಿಕ ಅಂದು ರಾತ್ರಿ ಗಸ್ತು ಕರ್ತವ್ಯಕ್ಕೆ ಸಿಬ್ಬಂದಿ […]

ಸಿಬ್ಬಂದಿ ಕೊರತೆ: ನೈಟ್ ಡ್ಯೂಟಿ ಮಾಡು ಎಂದ ಮಹಿಳಾ SI ಮೇಲೆ ASI ಹಲ್ಲೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 12, 2019 | 11:58 AM

Share

ಮಂಡ್ಯ: ರಾತ್ರಿ ಗಸ್ತು ಕರ್ತವ್ಯಕ್ಕೆ ನಿಯೋಜನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಎಸ್​ಐ ಮೇಲೆ ಎಎಸ್​ಐ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಸರಾಳು ಪೊಲೀಸ್ ಠಾಣೆಯ ಮಹಿಳಾ ಎಸ್​ಐ ಜಯಗೌರಿ ಮೇಲೆ ಅದೇ ಠಾಣೆಯ ಎಎಸ್​ಐ ಶಿವನಂಜೇಗೌಡ ಹಲ್ಲೆ ನಡೆಸಿದ್ದಾರೆ. ನ. 9ರಂದು ಎಎಸ್​ಐ ಶಿವನಂಜೇಗೌಡ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ಅಂದು ಸಂಜೆ 4 ಗಂಟೆ ಸುಮಾರಿಗೆ ಮುಖ್ಯಮಂತ್ರಿಗಳ ಬಂದೋಬಸ್ತ್ ಕರ್ತವ್ಯ ಮುಗಿಸಿ ಎಸ್​ಐ ಜಯಗೌರಿ ಠಾಣೆಗೆ ವಾಪಸಾಗಿದ್ದರು. ಬಳಿಕ ಅಂದು ರಾತ್ರಿ ಗಸ್ತು ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ ಮಾಡುವ ವಿಚಾರದಲ್ಲಿ ಇಬ್ಬರ ನಡುವೆ ಜಗಳವಾಗಿದೆ.

ಕತ್ತಿನ ಪಟ್ಟಿ ಎಳೆದಾಡಿ ಹಲ್ಲೆ:  ಸಿಬ್ಬಂದಿ ಇಲ್ಲದ ಕಾರಣ ಈಗ ಮನೆಗೆ ಹೋಗಿ ವಿಶ್ರಾಂತಿ ಪಡೆದು ರಾತ್ರಿ ಗಸ್ತಿಗೆ ಬನ್ನಿ ಎಂದು ಎಎಸ್​ಐ ಶಿವನಂಜೇಗೌಡಗೆ ಎಸ್​ಐ ಜಯಗೌರಿ ಸೂಚಿಸಿದ್ದಾರೆ. ಈ ವೇಳೆ ಬೆಳಗ್ಗೆಯಿಂದ ಕರ್ತವ್ಯ ನಿರ್ವಹಿಸಿದ್ದೀನಿ, ರಾತ್ರಿ ಗಸ್ತಿಗೆ ನಾನ್ಯಾಕೆ ಹೋಗಲಿ ಎಂದು ಎಎಸ್​ಐ ಜಗಳವಾಡಿದ್ದಾರೆ. ನಂತರ ರೈಟರ್​ ಕೊಠಡಿಯಲ್ಲಿ ಎಸ್​ಐ ಜಯಗೌರಿ ಅವರ ಯೂನಿಫಾರ್ಮ್ ಕತ್ತಿನ ಪಟ್ಟಿ ಎಳೆದಾಡಿ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಐಪಿಸಿ ಸೆಕ್ಷನ್ 323, 354, 504, 506 ಅಡಿ ಎಫ್​ಐಆರ್​ ದಾಖಲಾಗಿದೆ.

Published On - 11:10 am, Tue, 12 November 19

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ