AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿ ಕೊರತೆ: ನೈಟ್ ಡ್ಯೂಟಿ ಮಾಡು ಎಂದ ಮಹಿಳಾ SI ಮೇಲೆ ASI ಹಲ್ಲೆ

ಮಂಡ್ಯ: ರಾತ್ರಿ ಗಸ್ತು ಕರ್ತವ್ಯಕ್ಕೆ ನಿಯೋಜನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಎಸ್​ಐ ಮೇಲೆ ಎಎಸ್​ಐ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಸರಾಳು ಪೊಲೀಸ್ ಠಾಣೆಯ ಮಹಿಳಾ ಎಸ್​ಐ ಜಯಗೌರಿ ಮೇಲೆ ಅದೇ ಠಾಣೆಯ ಎಎಸ್​ಐ ಶಿವನಂಜೇಗೌಡ ಹಲ್ಲೆ ನಡೆಸಿದ್ದಾರೆ. ನ. 9ರಂದು ಎಎಸ್​ಐ ಶಿವನಂಜೇಗೌಡ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ಅಂದು ಸಂಜೆ 4 ಗಂಟೆ ಸುಮಾರಿಗೆ ಮುಖ್ಯಮಂತ್ರಿಗಳ ಬಂದೋಬಸ್ತ್ ಕರ್ತವ್ಯ ಮುಗಿಸಿ ಎಸ್​ಐ ಜಯಗೌರಿ ಠಾಣೆಗೆ ವಾಪಸಾಗಿದ್ದರು. ಬಳಿಕ ಅಂದು ರಾತ್ರಿ ಗಸ್ತು ಕರ್ತವ್ಯಕ್ಕೆ ಸಿಬ್ಬಂದಿ […]

ಸಿಬ್ಬಂದಿ ಕೊರತೆ: ನೈಟ್ ಡ್ಯೂಟಿ ಮಾಡು ಎಂದ ಮಹಿಳಾ SI ಮೇಲೆ ASI ಹಲ್ಲೆ
ಸಾಧು ಶ್ರೀನಾಥ್​
|

Updated on:Nov 12, 2019 | 11:58 AM

Share

ಮಂಡ್ಯ: ರಾತ್ರಿ ಗಸ್ತು ಕರ್ತವ್ಯಕ್ಕೆ ನಿಯೋಜನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಎಸ್​ಐ ಮೇಲೆ ಎಎಸ್​ಐ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಸರಾಳು ಪೊಲೀಸ್ ಠಾಣೆಯ ಮಹಿಳಾ ಎಸ್​ಐ ಜಯಗೌರಿ ಮೇಲೆ ಅದೇ ಠಾಣೆಯ ಎಎಸ್​ಐ ಶಿವನಂಜೇಗೌಡ ಹಲ್ಲೆ ನಡೆಸಿದ್ದಾರೆ. ನ. 9ರಂದು ಎಎಸ್​ಐ ಶಿವನಂಜೇಗೌಡ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ಅಂದು ಸಂಜೆ 4 ಗಂಟೆ ಸುಮಾರಿಗೆ ಮುಖ್ಯಮಂತ್ರಿಗಳ ಬಂದೋಬಸ್ತ್ ಕರ್ತವ್ಯ ಮುಗಿಸಿ ಎಸ್​ಐ ಜಯಗೌರಿ ಠಾಣೆಗೆ ವಾಪಸಾಗಿದ್ದರು. ಬಳಿಕ ಅಂದು ರಾತ್ರಿ ಗಸ್ತು ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ ಮಾಡುವ ವಿಚಾರದಲ್ಲಿ ಇಬ್ಬರ ನಡುವೆ ಜಗಳವಾಗಿದೆ.

ಕತ್ತಿನ ಪಟ್ಟಿ ಎಳೆದಾಡಿ ಹಲ್ಲೆ:  ಸಿಬ್ಬಂದಿ ಇಲ್ಲದ ಕಾರಣ ಈಗ ಮನೆಗೆ ಹೋಗಿ ವಿಶ್ರಾಂತಿ ಪಡೆದು ರಾತ್ರಿ ಗಸ್ತಿಗೆ ಬನ್ನಿ ಎಂದು ಎಎಸ್​ಐ ಶಿವನಂಜೇಗೌಡಗೆ ಎಸ್​ಐ ಜಯಗೌರಿ ಸೂಚಿಸಿದ್ದಾರೆ. ಈ ವೇಳೆ ಬೆಳಗ್ಗೆಯಿಂದ ಕರ್ತವ್ಯ ನಿರ್ವಹಿಸಿದ್ದೀನಿ, ರಾತ್ರಿ ಗಸ್ತಿಗೆ ನಾನ್ಯಾಕೆ ಹೋಗಲಿ ಎಂದು ಎಎಸ್​ಐ ಜಗಳವಾಡಿದ್ದಾರೆ. ನಂತರ ರೈಟರ್​ ಕೊಠಡಿಯಲ್ಲಿ ಎಸ್​ಐ ಜಯಗೌರಿ ಅವರ ಯೂನಿಫಾರ್ಮ್ ಕತ್ತಿನ ಪಟ್ಟಿ ಎಳೆದಾಡಿ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಐಪಿಸಿ ಸೆಕ್ಷನ್ 323, 354, 504, 506 ಅಡಿ ಎಫ್​ಐಆರ್​ ದಾಖಲಾಗಿದೆ.

Published On - 11:10 am, Tue, 12 November 19

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?