AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿ ಕೊರತೆ: ನೈಟ್ ಡ್ಯೂಟಿ ಮಾಡು ಎಂದ ಮಹಿಳಾ SI ಮೇಲೆ ASI ಹಲ್ಲೆ

ಮಂಡ್ಯ: ರಾತ್ರಿ ಗಸ್ತು ಕರ್ತವ್ಯಕ್ಕೆ ನಿಯೋಜನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಎಸ್​ಐ ಮೇಲೆ ಎಎಸ್​ಐ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಸರಾಳು ಪೊಲೀಸ್ ಠಾಣೆಯ ಮಹಿಳಾ ಎಸ್​ಐ ಜಯಗೌರಿ ಮೇಲೆ ಅದೇ ಠಾಣೆಯ ಎಎಸ್​ಐ ಶಿವನಂಜೇಗೌಡ ಹಲ್ಲೆ ನಡೆಸಿದ್ದಾರೆ. ನ. 9ರಂದು ಎಎಸ್​ಐ ಶಿವನಂಜೇಗೌಡ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ಅಂದು ಸಂಜೆ 4 ಗಂಟೆ ಸುಮಾರಿಗೆ ಮುಖ್ಯಮಂತ್ರಿಗಳ ಬಂದೋಬಸ್ತ್ ಕರ್ತವ್ಯ ಮುಗಿಸಿ ಎಸ್​ಐ ಜಯಗೌರಿ ಠಾಣೆಗೆ ವಾಪಸಾಗಿದ್ದರು. ಬಳಿಕ ಅಂದು ರಾತ್ರಿ ಗಸ್ತು ಕರ್ತವ್ಯಕ್ಕೆ ಸಿಬ್ಬಂದಿ […]

ಸಿಬ್ಬಂದಿ ಕೊರತೆ: ನೈಟ್ ಡ್ಯೂಟಿ ಮಾಡು ಎಂದ ಮಹಿಳಾ SI ಮೇಲೆ ASI ಹಲ್ಲೆ
ಸಾಧು ಶ್ರೀನಾಥ್​
|

Updated on:Nov 12, 2019 | 11:58 AM

Share

ಮಂಡ್ಯ: ರಾತ್ರಿ ಗಸ್ತು ಕರ್ತವ್ಯಕ್ಕೆ ನಿಯೋಜನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಎಸ್​ಐ ಮೇಲೆ ಎಎಸ್​ಐ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಸರಾಳು ಪೊಲೀಸ್ ಠಾಣೆಯ ಮಹಿಳಾ ಎಸ್​ಐ ಜಯಗೌರಿ ಮೇಲೆ ಅದೇ ಠಾಣೆಯ ಎಎಸ್​ಐ ಶಿವನಂಜೇಗೌಡ ಹಲ್ಲೆ ನಡೆಸಿದ್ದಾರೆ. ನ. 9ರಂದು ಎಎಸ್​ಐ ಶಿವನಂಜೇಗೌಡ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ಅಂದು ಸಂಜೆ 4 ಗಂಟೆ ಸುಮಾರಿಗೆ ಮುಖ್ಯಮಂತ್ರಿಗಳ ಬಂದೋಬಸ್ತ್ ಕರ್ತವ್ಯ ಮುಗಿಸಿ ಎಸ್​ಐ ಜಯಗೌರಿ ಠಾಣೆಗೆ ವಾಪಸಾಗಿದ್ದರು. ಬಳಿಕ ಅಂದು ರಾತ್ರಿ ಗಸ್ತು ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ ಮಾಡುವ ವಿಚಾರದಲ್ಲಿ ಇಬ್ಬರ ನಡುವೆ ಜಗಳವಾಗಿದೆ.

ಕತ್ತಿನ ಪಟ್ಟಿ ಎಳೆದಾಡಿ ಹಲ್ಲೆ:  ಸಿಬ್ಬಂದಿ ಇಲ್ಲದ ಕಾರಣ ಈಗ ಮನೆಗೆ ಹೋಗಿ ವಿಶ್ರಾಂತಿ ಪಡೆದು ರಾತ್ರಿ ಗಸ್ತಿಗೆ ಬನ್ನಿ ಎಂದು ಎಎಸ್​ಐ ಶಿವನಂಜೇಗೌಡಗೆ ಎಸ್​ಐ ಜಯಗೌರಿ ಸೂಚಿಸಿದ್ದಾರೆ. ಈ ವೇಳೆ ಬೆಳಗ್ಗೆಯಿಂದ ಕರ್ತವ್ಯ ನಿರ್ವಹಿಸಿದ್ದೀನಿ, ರಾತ್ರಿ ಗಸ್ತಿಗೆ ನಾನ್ಯಾಕೆ ಹೋಗಲಿ ಎಂದು ಎಎಸ್​ಐ ಜಗಳವಾಡಿದ್ದಾರೆ. ನಂತರ ರೈಟರ್​ ಕೊಠಡಿಯಲ್ಲಿ ಎಸ್​ಐ ಜಯಗೌರಿ ಅವರ ಯೂನಿಫಾರ್ಮ್ ಕತ್ತಿನ ಪಟ್ಟಿ ಎಳೆದಾಡಿ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಐಪಿಸಿ ಸೆಕ್ಷನ್ 323, 354, 504, 506 ಅಡಿ ಎಫ್​ಐಆರ್​ ದಾಖಲಾಗಿದೆ.

Published On - 11:10 am, Tue, 12 November 19

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು