AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿ ಕೊರತೆ: ನೈಟ್ ಡ್ಯೂಟಿ ಮಾಡು ಎಂದ ಮಹಿಳಾ SI ಮೇಲೆ ASI ಹಲ್ಲೆ

ಮಂಡ್ಯ: ರಾತ್ರಿ ಗಸ್ತು ಕರ್ತವ್ಯಕ್ಕೆ ನಿಯೋಜನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಎಸ್​ಐ ಮೇಲೆ ಎಎಸ್​ಐ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಸರಾಳು ಪೊಲೀಸ್ ಠಾಣೆಯ ಮಹಿಳಾ ಎಸ್​ಐ ಜಯಗೌರಿ ಮೇಲೆ ಅದೇ ಠಾಣೆಯ ಎಎಸ್​ಐ ಶಿವನಂಜೇಗೌಡ ಹಲ್ಲೆ ನಡೆಸಿದ್ದಾರೆ. ನ. 9ರಂದು ಎಎಸ್​ಐ ಶಿವನಂಜೇಗೌಡ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ಅಂದು ಸಂಜೆ 4 ಗಂಟೆ ಸುಮಾರಿಗೆ ಮುಖ್ಯಮಂತ್ರಿಗಳ ಬಂದೋಬಸ್ತ್ ಕರ್ತವ್ಯ ಮುಗಿಸಿ ಎಸ್​ಐ ಜಯಗೌರಿ ಠಾಣೆಗೆ ವಾಪಸಾಗಿದ್ದರು. ಬಳಿಕ ಅಂದು ರಾತ್ರಿ ಗಸ್ತು ಕರ್ತವ್ಯಕ್ಕೆ ಸಿಬ್ಬಂದಿ […]

ಸಿಬ್ಬಂದಿ ಕೊರತೆ: ನೈಟ್ ಡ್ಯೂಟಿ ಮಾಡು ಎಂದ ಮಹಿಳಾ SI ಮೇಲೆ ASI ಹಲ್ಲೆ
ಸಾಧು ಶ್ರೀನಾಥ್​
|

Updated on:Nov 12, 2019 | 11:58 AM

Share

ಮಂಡ್ಯ: ರಾತ್ರಿ ಗಸ್ತು ಕರ್ತವ್ಯಕ್ಕೆ ನಿಯೋಜನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಎಸ್​ಐ ಮೇಲೆ ಎಎಸ್​ಐ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಸರಾಳು ಪೊಲೀಸ್ ಠಾಣೆಯ ಮಹಿಳಾ ಎಸ್​ಐ ಜಯಗೌರಿ ಮೇಲೆ ಅದೇ ಠಾಣೆಯ ಎಎಸ್​ಐ ಶಿವನಂಜೇಗೌಡ ಹಲ್ಲೆ ನಡೆಸಿದ್ದಾರೆ. ನ. 9ರಂದು ಎಎಸ್​ಐ ಶಿವನಂಜೇಗೌಡ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ಅಂದು ಸಂಜೆ 4 ಗಂಟೆ ಸುಮಾರಿಗೆ ಮುಖ್ಯಮಂತ್ರಿಗಳ ಬಂದೋಬಸ್ತ್ ಕರ್ತವ್ಯ ಮುಗಿಸಿ ಎಸ್​ಐ ಜಯಗೌರಿ ಠಾಣೆಗೆ ವಾಪಸಾಗಿದ್ದರು. ಬಳಿಕ ಅಂದು ರಾತ್ರಿ ಗಸ್ತು ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ ಮಾಡುವ ವಿಚಾರದಲ್ಲಿ ಇಬ್ಬರ ನಡುವೆ ಜಗಳವಾಗಿದೆ.

ಕತ್ತಿನ ಪಟ್ಟಿ ಎಳೆದಾಡಿ ಹಲ್ಲೆ:  ಸಿಬ್ಬಂದಿ ಇಲ್ಲದ ಕಾರಣ ಈಗ ಮನೆಗೆ ಹೋಗಿ ವಿಶ್ರಾಂತಿ ಪಡೆದು ರಾತ್ರಿ ಗಸ್ತಿಗೆ ಬನ್ನಿ ಎಂದು ಎಎಸ್​ಐ ಶಿವನಂಜೇಗೌಡಗೆ ಎಸ್​ಐ ಜಯಗೌರಿ ಸೂಚಿಸಿದ್ದಾರೆ. ಈ ವೇಳೆ ಬೆಳಗ್ಗೆಯಿಂದ ಕರ್ತವ್ಯ ನಿರ್ವಹಿಸಿದ್ದೀನಿ, ರಾತ್ರಿ ಗಸ್ತಿಗೆ ನಾನ್ಯಾಕೆ ಹೋಗಲಿ ಎಂದು ಎಎಸ್​ಐ ಜಗಳವಾಡಿದ್ದಾರೆ. ನಂತರ ರೈಟರ್​ ಕೊಠಡಿಯಲ್ಲಿ ಎಸ್​ಐ ಜಯಗೌರಿ ಅವರ ಯೂನಿಫಾರ್ಮ್ ಕತ್ತಿನ ಪಟ್ಟಿ ಎಳೆದಾಡಿ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಐಪಿಸಿ ಸೆಕ್ಷನ್ 323, 354, 504, 506 ಅಡಿ ಎಫ್​ಐಆರ್​ ದಾಖಲಾಗಿದೆ.

Published On - 11:10 am, Tue, 12 November 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ