ಸಿಬ್ಬಂದಿ ಕೊರತೆ: ನೈಟ್ ಡ್ಯೂಟಿ ಮಾಡು ಎಂದ ಮಹಿಳಾ SI ಮೇಲೆ ASI ಹಲ್ಲೆ

ಮಂಡ್ಯ: ರಾತ್ರಿ ಗಸ್ತು ಕರ್ತವ್ಯಕ್ಕೆ ನಿಯೋಜನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಎಸ್​ಐ ಮೇಲೆ ಎಎಸ್​ಐ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಸರಾಳು ಪೊಲೀಸ್ ಠಾಣೆಯ ಮಹಿಳಾ ಎಸ್​ಐ ಜಯಗೌರಿ ಮೇಲೆ ಅದೇ ಠಾಣೆಯ ಎಎಸ್​ಐ ಶಿವನಂಜೇಗೌಡ ಹಲ್ಲೆ ನಡೆಸಿದ್ದಾರೆ. ನ. 9ರಂದು ಎಎಸ್​ಐ ಶಿವನಂಜೇಗೌಡ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ಅಂದು ಸಂಜೆ 4 ಗಂಟೆ ಸುಮಾರಿಗೆ ಮುಖ್ಯಮಂತ್ರಿಗಳ ಬಂದೋಬಸ್ತ್ ಕರ್ತವ್ಯ ಮುಗಿಸಿ ಎಸ್​ಐ ಜಯಗೌರಿ ಠಾಣೆಗೆ ವಾಪಸಾಗಿದ್ದರು. ಬಳಿಕ ಅಂದು ರಾತ್ರಿ ಗಸ್ತು ಕರ್ತವ್ಯಕ್ಕೆ ಸಿಬ್ಬಂದಿ […]

ಸಿಬ್ಬಂದಿ ಕೊರತೆ: ನೈಟ್ ಡ್ಯೂಟಿ ಮಾಡು ಎಂದ ಮಹಿಳಾ SI ಮೇಲೆ ASI ಹಲ್ಲೆ
ಸಾಧು ಶ್ರೀನಾಥ್​

Updated on: Nov 12, 2019 | 11:58 AM

ಮಂಡ್ಯ: ರಾತ್ರಿ ಗಸ್ತು ಕರ್ತವ್ಯಕ್ಕೆ ನಿಯೋಜನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಎಸ್​ಐ ಮೇಲೆ ಎಎಸ್​ಐ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಸರಾಳು ಪೊಲೀಸ್ ಠಾಣೆಯ ಮಹಿಳಾ ಎಸ್​ಐ ಜಯಗೌರಿ ಮೇಲೆ ಅದೇ ಠಾಣೆಯ ಎಎಸ್​ಐ ಶಿವನಂಜೇಗೌಡ ಹಲ್ಲೆ ನಡೆಸಿದ್ದಾರೆ. ನ. 9ರಂದು ಎಎಸ್​ಐ ಶಿವನಂಜೇಗೌಡ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ಅಂದು ಸಂಜೆ 4 ಗಂಟೆ ಸುಮಾರಿಗೆ ಮುಖ್ಯಮಂತ್ರಿಗಳ ಬಂದೋಬಸ್ತ್ ಕರ್ತವ್ಯ ಮುಗಿಸಿ ಎಸ್​ಐ ಜಯಗೌರಿ ಠಾಣೆಗೆ ವಾಪಸಾಗಿದ್ದರು. ಬಳಿಕ ಅಂದು ರಾತ್ರಿ ಗಸ್ತು ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ ಮಾಡುವ ವಿಚಾರದಲ್ಲಿ ಇಬ್ಬರ ನಡುವೆ ಜಗಳವಾಗಿದೆ.

ಕತ್ತಿನ ಪಟ್ಟಿ ಎಳೆದಾಡಿ ಹಲ್ಲೆ: 
ಸಿಬ್ಬಂದಿ ಇಲ್ಲದ ಕಾರಣ ಈಗ ಮನೆಗೆ ಹೋಗಿ ವಿಶ್ರಾಂತಿ ಪಡೆದು ರಾತ್ರಿ ಗಸ್ತಿಗೆ ಬನ್ನಿ ಎಂದು ಎಎಸ್​ಐ ಶಿವನಂಜೇಗೌಡಗೆ ಎಸ್​ಐ ಜಯಗೌರಿ ಸೂಚಿಸಿದ್ದಾರೆ. ಈ ವೇಳೆ ಬೆಳಗ್ಗೆಯಿಂದ ಕರ್ತವ್ಯ ನಿರ್ವಹಿಸಿದ್ದೀನಿ, ರಾತ್ರಿ ಗಸ್ತಿಗೆ ನಾನ್ಯಾಕೆ ಹೋಗಲಿ ಎಂದು ಎಎಸ್​ಐ ಜಗಳವಾಡಿದ್ದಾರೆ. ನಂತರ ರೈಟರ್​ ಕೊಠಡಿಯಲ್ಲಿ ಎಸ್​ಐ ಜಯಗೌರಿ ಅವರ ಯೂನಿಫಾರ್ಮ್ ಕತ್ತಿನ ಪಟ್ಟಿ ಎಳೆದಾಡಿ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಐಪಿಸಿ ಸೆಕ್ಷನ್ 323, 354, 504, 506 ಅಡಿ ಎಫ್​ಐಆರ್​ ದಾಖಲಾಗಿದೆ.

Published On - 11:10 am, Tue, 12 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us