ಸಿಎಂ ಕುರ್ಚಿ ಅಲ್ಲಾಡುತ್ತಿರುವ ಸಮಯದಲ್ಲಿ ಸಿದ್ದರಾಮಯ್ಯ ಜಾತಿಗಣತಿ ವರದಿ ಮುನ್ನೆಲೆಗೆ ತಂದಿದ್ದಾರೆ: ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Jan 17, 2025 | 1:13 PM

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸುವುದು ಸಾಧ್ಯವಿಲ್ಲ, ಡಿಕೆ ಶಿವಕುಮಾರ್ ಸಿಎಂ ಸ್ಥಾನಕ್ಕೇರಲು ವೇದಿಕೆಯನ್ನು ಸಿದ್ಧಮಾಡಿಕೊಳ್ಳುತ್ತಿದ್ದಾರೆ, ಪಕ್ಷದೊಳಗೆ ನಡೆಯುತ್ತಿರುವ ಕಲಹಗಳು ಬೀದಿರಂಪವಾಗಿ ಬದಲಾಗೋದ್ರಲ್ಲಿ ಹೆಚ್ಚು ದಿನ ಉಳಿದಿಲ್ಲ, ಕಾಂಗ್ರೆಸ್ ಒಳಜಗಳ ಯಾವ ರಾಜಕೀಯ ತಿರುವು ತೆಗೆದುಕೊಳ್ಳುತ್ತದೋ ಕಾದು ನೋಡಬೇಕು ಎಂದು ವಿಜಯೇಂದ್ರ ಹೇಳಿದರು.

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿಯನ್ನು ಚುನಾವಣೆಗೋಸ್ಕರ ಅವಸರದಲ್ಲಿ ಮಾಡಿಸಿದ್ದರು, 2016 ರಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿದ್ದರೂ ಅದನ್ನು ಜಾರಿಮಾಡಲಿಲ್ಲ, ಅದೊಂದು ಅವೈಜ್ಞಾನಿಕ ವರದಿ ಎಂದು ಬಿಜೆಪಿ ರಾಜ್ಯದ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿಜಯೇಂದ್ರ, ಜಾತಿಗಣತಿಯನ್ನು ಒಕ್ಕಲಿಗ ಮತ್ತು ವೀರಶೈವ ಲಿಂಗಾಯತ ಸಮುದಾಯಗಳು ವಿರೋಧಿಸುತ್ತಿವೆ, ವಂಚಿತ ಸಮುದಾಯಗಳಿಗೆ ಪ್ರಾತಿನಿಧ್ಯ ಸಿಕ್ಕರೆ ಬಿಜೆಪಿಯ ತಕರಾರೇನೂ ಇಲ್ಲ, ಆದರೆ ವರದಿಯನ್ನು ಸಿದ್ದರಾಮಯ್ಯ ರಾಜಕೀಯ ದಾಳವಾಗಿ ಬಳಸುತ್ತಿದ್ದಾರೆ, ಸಿಎಂ ಕುರ್ಚಿ ಅಲುಗಾಡುತ್ತಿರುವುದು ಮನವರಿಕೆಯಾಗುತ್ತಿದ್ದಂತೆಯೇ ಜಾತಿಗಣತಿ ವರದಿಯನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ರಮೇಶ್ ಜಾರಕಿಗೊಳಿಯನ್ನು ಎಚ್ಚರಿಸಿದಂತೆ ಬಸನಗೌಡ ಯತ್ನಾಳ್​ಗೆ ತಾಕೀತು ಮಾಡದ ವಿಜಯೇಂದ್ರ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.