AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆ ಕೇಳಿದ್ದಕ್ಕೆ 12 ವರ್ಷದಿಂದ ಕೆಲಸ ಮಾಡ್ತಿದ್ದ ಕಾರ್ಮಿಕರು ಏಕಾಏಕಿ ವಜಾ: ಮರುನೇಮಕಕ್ಕೆ ಆಗ್ರಹಿಸಿ ನೌಕರರ ಧರಣಿ

ಕೆಲಸದಿಂದ ವಜಾಗೊಳಿಸಿರುವ ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಇಂದು ಡಿ.ಸಿ ಕಚೇರಿ ಎದುರು AT&S ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಾರ್ಮಿಕರಿಂದ ಧರಣಿ ನಡೆಯಿತು. ಜಿಲ್ಲೆಯ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ AT&S ​ ಕಾರ್ಖಾನೆಯ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದರು.

ರಜೆ ಕೇಳಿದ್ದಕ್ಕೆ 12 ವರ್ಷದಿಂದ ಕೆಲಸ ಮಾಡ್ತಿದ್ದ ಕಾರ್ಮಿಕರು ಏಕಾಏಕಿ ವಜಾ: ಮರುನೇಮಕಕ್ಕೆ ಆಗ್ರಹಿಸಿ ನೌಕರರ ಧರಣಿ
AT&S ನೌಕರರ ಧರಣಿ
KUSHAL V
|

Updated on:Feb 11, 2021 | 5:51 PM

Share

ಮೈಸೂರು: ಕೆಲಸದಿಂದ ವಜಾಗೊಳಿಸಿರುವ ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು AT & S ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಾರ್ಮಿಕರು ಧರಣಿ ನಡೆಸಿದರು. ಜಿಲ್ಲೆಯ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ AT & S ​ ಕಾರ್ಖಾನೆಯ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದರು.

ಕಾರ್ಮಿಕರು ಧರಣಿಗೆ ಮುಂದಾಗಲು ಕಾರಣವೇನು? ಕೊರೊನಾ ಸಂದರ್ಭದಲ್ಲಿ ರಜೆ ಕೇಳಿದ್ದಕ್ಕೆ AT & S ​ ಕಾರ್ಖಾನೆ 71 ಕಾರ್ಮಿಕರನ್ನು ಕೆಲಸದಿಂದ ತೆಗೆದಿತ್ತು ಎಂದು ನೌಕರರು ಆರೋಪಿಸಿದ್ದಾರೆ. ಸುಮಾರು 12 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಕಂಪನಿ ಉದ್ಯೋಗದಿಂದ ಏಕಾಏಕಿ ವಜಾಗೊಳಿಸಿದೆ ಎಂದು ಆರೋಪಿಸಿದ್ದಾರೆ.

ಇದೀಗ, ಕೆಲಸದಿಂದ ವಜಾಗೊಂಡ 71 ಕಾರ್ಮಿಕರ ಜೀವನ ದುಸ್ತರವಾಗಿದೆ. ಹಾಗಾಗಿ, ಜಿಲ್ಲಾಡಳಿತ ಮಧ್ಯಪ್ರವೇಶಿಸಿ ತಮ್ಮನ್ನು ಕಂಪನಿ ಮರುನೇಮಕಾತಿ ಮಾಡಿಕೊಳ್ಳೂವಂತೆ ಮಾಡಬೇಕು ಎಂದು ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಜೊತೆಗೆ, ಕಾರ್ಮಿಕರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕೆಂದು ಜಿಲ್ಲಾಡಳಿತಕ್ಕೆ ಕಾರ್ಮಿಕರು ಒತ್ತಾಯಿಸಿದರು.

ಇದನ್ನೂ ಓದಿ: ದೇವನಹಳ್ಳಿ: ದುಬೈನಿಂದ ತಂದಿದ್ದ ಡ್ರೋನ್, iPhone ಸೇರಿದಂತೆ 75 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

Published On - 5:36 pm, Thu, 11 February 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?