AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DCM ಸವದಿ ಬಿಜೆಪಿಗೆ ಮಾಸ್ಟರ್ ಸ್ಟ್ರೋಕು, ಹೆಚ್​ಡಿಕೆ ಕುಮ್ಮಕ್ಕು

ಬೆಳಗಾವಿ: ಡಿ.5ರಂದು ಅಥಣಿ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮಾಸ್ಟರ್ ಸ್ಟ್ರೋಕ್ ಕೊಟ್ರಾ ಡಿಸಿಎಂ ಲಕ್ಷ್ಮಣ ಸವದಿ? ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಇದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಕುಮ್ಮಕ್ಕು ಸಹ ಇದೆ ಎಂದು ಹೇಳಲಾಗುತ್ತಿದೆ. ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಲಕ್ಷ್ಮಣ್ ಸವದಿ ತುಂಬಾ ನಿರೀಕ್ಷೆಯಿಟ್ಟುಕೊಂಡಿದ್ದರು. ಆದ್ರೆ ಬಿಜೆಪಿ ಅನರ್ಹ ಶಾಸಕ ಮಹೇಶ್ ಕುಮಟಳ್ಳಿಗೆ ಟಿಕೆಟ್ ಘೋಷಿಸಿತು. ಇದರಿಂದ ಲಕ್ಷ್ಮಣ ಸವದಿ ಸಹ ಅಸಮಾಧಾನ ವ್ಯಕ್ತಪಡಿಸಿದ್ದರು. ಆದ್ರೆ ಇದೀಗ ಡಿಸಿಎಂ ಸವದಿ ಆಪ್ತ ಗುರು […]

DCM ಸವದಿ ಬಿಜೆಪಿಗೆ ಮಾಸ್ಟರ್ ಸ್ಟ್ರೋಕು, ಹೆಚ್​ಡಿಕೆ ಕುಮ್ಮಕ್ಕು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2019 | 1:03 PM

Share

ಬೆಳಗಾವಿ: ಡಿ.5ರಂದು ಅಥಣಿ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮಾಸ್ಟರ್ ಸ್ಟ್ರೋಕ್ ಕೊಟ್ರಾ ಡಿಸಿಎಂ ಲಕ್ಷ್ಮಣ ಸವದಿ? ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಇದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಕುಮ್ಮಕ್ಕು ಸಹ ಇದೆ ಎಂದು ಹೇಳಲಾಗುತ್ತಿದೆ.

ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಲಕ್ಷ್ಮಣ್ ಸವದಿ ತುಂಬಾ ನಿರೀಕ್ಷೆಯಿಟ್ಟುಕೊಂಡಿದ್ದರು. ಆದ್ರೆ ಬಿಜೆಪಿ ಅನರ್ಹ ಶಾಸಕ ಮಹೇಶ್ ಕುಮಟಳ್ಳಿಗೆ ಟಿಕೆಟ್ ಘೋಷಿಸಿತು. ಇದರಿಂದ ಲಕ್ಷ್ಮಣ ಸವದಿ ಸಹ ಅಸಮಾಧಾನ ವ್ಯಕ್ತಪಡಿಸಿದ್ದರು. ಆದ್ರೆ ಇದೀಗ ಡಿಸಿಎಂ ಸವದಿ ಆಪ್ತ ಗುರು ದಾಶ್ಯಾಳಗೆ ಅಥಣಿ ಕ್ಷೇತ್ರದ ಜೆಡಿಎಸ್ ಟಿಕೆಟ್ ಕನ್ಫರ್ಮ್ ಆಗಿದೆ. ಹೆಚ್​.ಡಿ.ಕುಮಾರಸ್ವಾಮಿ ಭೇಟಿ ಮಾಡಿ ಜೆಡಿಎಸ್​ನ ಬಿ ಫಾರಂ ಪಡೆಯಲು ಗೋಕಾಕ್​ಗೆ ಗುರು ದಾಶ್ಯಾಳ ತೆರಳಿದ್ದಾರೆ.

ಗುರು ದಾಶ್ಯಾಳ ಯಾರು?: ಡಿಸಿಎಂ ಲಕ್ಷ್ಮಣ ಸವದಿ ಆಪ್ತ ಗುರು ದಾಶ್ಯಾಳ ಅಥಣಿ ತಾಲೂಕಿನ ತೆಲಸಂಗ ಜಿಲ್ಲಾ ಪಂಚಾಯತ್​ನ ಬಿಜೆಪಿ ಸದಸ್ಯ. ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಸ್ವಗ್ರಾಮ ತೆಲಸಂಗ. ಹೀಗಾಗಿ ಕುಮಟಳ್ಳಿಗೆ ಟಾಂಗ್ ನೀಡಲು ಗುರು ಅವರನ್ನ ಡಿಸಿಎಂ ಸವದಿ ಕಣಕ್ಕಿಳಿಸಿದ್ರಾ? ಇದರ ಹಿಂದೆ ಬಿಜೆಪಿ ಮತ ವಿಭಜನೆ ಮಾಡುವ ಪ್ಲಾನ್ ಆಗಿದೆಯಾ? ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.

Published On - 6:43 pm, Mon, 18 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು