AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಕರ ಬಗ್ಗೆ ಅಶ್ಲೀಲ ಪದ ಬಳಕೆ: ಅಟ್ರಾಸಿಟಿ ಕೇಸ್ ದಾಖಲಾಗುತ್ತಿದ್ದಂತೆಯೇ ಕತ್ತಿ ಸ್ಪಷ್ಟನೆ

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಮುಗಿಯುತ್ತಿದ್ದಂತೆಯೇ ಜಿಲ್ಲೆಯಲ್ಲಿ ಮತ್ತೊಂದು ಗುದ್ದಾಟ ಶುರುವಾಗಿದೆ. ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅಶೀಲ ಪದ ಬಳಕೆ ಮಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದ್ದು, ಈ ಸಂಬಂಧ ಎಫ್​ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ರಮೇಶ್ ಕತ್ತಿ ವಿಡಿಯೋ ವೈರಲ್ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ನಾಯಕರ ಬಗ್ಗೆ ಅಶ್ಲೀಲ ಪದ ಬಳಕೆ: ಅಟ್ರಾಸಿಟಿ ಕೇಸ್ ದಾಖಲಾಗುತ್ತಿದ್ದಂತೆಯೇ ಕತ್ತಿ ಸ್ಪಷ್ಟನೆ
Ramesh Katti
ಸಹದೇವ್​ ಮಾನೆ
| Edited By: |

Updated on:Oct 19, 2025 | 9:13 PM

Share

ಬೆಳಗಾವಿ, (ಅಕ್ಟೋಬರ್ 19): ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ರಮೇಶ್ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಸಮಾಜದ ಮುಖಂಡ ರಾಜಶೇಖರ ತಳವಾರ್​ ಅವರ ನೀಡಿದ ದೂರಿನ ಮೇರೆಗೆ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ(ಅಟ್ರಾಸಿಟಿ) ಕೇಸ್ ದಾಖಲಾಗಿದೆ. ಆದರೂ ಸಹ ನಾಳೆ ರಾಜ್ಯಾದ್ಯಂತ ಹೋರಾಟಕ್ಕೆ ವಾಲ್ಮೀಕಿ ಸಮಾಜ ಕರೆ ನೀಡಿದೆ. ಇದರ ಬೆನ್ನಲ್ಲೇ ರಮೇಶ್ ಕತ್ತಿ ವಿಡಿಯೋ ವೈರಲ್ ಬಗ್ಗೆ ಸ್ಪಷ್ಟನೆ ನೀಡಿದ್ದು, ವಿರೋಧಿಗಳು ನನ್ನ ಹೇಳಿಕೆಯನ್ನ ತಿರುಚಿದ್ದಾರೆ. ಯಾರಿಗಯಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಸ್ಪಷ್ಟನೆ ನೀಡಿದ ರಮೇಶ್ ಕತ್ತಿ

ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ರಮೇಶ್ ಕತ್ತಿ ಸ್ಪಷ್ಟನೆ ನೀಡಿದ್ದು, ನನ್ನ ಹೇಳಿಕೆಯನ್ನ ತಿರುಚಲಾಗಿದೆ. ಡಾಲ್ಬಿ ಹಚ್ಚಲು ಅಭಿಮಾನಿಗಳು ಒತ್ತಾಯಿಸಿದಾಗ ನಾನು ಬ್ಯಾಡರೋ (ಬೇಡ) ಎಂದಿದ್ದೆ. ಆದರೆ, ನನ್ನ ಹೇಳಿಕೆಯನ್ನ ನನ್ನ ಗೆಲುವು ಸಹಿಸಲಾಗದ ವಿರೋಧಿಗಳಿಂದ ತಿರುಚಲಾಗಿದೆ. ಇದರಿಂದ ಯಾರಿಗಯಾದರೂ ನೋವಾಗಿದ್ದರೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ನಾಯಕ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅಶ್ಲೀಲ ಪದ ಬಳಿಕೆ: ವಿಡಿಯೋ ವೈರಲ್

ರಾಜ್ಯಾದ್ಯಂತ ಹೋರಾಟಕ್ಕೆ ಕರೆ

ಈ ಪ್ರಕರಣ ಸಂಬಂಧ ವಾಲ್ಮೀಕಿ ಸಮುದಾಯದವರು ಆಕ್ರೋಶಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ರಮೇಶ್ ಕತ್ತಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ನಾಳೆ (ಅಕ್ಟೋಬರ್ 19) ರಾಜ್ಯಾದ್ಯಂತ ವಾಲ್ಮೀಕಿ ಸಮುದಾಯ ಹೋರಾಟಕ್ಕೆ ಕರೆ ನೀಡಿದೆ. ವಾಲ್ಮೀಕಿ ಸಮಾಜದ ನಾಯಕರು, ನಾಳೆ ಬೆಳಗಾವಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

Published On - 9:12 pm, Sun, 19 October 25

Follow Us
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ