ಏಕೆ ಪ್ರದೀಪ್​ ಈಶ್ವರ್​ ರಾಜೀನಾಮೆ ಕೊಡಿಸಿಲ್ಲವೆಂದು ಕೊಲೆಗೆ ಯತ್ನ: ಸುಧಾಕರ್ ಬೆಂಬಲಿಗರ ವಿರುದ್ಧ ಆರೋಪ

ಲೋಕಸಭೆ ಚುನಾವಣೆಯಲ್ಲಿ ಸುಧಾಕರ್ ಗೆದ್ದರೆ ರಾಜೀನಾಮೆ ಕೊಡ್ತೇನೆಂದು ಪ್ರದೀಪ್ ಈಶ್ವರ್​ ಹೇಳಿಕೆ ವಿಚಾರವಾಗಿ ರಾಜ್ಯದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಈ ವಿಚಾರವಾಗಿ ಏಕೆ ಪ್ರದೀಪ್​ ಈಶ್ವರ್​ ರಾಜೀನಾಮೆ ಕೊಡಿಸಿಲ್ಲ ಎಂದು ಬಿಯರ್ ಬಾಟಲ್​​​ನಿಂದ ತಿವಿದು ಕೊಲೆಗೆ ಯತ್ನಿಸಿರುವುದಾಗಿ ಸಂಸದ ಡಾ.ಸುಧಾಕರ್ ಬೆಂಬಲಿಗರ ವಿರುದ್ಧ ಆರೋಪ ಮಾಡಲಾಗಿದೆ.

ಏಕೆ ಪ್ರದೀಪ್​ ಈಶ್ವರ್​ ರಾಜೀನಾಮೆ ಕೊಡಿಸಿಲ್ಲವೆಂದು ಕೊಲೆಗೆ ಯತ್ನ: ಸುಧಾಕರ್ ಬೆಂಬಲಿಗರ ವಿರುದ್ಧ ಆರೋಪ
ಏಕೆ ಪ್ರದೀಪ್​ ಈಶ್ವರ್​ ರಾಜೀನಾಮೆ ಕೊಡಿಸಿಲ್ಲವೆಂದು ಕೊಲೆಗೆ ಯತ್ನ: ಸುಧಾಕರ್ ಬೆಂಬಲಿಗರ ವಿರುದ್ಧ ಆರೋಪ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 10, 2024 | 7:11 PM

ಚಿಕ್ಕಬಳ್ಳಾಫುರ, ಜೂನ್ 10: ಲೋಕಸಭೆ ಚುನಾವಣೆಯಲ್ಲಿ ಸುಧಾಕರ್ ಗೆದ್ದರೆ ರಾಜೀನಾಮೆ ಕೊಡ್ತೇನೆಂದು ಪ್ರದೀಪ್ ಈಶ್ವರ್ (Pradeep Eshwar)​ ಹೇಳಿಕೆ ವಿಚಾರವಾಗಿ ಸದ್ಯ ಕೊಲೆ ಆರೋಪ ಕೇಳಿಬಂದಿದೆ. ಏಕೆ ಪ್ರದೀಪ್​ ಈಶ್ವರ್​ ರಾಜೀನಾಮೆ ಕೊಡಿಸಿಲ್ಲ ಎಂದು ಬಿಯರ್ ಬಾಟಲ್​​​ನಿಂದ ತಿವಿದು ಕೊಲೆಗೆ ಯತ್ನಿಸಿರುವುದಾಗಿ ಸಂಸದ ಡಾ.ಸುಧಾಕರ್ (K. Sudhakar) ಬೆಂಬಲಿಗರ ವಿರುದ್ಧ ಆರೋಪ ಮಾಡಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕಣಜೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗೋಪಾಲ ಎಂಬುವವರ ಮೇಲೆ ಚಂದ್ರಪ್ಪ, ಅರ್ಜುನ್ ಹಲ್ಲೆ ಮಾಡಿದ್ದು, ಪ್ರದೀಪ್ ಈಶ್ವರ್​ ಕರೆಸುವಂತೆ ಧಮ್ಕಿ ಹಾಕಿದ ಆರೋಪ ಮಾಡಲಾಗಿದೆ. ಈ ಕುರಿತಾಗಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಸೆಕ್ಷನ್ 324, 504, 506, 34ರಡಿ ಪ್ರಕರಣ ದಾಖಲಾಗಿದೆ.

ಫಾಲ್ಸ್​ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಾಲುಜಾರಿ ಬಿದ್ದು ಯುವಕ ಸಾವು

ಚಿಕ್ಕಮಗಳೂರು: ಫಾಲ್ಸ್​ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಾಲುಜಾರಿ ಬಿದ್ದು ಯುವಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್​ನಲ್ಲಿ ದುರಂತ ಸಂಭವಿಸಿದೆ. ಹೈದರಾಬಾದ್ ಮೂಲದ ಪ್ರವಾಸಿಗ ಶ್ರವಣ್(25) ದುರ್ಮರಣ.

ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮನನೊಂದು ಮಗಳ ಜೊತೆ ಆತ್ಮಹತ್ಯೆಗೆ ಶರಣು

ಬೆಳಗ್ಗೆ ಬೈಕ್‌ನಲ್ಲಿ ಹೆಬ್ಬೆ ಫಾಲ್ಸ್​ಗೆ ಹೈದರಾಬಾದ್​​ನ ಇಬ್ಬರು ಯುವಕರು ಬಂದಿದ್ದರು. ಫಾಲ್ಸ್​ನಲ್ಲಿ ಸೆಲ್ಫಿ ತೆಗೆಯುವ ವೇಳೆಯಲ್ಲಿ ಓರ್ವನ ಕಾಲು ಜಾರಿದ್ದು, ಕಡಿಮೆ ಪ್ರಮಾಣದ ನೀರಿದ್ದ ಹಿನ್ನೆಲೆ ಬಂಡೆಗೆ ತಲೆ ಬಡಿದು ಮೃತಪಟ್ಟಿದ್ದಾರೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮರ ಉರುಳಿಬಿದ್ದು ಗಾಯಗೊಂಡಿದ್ದ ಮತ್ತೋರ್ವ ಸವಾರ ಸಾವು

ಬೆಳಗಾವಿ: ಮರ ಉರುಳಿಬಿದ್ದು ಗಾಯಗೊಂಡಿದ್ದ ಮತ್ತೋರ್ವ ಸವಾರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಬಳಿ ನಿನ್ನೆ ನಡೆದಿದೆ. ವಿಠ್ಠಲ್ ತಳವಾರ(20) ಮೃತ ಸವಾರ.

ಇದನ್ನೂ ಓದಿ: ಮೈಸೂರು; ಮಾರಕಾಸ್ತ್ರಗಳಿಂದ ಕೊಚ್ಚಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿ ಕೊಲೆ, ಆಪ್ತ ಸಹಾಯಕ ಅರೆಸ್ಟ್

ಬೈಕ್​ನಲ್ಲಿ ಮೂವರು ತೆರಳ್ತಿದ್ದಾಗ ಬೃಹತ್ ಮರ ಉರುಳಿ ಬಿದ್ದಿತ್ತು. ಸೋಮನಾಥ್ ಮುಚ್ಚಂಡಿಕರ್(21) ಸ್ಥಳದಲ್ಲೇ ಮೃತಪಟ್ಟಿದ್ದ. ಸ್ವಪ್ನಿಲ್ ದೇಸಾಯಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್