AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತುಲ್ ಆತ್ಮಹತ್ಯೆ ಕೇಸ್‌: ಬೆಂಗಳೂರು ಪೊಲೀಸ್​ ಮೂವರು ಆರೋಪಿಗಳನ್ನು ಖೆಡ್ಡಾಕ್ಕೆ ಬೀಳಿಸಿದ್ದೇ ರೋಚಕ

ಕೊನೆಗೂ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಮಾರತ್ತಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅತುಲ್‌ ಪತ್ನಿ ನಿಖಿತಾ, ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾ ಬಂಧಿಸಲಾಗಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದೇ ಒಂದು ರಣರೋಚಕ ಕಥೆ.  

ಅತುಲ್ ಆತ್ಮಹತ್ಯೆ ಕೇಸ್‌: ಬೆಂಗಳೂರು ಪೊಲೀಸ್​ ಮೂವರು ಆರೋಪಿಗಳನ್ನು ಖೆಡ್ಡಾಕ್ಕೆ ಬೀಳಿಸಿದ್ದೇ ರೋಚಕ
ಅತುಲ್ ಆತ್ಮಹತ್ಯೆ ಕೇಸ್‌: ಬೆಂಗಳೂರು ಪೊಲೀಸ್​ ಮೂವರು ಆರೋಪಿಗಳನ್ನು ಖೆಡ್ಡಾಕ್ಕೆ ಬೀಳಿಸಿದ್ದೇ ರೋಚಕ
Shivaprasad B
| Edited By: |

Updated on: Dec 15, 2024 | 4:07 PM

Share

ಬೆಂಗಳೂರು, ಡಿಸೆಂಬರ್​ 15: ಟೆಕ್ಕಿ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ಕೇಸ್‌ನಲ್ಲಿ ಕೊನೆಗೂ ಮೂವರು ಆರೋಪಿಗಳನ್ನು ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ಬಲೆಗೆ ಕೆಡವಿದ್ದಾರೆ. ಹರಿಯಾಣದ ಗುರುಗ್ರಾಮ್‌ನಲ್ಲಿದ್ದ ಎ-1 ಆರೋಪಿ ಪತ್ನಿ ನಿಖಿತಾ ಬಂಧನವಾಗಿದ್ದರೆ, ಅತ್ತ ಉತ್ತರಪ್ರದೇಶದ ಅಲಹಾಬಾದ್‌ನಲ್ಲಿ ಅತ್ತೆ ಎ2 ಆರೋಪಿ ನಿಶಾ ಸಿಂಘಾನಿಯಾ ಹಾಗೂ ಎ-3 ಬಾಮೈದ ಅನುರಾಗ್‌ ಸಿಂಘಾನಿಯಾರನ್ನ ಪೊಲೀಸರು ಅರೆಸ್ಟ್‌ ಮಾಡಿದಾರೆ. ಉತ್ತರ ಪ್ರದೇಶಕ್ಕೆ ತೆರಳಿದ್ದ ಕರ್ನಾಟಕ ಪೊಲೀಸ್​ ಆರೋಪಿಗಳನ್ನು ಬಂಧಿಸಿದ್ದೇ ರೋಚಕ ಕಥೆ.

ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್​​ ಬರೆದಿದ್ದು, ಪ್ರಮುಖವಾಗಿ ಪತ್ನಿ, ಅತ್ತೆ ಮತ್ತು ಬಾಮೈದನ ಹೆಸರು ಉಲ್ಲೇಖ ಮಾಡಿದ್ದರು. ಇತ್ತೀಚೆಗೆ ಬೆಂಗಳೂರು ಪೊಲೀಸರು ಬಾಮೈದ ಮತ್ತು ಅತ್ತೆಯನ್ನು ಬಂಧಿಸಿದ್ದರು. ಇದೀಗ ಅತುಲ್​ ಪತ್ನಿಯನ್ನು ಬಂಧಿಸಿದ್ದಾರೆ. ಅತುಲ್ ಪತ್ನಿ ನಿಖಿತಾಗಾಗಿ 2 ದಿನ ಪೊಲೀಸರು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ.

ಇದನ್ನೂ ಓದಿ: ಅತುಲ್​ ಸುಭಾಷ್​ ಆತ್ಮಹತ್ಯೆ: ಟೆಕ್ಕಿಯ ಪತ್ನಿ, ಅತ್ತೆ ಮತ್ತು ಭಾಮೈದ ಅರೆಸ್ಟ್​

ಹೀಗಾಗಿ ತಲೆಮರೆಸಿಕೊಂಡಿದ್ದ ನಿಖಿತಾ ಸೇರಿ ಎಲ್ಲ ಆರೋಪಿಗಳು ಅಲಹಾಬಾದ್ ಹೈಕೋರ್ಟ್​ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಯುಪಿ ಬಿಟ್ಟು ಬೇರೆಡೆ ತಲೆಮರೆಸಿಕೊಂಡಿದ್ದ ಶಂಕೆ ಇತ್ತು. ಮೊಬೈಲ್​ಗಳನ್ನ ಸ್ವಿಚ್ ಆಪ್ ಮಾಡಿಕೊಂಡು ಸ್ನೇಹಿತರ ಸಹಾಯ ಪಡೆದು ಒಂದು ಕಡೆ ಇರದೆ, ವಾಸಸ್ಥಳ ಬದಲಿಸುತ್ತಿದ್ದರು. ಆದರೆ ಒಂದು ಬಾರಿ ಕರೆ ಮಾಡಿ ನೆರವು ಕೇಳಿದ್ದರಿಂದ ಮೊಬೈಲ್ ಟವರ್ ಮೂಲಕ ಲಾಕ್ ಆಗಿದ್ದಾರೆ.

ನಿಷ್ಪಕ್ಷಪಾತವಾಗಿ ಪ್ರಕರಣದ ತನಿಖೆ ಮಾಡಲಾಗುತ್ತಿದೆ: ಡಿಸಿಪಿ ಡಾ.ಶಿವಕುಮಾರ್ ಗುಣಾರೆ

ಈ ಬಗ್ಗೆ ವೈಟ್ ಫೀಲ್ಡ್​​ ವಿಭಾಗದ ಡಿಸಿಪಿ ಡಾ.ಶಿವಕುಮಾರ್ ಗುಣಾರೆ ಮಾಧ್ಯಮದವರೊಂದಿಗೆ ಮಾತನಾಡಿ, ನಿಖಿತಾಳನ್ನು ಗುರುಗ್ರಾಮದ ಪಿಜಿಯೊಂದರಲ್ಲಿ ಬಂಧಿಸಲಾಗಿದೆ. ಇನ್ನಿಬ್ಬರನ್ನು ಪ್ರಯಾಗ್ ರಾಜ್​ನ ಹೋಟೆಲ್ ಬಳಿ ಬಂಧಿಸಲಾಗಿದೆ. ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್​ ಆದೇಶ ಮಾಡಿದೆ. ನಿಷ್ಪಕ್ಷಪಾತವಾಗಿ ಪ್ರಕರಣದ ತನಿಖೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್​: ಪುರುಷರ ಮೇಲೆ ದೌರ್ಜನ್ಯ, ಬದಲಾಗುತ್ತಾ ಕಾನೂನು? ಪರಮೇಶ್ವರ್​ ಹೇಳಿದ್ದಿಷ್ಟು

ಇನ್ನು ಅತುಲ್ ಸೂಸೈಡ್‌ ಕೇಸ್‌ ಕುರಿತಂತೆ ಟೆಕ್ನಿಕಲ್ ಟೀಂ ತನಿಖೆ ಚುರುಕುಗೊಳಿಸಿದೆ. ಪೊಲೀಸರಿಗೆ ಅತುಲ್‌ನ ಲ್ಯಾಪ್‌ಟಾಪ್, ಮೊಬೈಲ್ ಪಾಸ್‌ವರ್ಡ್ ಪತ್ತೆಯಾಗಿದ್ದರಿಂದ ತನಿಖೆ ಚುಕುಗೊಳಿಸಲು ನೆರವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ