AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತುಲ್ ಸಂತ್ರಸ್ತ ಅಲ್ಲ, ನಾನೇ ನಿಜವಾದ ಸಂತ್ರಸ್ತೆ: ಪೊಲೀಸರ ಮುಂದೆ ಸ್ಫೋಟಕ ಅಂಶ ಬಿಚ್ಚಿಟ್ಟ ಪತ್ನಿ

Techie Atul subhash death case: ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡು ಉತ್ತರ ಪ್ರದೇಶ ಮೂಲದ ಅತುಲ್​ ಸುಭಾಷ್ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ಅತುಲ್​ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಮೃತ ಅತುಲ್ ಪತ್ನಿ ನಿಖಿತಾ ಅವರಿಂದ ಪೊಲೀಸರು ಪ್ರಾಥಮಿಕ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ವೇಳೆ ಪೊಲೀಸರ ಮುಂದೆ ಅತುಲ್ ಪತ್ನಿ ನಿಖಿತಾ ಕೆಲ ಸ್ಫೋಟಕ ಅಂಶಗಳನ್ನು ಬಿಚ್ಚಿಟ್ಟಿದ್ದಾರೆ.

ಅತುಲ್ ಸಂತ್ರಸ್ತ ಅಲ್ಲ, ನಾನೇ ನಿಜವಾದ ಸಂತ್ರಸ್ತೆ: ಪೊಲೀಸರ ಮುಂದೆ ಸ್ಫೋಟಕ ಅಂಶ ಬಿಚ್ಚಿಟ್ಟ ಪತ್ನಿ
Atul Subhash Wife Nikita
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Dec 18, 2024 | 2:50 PM

Share

ಬೆಂಗಳೂರು, (ಡಿಸೆಂಬರ್ 18): ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶಾದ್ಯಂತ ಭಾರೀ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್​ ಪತ್ನಿ ನಿಖಿತಾ ಸಿಂಘಾನಿಯಾ ಅವರನ್ನು ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ವಿಚಾರಣೆಗೊಳಪಡಿಸಿದ್ದು, ಈ ವೇಳೆ ಕೆಲ ಸ್ಫೋಟಕ ಅಂಶಗಳನ್ನು ಬಿಚ್ಚಿಟ್ಟಿದ್ದಾರೆ. ಘಟನೆಯಲ್ಲಿ ಅತುಲ್ ಸಂತ್ರಸ್ತ ಅಲ್ಲ. ನಾನೇ ನಿಜವಾದ ಸಂತ್ರಸ್ತೆ ಎಂದು ನಿಖಿತಾ ಪೊಲೀಸರ ಮುಂದೆ ತನ್ನ ಅಳಲು ತೋಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ನನ್ನ ಪತಿ ಅತುಲ್ ಸಂತ್ರಸ್ತ ಅಲ್ಲ. ನಿಜವಾದ ಸಂತ್ರಸ್ತೆ ನಾನು. ಅಡುಗೆ ಚೆನ್ನಾಗಿ ಮಾಡಿಲ್ಲ ಎಂದು ಕಿರುಕುಳ ನೀಡುತ್ತಿದ್ದ.ನಾನ್ ವೆಜ್ ಮಾಡದಿದ್ದರೂ ಇವರು ಮಾಡಿ ಎಂದು ಒತ್ತಾಯಿಸುತ್ತಿದ್ದರು. ಇಷ್ಟೆಲ್ಲಾ ಅದರೂ ನಾನು ಮನೆ ಬಿಟ್ಟು ಹೋಗಿರಲಿಲ್ಲ. ಮನೆ ಬಿಟ್ಟು ಹೋಗುವಂತೆ ಮಾಡಿದ್ದು ಸಹ ಅತುಲ್ ಹೊರತು ನಾನಾಗಿಯೇ ಹೋಗಿಲ್ಲ ಎಂದು ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಅತುಲ್​ ಸುಭಾಷ್​ ಆತ್ಮಹತ್ಯೆ: ಪೊಲೀಸರು ಸೃಷ್ಟಿಸಿದ್ದ ವ್ಯೂಹಕ್ಕೆ ಆರೋಪಿಗಳು ಬಿದ್ದಿದ್ದು ಹೀಗೆ

ನಾನು ಮತ್ತು ಅತುಲ್ ಬೇರೆ ಬೇರೆ ಕಡೆ ವಾಸ ಮಾಡುತ್ತಿದ್ದೇವೆ . ಆತ ಮಾಡಿರುವ ಆರೋಪ ಸುಳ್ಳು, ಎಲ್ಲವನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ. 2020 ರಿಂದಲೂ ನಾವು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದೇವೆ. ಆತನ ಸಾವಿಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನನ್ನ ಯಾಕೆ ನೀವು ಬಂಧಿಸಿದ್ದೀರಿ ಎಂದು ಗೊತ್ತಿಲ್ಲ, ಕಾನೂನಾತ್ಮಕವಾಗಿ ಎಲ್ಲವನ್ನೂ ನೋಡಿಕೊಳ್ಳುತ್ತೇನೆ ಎಂದು ನಿಖಿತಾ, ಪೊಲೀಸರು ಮುಂದೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಭಾರೀ ಸುದ್ದಿಯಾಗುತ್ತಿದ್ದಂತೆಯೇ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಮನೆ ಬಿಟ್ಟು ನಾಪತ್ತೆಯಾಗಿದ್ದರು. ಆದರೂ ಸಹ ಮಾರತ್ತಹಳ್ಳಿ ಪೊಲೀಸರು ಉತ್ತರ ಪ್ರದೇಶಕ್ಕೆ ತೆರಳಿ, ಆರೋಪಿಗಳ ಮೊಬೈಲ್ ಫೋನ್ ಕಾಲ್‌ಗಳು ಮತ್ತು ಲೊಕೇಶನ್‌ಗಳನ್ನು ಬಳಸಿಕೊಂಡು ಅವರನ್ನು ಪತ್ತೆ ಮಾಡಿ ಹರಿಯಾಣದ ಗುರುಗ್ರಾಮ್ ಮತ್ತು ಪ್ರಯಾಗ್‌ರಾಜ್‌ನಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಸದ್ಯ ತನಿಖೆ ಚುರುಕುಗೊಂಡಿದ್ದು, ಪೊಲೀಸರು ಎಲ್ಲಾ ಆಯಾಮಾಗಳಲ್ಲಿ ಆರೋಪಿಗಳ ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ