AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವೃದ್ಧಿಯಲ್ಲಿ ಜೊತೆಜೊತೆಗೆ ಸಾಗೋಣ: ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್

ಬೆಂಗಳೂರು: ಹಲವು ಕ್ಷೇತ್ರಗಳಲ್ಲಿ ಭಾರತ ಮತ್ತು ಆಸ್ಟ್ರೇಲಿಯಾಗಳಿಗೆ ಸಮಾನ ಲಕ್ಷಣಗಳಿವೆ. ಪ್ರಜಾಪ್ರಭುತ್ವ ಪದ್ಧತಿಯನ್ನು ಅಳವಡಿಸಿಕೊಂಡಿರುವ ಎರಡೂ ದೇಶಗಳು ಅಭಿವೃದ್ಧಿಯಲ್ಲಿ ಜೊತೆಜೊತೆಗೆ ಸಾಗಬೇಕಿದೆ ಎಂದು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್​ ಮಾರಿಸನ್ ಹೇಳಿದರು. ಕೋವಿಡ್ ಲಕ್ಷಾಂತರ ಕುಟುಂಬಗಳ ನಡುವೆ ಅಂತರ ತಂದೊಡ್ಡಿದೆ. ಆರ್ಥಿಕವಾಗಿ ಕುಸಿಯುವಂತೆ ಮಾಡಿದೆ. ಆಧುನಿಕ ತಂತ್ರಜ್ಞಾನ ಈ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಸಹಕರಿಸುತ್ತಿದೆ. ಖಾಸಗಿ ದತ್ತಾಂಶ ರಕ್ಷಣೆ ತಂತ್ರಜ್ಞಾನದ ಮುಂದಿರುವ ಸವಾಲು. ಆರೋಗ್ಯ ವಲಯ, ರಕ್ಷಣೆ, ನಾಗರಿಕ ಸೌಲಭ್ಯಗಳಲ್ಲಿ ತಂತ್ರಜ್ಞಾನದ ಬಳಕೆ ಮುಂತಾದ ಕ್ಷೇತ್ರಗಳಲ್ಲಿ ಪರಸ್ಪರ ಕೊಡು-ಕೊಳ್ಳುವಿಕೆ […]

ಅಭಿವೃದ್ಧಿಯಲ್ಲಿ ಜೊತೆಜೊತೆಗೆ ಸಾಗೋಣ: ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್
ಸಾಧು ಶ್ರೀನಾಥ್​
| Edited By: |

Updated on:Nov 19, 2020 | 3:09 PM

Share

ಬೆಂಗಳೂರು: ಹಲವು ಕ್ಷೇತ್ರಗಳಲ್ಲಿ ಭಾರತ ಮತ್ತು ಆಸ್ಟ್ರೇಲಿಯಾಗಳಿಗೆ ಸಮಾನ ಲಕ್ಷಣಗಳಿವೆ. ಪ್ರಜಾಪ್ರಭುತ್ವ ಪದ್ಧತಿಯನ್ನು ಅಳವಡಿಸಿಕೊಂಡಿರುವ ಎರಡೂ ದೇಶಗಳು ಅಭಿವೃದ್ಧಿಯಲ್ಲಿ ಜೊತೆಜೊತೆಗೆ ಸಾಗಬೇಕಿದೆ ಎಂದು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್​ ಮಾರಿಸನ್ ಹೇಳಿದರು.

ಕೋವಿಡ್ ಲಕ್ಷಾಂತರ ಕುಟುಂಬಗಳ ನಡುವೆ ಅಂತರ ತಂದೊಡ್ಡಿದೆ. ಆರ್ಥಿಕವಾಗಿ ಕುಸಿಯುವಂತೆ ಮಾಡಿದೆ. ಆಧುನಿಕ ತಂತ್ರಜ್ಞಾನ ಈ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಸಹಕರಿಸುತ್ತಿದೆ. ಖಾಸಗಿ ದತ್ತಾಂಶ ರಕ್ಷಣೆ ತಂತ್ರಜ್ಞಾನದ ಮುಂದಿರುವ ಸವಾಲು. ಆರೋಗ್ಯ ವಲಯ, ರಕ್ಷಣೆ, ನಾಗರಿಕ ಸೌಲಭ್ಯಗಳಲ್ಲಿ ತಂತ್ರಜ್ಞಾನದ ಬಳಕೆ ಮುಂತಾದ ಕ್ಷೇತ್ರಗಳಲ್ಲಿ ಪರಸ್ಪರ ಕೊಡು-ಕೊಳ್ಳುವಿಕೆ ಹೆಚ್ಚಬೇಕಿದೆ ಎಂದರು.

ಆಸ್ಟ್ರೇಲಿಯಾ ಪ್ರಧಾನಿ ಬಾಯಲ್ಲಿ ಇನ್ಫೋಸಿಸ್! ಎರಡು ದೇಶಗಳ ಖಾಸಗಿ ಕಂಪನಿಗಳು ಸಹಭಾಗಿತ್ವ ಸಾಧಿಸಿರುವುದನ್ನು ಪ್ರಸ್ತಾಪಿಸಿದ ಮಾರಿಸನ್ ಅವರು ಇನ್ಫೋಸಿಸ್ ಹೆಸರನ್ನು ಪ್ರಸ್ತಾಪಿಸಿದರು. ಬೆಂಗಳೂರಿನ ಶೈಕ್ಷಣಿಕ ಸಂಸ್ಥೆಗಳು ಜಾಗತಿಕ ಮಟ್ಟದಲ್ಲಿ ಹೆಸರು ಗಳಿಸಿವೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಹೆಸರು ಮೊದಲ ಸಾಲಲ್ಲಿದೆ.

ಭಾರತ ಆಸ್ಟ್ರೇಲಿಯಾಗಳು ಸೈಬರ್ ಸೆಕ್ಯುರಿಟಿ, ಡಿಜಿಟಲ್ ಆರ್ಥಿಕತೆ ಕ್ಷೇತ್ರಗಳಲ್ಲಿ ಒಪ್ಪಂದ ಮಾಡಿಕೊಳ್ಳಲಿವೆ. ಇದು ಜಾಗತಿಕ ಮಟ್ಟದಲ್ಲಿ ಎರಡೂ ದೇಶಗಳ ಪ್ರಭಾವ ಹೆಚ್ಚಿಸಲಿದೆ ಎಂದು ಸಂತಸ ವ್ಯಕ್ತಪಡಿಸಿದರು. ನವೋದ್ಯಮಗಳ ಮೂಲಕ ವಿಶ್ವಾದ್ಯಂತ ಹೆಸರಾದ ಬೆಂಗಳೂರಿನ ಟೆಕ್ ಸಮ್ಮಿಟ್​ನಲ್ಲಿ ಭಾಗವಹಿಸುತ್ತಿರುವುದು ಖುಷಿ ತಂದಿದೆ ಎಂದರು.

ಇದನ್ನೂ ಓದಿ: Work From Anywhere ಜಾರಿಗೊಳಿಸುವ ಯೋಚನೆ ಸರ್ಕಾರಕ್ಕಿದೆ: ಪ್ರಧಾನಿ ಮೋದಿ

Bengaluru Tech Summit 2020 ಮುಂದಿನ 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ: CM ಯಡಿಯೂರಪ್ಪ

ದತ್ತಾಂಶ ಸುರಕ್ಷತಾ ಕಾನೂನು ರೂಪಿಸುತ್ತೇವೆ: ಮಾಹಿತಿ ತಂತ್ರಜ್ಞಾನ ಸಚಿವ ರವಿ ಶಂಕರ್ ಪ್ರಸಾದ್

Published On - 12:54 pm, Thu, 19 November 20

Follow Us
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ