AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM ಘೋಷಣೆ ಮಾಡಿದ್ದ ಪರಿಹಾರ ಮೊತ್ತ ಇನ್ನೂ ಆಟೋ ಚಾಲಕರ ಕೈ ಸೇರಿಲ್ಲ

ಬೆಂಗಳೂರು: ಲಾಕ್​ಡೌನ್​ ತಂದೊಡ್ಡಿದ್ದ ಸಂಕಷ್ಟಗಳಿಂದ ಬಳಲಿದ್ದ ರಾಜ್ಯದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಈ ಹಿಂದೆ ಪರಿಹಾರ ಘೋಷಿಸಿತ್ತು. ಮೇ 6ರಂದು ಘೋಷಣೆ ಮಾಡಿದ್ದ ಸಿಎಂ ಯಡಿಯೂರಪ್ಪ ಪ್ರತಿ ಚಾಲಕನಿಗೆ ತಲಾ 5 ಸಾವಿರ‌ ರೂಪಾಯಿ ಪರಿಹಾರ ನೀಡುವುದಾಗಿ ಹೇಳಿದ್ದರು. ಆದರೆ, ಈವರೆಗೂ ಕೇವಲ1,20,000ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮಾತ್ರ ಪರಿಹಾರ ನೀಡಿರುವುದಾಗಿ ಸಾರಿಗೆ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಅಂದಾಜು 7,75,000 ಆಟೋ ಹಾಗೂ ಟ್ಯಾಕ್ಸಿ ಚಾಲಕರು ಇದ್ದಾರೆ ಎಂದು ಕಳೆದ ಬಾರಿ ಘೋಷಣೆ ವೇಳೆ […]

CM ಘೋಷಣೆ ಮಾಡಿದ್ದ ಪರಿಹಾರ ಮೊತ್ತ ಇನ್ನೂ ಆಟೋ ಚಾಲಕರ ಕೈ ಸೇರಿಲ್ಲ
KUSHAL V
| Edited By: |

Updated on:Jul 24, 2020 | 6:52 PM

Share

ಬೆಂಗಳೂರು: ಲಾಕ್​ಡೌನ್​ ತಂದೊಡ್ಡಿದ್ದ ಸಂಕಷ್ಟಗಳಿಂದ ಬಳಲಿದ್ದ ರಾಜ್ಯದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಈ ಹಿಂದೆ ಪರಿಹಾರ ಘೋಷಿಸಿತ್ತು. ಮೇ 6ರಂದು ಘೋಷಣೆ ಮಾಡಿದ್ದ ಸಿಎಂ ಯಡಿಯೂರಪ್ಪ ಪ್ರತಿ ಚಾಲಕನಿಗೆ ತಲಾ 5 ಸಾವಿರ‌ ರೂಪಾಯಿ ಪರಿಹಾರ ನೀಡುವುದಾಗಿ ಹೇಳಿದ್ದರು. ಆದರೆ, ಈವರೆಗೂ ಕೇವಲ1,20,000ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮಾತ್ರ ಪರಿಹಾರ ನೀಡಿರುವುದಾಗಿ ಸಾರಿಗೆ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಅಂದಾಜು 7,75,000 ಆಟೋ ಹಾಗೂ ಟ್ಯಾಕ್ಸಿ ಚಾಲಕರು ಇದ್ದಾರೆ ಎಂದು ಕಳೆದ ಬಾರಿ ಘೋಷಣೆ ವೇಳೆ ಮುಖ್ಯಮಂತ್ರಿ ಹೇಳಿದ್ದರು. ಹೀಗಾಗಿ, ಪರಿಹಾರಕ್ಕಾಗಿ ಚಾಲಕರು ಅರ್ಜಿ ಸಲ್ಲಿಸಿದ್ದರು. ಆದರೆ, ಈ ಪೈಕಿ ನಾನಾ ಕಾರಣವೊಡ್ಡಿ ಭಾಗಶಃ ಅರ್ಜಿಗಳನ್ನ ಸಾರಿಗೆ ಇಲಾಖೆ ರದ್ದು ಮಾಡಿದೆ.

ಕೊನೆಗೆ 2,44,000 ಆಟೋ ಹಾಗೂ ಟ್ಯಾಕ್ಸಿ ಚಾಲಕರನ್ನ ಮಾತ್ರ ಪರಿಹಾರ ಪಡೆಯಲು ಪರಿಗಣಿಸಿದೆ. ಈ ಪೈಕಿ 1,20,000 ಚಾಲಕರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡಿರುವ ಬಗ್ಗೆ ಸಾರಿಗೆ ಇಲಾಖೆ‌ ಮಾಹಿತಿ ನೀಡಿದೆ. ಉಳಿದವರಿಗೆ ಪರಿಹಾರ ನೀಡಲು ಹಣ ಬಿಡುಗಡೆ ಮಾಡುವಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಪತ್ರ ಬರೆದಿದೆ.

Published On - 12:40 pm, Thu, 23 July 20

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ