AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ದುರಂತಕ್ಕೆ ಇನ್ನೊಂದು ಟ್ವಿಸ್ಟ್​; ಸ್ಫೋಟಕ ಸಾಗಿಸಿದ್ದ ಇನ್ನೂ ಒಂದು ವಾಹನದ ಚಾಲಕ ನಾಪತ್ತೆ!

ಘಟನೆಯ ಬಳಿಕ ಶಶಿ, ತನ್ನ ಬೊಲೆರೋ ಸಮೇತ ನಾಪತ್ತೆಯಾಗಿದ್ದಾನೆ. ತಂದೆ ಬೋರೇಗೌಡನಿಗೆ ಕರೆ ಮಾಡಿ ತಾನು ಬದುಕಿದ್ದಾಗಿಯೂ ಹೇಳಿಕೊಂಡಿದ್ದಾನೆ. ಈತ ಭದ್ರಾವತಿ ತಾಲೂಕಿನ ಆರ್​.ಎಚ್​.ನಗರ ಗ್ರಾಮದ ನಿವಾಸಿಯಾಗಿದ್ದು, ಆಟೋ ಓಡಿಸುತ್ತಿದ್ದ.

ಶಿವಮೊಗ್ಗ ದುರಂತಕ್ಕೆ ಇನ್ನೊಂದು ಟ್ವಿಸ್ಟ್​; ಸ್ಫೋಟಕ ಸಾಗಿಸಿದ್ದ ಇನ್ನೂ ಒಂದು ವಾಹನದ ಚಾಲಕ ನಾಪತ್ತೆ!
ಸ್ಫೋಟಗೊಂಡು ಛಿದ್ರವಾಗಿರುವ ವಾಹನ
Lakshmi Hegde
|

Updated on:Jan 23, 2021 | 11:23 AM

Share

ಶಿವಮೊಗ್ಗ: ಹುಣಸೋಡಿನಲ್ಲಿ ಜನವರಿ 21ರ ರಾತ್ರಿ ಭಾರೀ ಪ್ರಮಾಣದಲ್ಲಿ ಜಿಲಿಟಿನ್ ಕಡ್ಡಿಗಳು ತುಂಬಿದ್ದ ಬೊಲೆರೋ ವಾಹನ ಸ್ಫೋಟವಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಶಿ ಎನ್ನುವ ಮತ್ತೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸದ್ಯ ಶಶಿಯ ತಂದೆ ಬೋರೆಗೌಡರನ್ನು ವಶಕ್ಕೆ ಪಡೆದಿದ್ದಾರೆ.

ಜ. 21ರಂದು ಬೊಲೆರೋ ವಾಹನ ಸ್ಫೋಟಗೊಂಡು ಅದರಲ್ಲಿದ್ದ ಪ್ರವೀಣ ಮತ್ತು ಮಂಜುನಾಥ್​ ಇಬ್ಬರೂ ಮೃತಪಟ್ಟಿದ್ದರು. ಅಂದು ಈ ಶಶಿ ಮತ್ತೊಂದು ಬೊಲೆರೋದಲ್ಲಿ ಸ್ಫೋಟಕಗಳನ್ನು ತೆಗೆದುಕೊಂಡು ಹೋಗಿ ಅಲ್ಲಿ ಅನ್​ಲೋಡ್​ ಮಾಡಿ ವಾಪಸ್ ಬಂದಿದ್ದಾನೆ. ಶಶಿ ಇತ್ತ ಬಂದ ಕೂಡಲೆ ಅತ್ತ ಹುಣಸೋಡಿನಲ್ಲಿ ಭಯಾನಕ ಸ್ಫೋಟ ಸಂಭವಿಸಿದೆ.

ತಂದೆಗೆ ಫೋನ್ ಮಾಡಿ ತಾನು ಬದುಕಿದ್ದಾಗಿ ಹೇಳಿಕೊಂಡ ಬೊಲೆರೋ ವಾಹನದ ಚಾಲಕ ಈ ಘಟನೆಯ ಬಳಿಕ ಶಶಿ, ತನ್ನ ಬೊಲೆರೋ ವಾಹನದ ಸಮೇತ ನಾಪತ್ತೆಯಾಗಿದ್ದಾನೆ. ತಂದೆ ಬೋರೇಗೌಡನಿಗೆ ಕರೆ ಮಾಡಿ ತಾನು ಬದುಕಿದ್ದಾಗಿಯೂ ಹೇಳಿಕೊಂಡಿದ್ದಾನೆ. ಈತ ಭದ್ರಾವತಿ ತಾಲೂಕಿನ ಆರ್​.ಎಚ್​.ನಗರ ಗ್ರಾಮದ ನಿವಾಸಿಯಾಗಿದ್ದು, ಆಟೋ ಓಡಿಸುತ್ತಿದ್ದ. ಇತ್ತೀಚೆಗೆ ಹೊಸ ಕಾರನ್ನೂ ಖರೀದಿಸಿದ್ದ. ಅಷ್ಟೇ ಅಲ್ಲ, ಬೆಂಗಳೂರಿನಲ್ಲಿ ಸೈಟ್ ಕೂಡ ಖರೀದಿ ಮಾಡಿದ್ದ. ಕಡಿಮೆ ಅವಧಿಯಲ್ಲಿ ಇಷ್ಟು ಪ್ರಮಾಣದ ಆಸ್ತಿ ಮಾಡಿದ್ದು, ಗ್ರಾಮಸ್ಥರಲ್ಲಿ ಅಚ್ಚರಿಯನ್ನು ಮೂಡಿಸಿತ್ತು. ಇದೀಗ ಶಶಿಯ ಫೋನ್ ಕೂಡ ಸ್ವಿಚ್ ಆಫ್​ ಆಗಿದೆ. ಆತನ ಪತ್ತೆಗಾಗಿ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ.

Shivamogga Blast ಪ್ರಕರಣಕ್ಕೆ ತಮಿಳುನಾಡು ಲಿಂಕ್​, ಮೃತಪಟ್ಟವರೆಲ್ಲರು ಭದ್ರಾವತಿ ಮೂಲದವರು..!

Published On - 11:22 am, Sat, 23 January 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ