ಪ್ರಯಾಣಿಕನ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಬೆಂಗಳೂರು: ಆಟೋದಲ್ಲಿ ಮರೆತು ಹೋಗಿದ್ದ ಪ್ರಯಾಣಿಕನ ಹಣವನ್ನು ಹಿಂದಿರುಗಿಸುವ ಮೂಲಕ ಚಾಲಕ ರಮೇಶ್ ಬಾಬು ನಾಯಕ್ ಪ್ರಮಾಣಿಕತೆಯನ್ನು ಮೆರೆದಿದ್ದಾರೆ. ಮಾಲ್ಡೀವ್ಸ್​ನಲ್ಲಿ‌ ನೆಲೆಸಿರುವ ಭಾರತೀಯ ಮೂಲದವರಾದ ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಹಣದ ಬ್ಯಾಗ್ ಮರೆತು ಹೋಗಿದ್ದರು. ಸುಮಾರು 1.50 ಲಕ್ಷ ನಗದು ಹಾಗೂ 1200 ಯು.ಎಸ್ ಡಾಲರ್ ಹಣದ ಬ್ಯಾಗ್ ಅನ್ನು ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಬಿಟ್ಟು ಹೋಗಿದ್ದರು. ಇದನ್ನು ನೋಡಿದ ಚಾಲಕ ರಮೇಶ್ ಬಾಬು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಹಣದ ಬ್ಯಾಗ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ. ಆಟೋ ಚಾಲಕನ ಕಾರ್ಯ ಮೆಚ್ಚಿದ […]

ಪ್ರಯಾಣಿಕನ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ
ಸಾಧು ಶ್ರೀನಾಥ್​

Updated on: Dec 12, 2019 | 8:00 PM

ಬೆಂಗಳೂರು: ಆಟೋದಲ್ಲಿ ಮರೆತು ಹೋಗಿದ್ದ ಪ್ರಯಾಣಿಕನ ಹಣವನ್ನು ಹಿಂದಿರುಗಿಸುವ ಮೂಲಕ ಚಾಲಕ ರಮೇಶ್ ಬಾಬು ನಾಯಕ್ ಪ್ರಮಾಣಿಕತೆಯನ್ನು ಮೆರೆದಿದ್ದಾರೆ. ಮಾಲ್ಡೀವ್ಸ್​ನಲ್ಲಿ‌ ನೆಲೆಸಿರುವ ಭಾರತೀಯ ಮೂಲದವರಾದ ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಹಣದ ಬ್ಯಾಗ್ ಮರೆತು ಹೋಗಿದ್ದರು.

ಸುಮಾರು 1.50 ಲಕ್ಷ ನಗದು ಹಾಗೂ 1200 ಯು.ಎಸ್ ಡಾಲರ್ ಹಣದ ಬ್ಯಾಗ್ ಅನ್ನು ಡಾ.ಎಂ.ಆರ್.ಭಾಸ್ಕರ್ ಆಟೋದಲ್ಲಿ ಬಿಟ್ಟು ಹೋಗಿದ್ದರು. ಇದನ್ನು ನೋಡಿದ ಚಾಲಕ ರಮೇಶ್ ಬಾಬು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಹಣದ ಬ್ಯಾಗ್ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ. ಆಟೋ ಚಾಲಕನ ಕಾರ್ಯ ಮೆಚ್ಚಿದ ಪೊಲೀಸರು ರಮೇಶ್​ ಬಾಬುಗೆ ಸನ್ಮಾನ ಮಾಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us