AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರ ಪ್ರತಿಭಟನೆ ಬಿಸಿ ಜೋರು, ಆಟೋ ಚಾಲಕರಿಂದ ದುಪ್ಪಟ್ಟು ಹಣ ವಸೂಲಿ

ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಬಸ್​ಗಳು ರಸ್ತೆಗೆ ಇಳಿಯುತ್ತಿಲ್ಲ. ಜನ ಬಸ್ ನಿಲ್ದಾಣಗಳಲ್ಲಿ ಗಂಟೆಗಟ್ಟಲೆ ಕಾದು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆಟೋ ಚಾಲಕರು ಇದರ ‘ಲಾಭ’ ಪಡೆದುಕೊಳ್ಳುತ್ತಿದ್ದಾರೆ.

ಸಾರಿಗೆ ನೌಕರರ ಪ್ರತಿಭಟನೆ ಬಿಸಿ ಜೋರು, ಆಟೋ ಚಾಲಕರಿಂದ ದುಪ್ಪಟ್ಟು ಹಣ ವಸೂಲಿ
ಆಯೇಷಾ ಬಾನು
ಆಯೇಷಾ ಬಾನು| Edited By: sandhya thejappa|

Updated on:Dec 11, 2020 | 11:48 AM

Share

ಗದಗ: ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಬಸ್​ಗಳು ರಸ್ತೆಗೆ ಇಳಿಯುತ್ತಿಲ್ಲ. ಜನ ಬಸ್ ನಿಲ್ದಾಣಗಳಲ್ಲಿ ಗಂಟೆಗಟ್ಟಲೆ ಕಾದು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆಟೋ ಚಾಲಕರು ಇದರ ‘ಲಾಭ’ ಪಡೆದುಕೊಳ್ಳುತ್ತಿದ್ದಾರೆ.

ರಾಜ್ಯದಲ್ಲಿ ಇಂತಹ ಸ್ಥಿತಿ ನಿರ್ಮಾಣವಾದ ಪರಿಣಾಮ ಸಾರಿಗೆ ನೌಕರರ ಪ್ರತಿಭಟನೆಯ ಲಾಭ ಪಡೆದು ಖಾಸಗಿ ವಾಹನಗಳು, ಆಟೋ ಚಾಲಕರು ಹಣ ವಸೂಲಿಗಿಳಿದಿದ್ದಾರೆ. ಗದಗ ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ಪ್ರಯಾಣಿಕರಿಂದ ಬೇಕಾಬಿಟ್ಟಿ ಹಣ ವಸೂಲಿ ಮಾಡಲಾಗುತ್ತಿದೆ.

10 ಕಿಲೋಮೀಟರ್​ಗೆ 200 ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಆಟೋ ಚಾರ್ಜ್ ಕೇಳಿ ಪ್ರಯಾಣಿಕರು ಕಂಗಾಲಾಗಿದ್ದಾರೆ. ಇನ್ನು ಕ್ರೂಸರ್ ವಾಹನಗಳ ಚಾಲಕರಿಂದಲೂ ಎರಡು ಪಟ್ಟು ಹಣ ವಸೂಲಿ ಮಾಡಲಾಗುತ್ತಿದೆ. ಹೆಚ್ಚಿನ ಹಣವಿಲ್ಲದೇ ಬಡ ಪ್ರಯಾಣಿಕರು ಧರ್ಮ ಸಂಕಟದಲ್ಲಿ ಸಿಲುಕಿಕೊಂಡಿದ್ದಾರೆ. ಖಾಸಗಿ ವಾಹನಹಳ ಅಟ್ಟಹಾಸಕ್ಕೆ ಬ್ರೇಕ್ ಹಾಕುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ.

ಇದು ಕೇವಲ ಗದಗದ ಪರಿಸ್ಥಿತಿ ಅಲ್ಲ. ರಾಜ್ಯಾದ್ಯಂತ ಇದೇ ರೀತಿಯ ಘಟನೆಗಳು ನಡೆಯುತ್ತಿವೆ. ಓಲಾ, ಊಬರ್ ಸಹ ಪ್ರಯೋಜನವಿಲ್ಲದಂತಾಗಿದೆ. ಕೆಲಸಕ್ಕೆ ಹೋಗಬೇಕಿದ್ದ ಸಿಬ್ಬಂದಿ ಬಸ್ ಟ್ಯಾಕ್ಸಿ ಇಲ್ಲದೆ ಪರಿತಪಿಸುತ್ತಿದ್ದಾರೆ.

ಕೊಪ್ಪಳದಲ್ಲಿ ಪ್ರಯಾಣಿಕರಿಂದ  ಹಣ ವಸೂಲಿ ಮಾಡುತ್ತಿರುವ ಖಾಸಗಿ ವಾಹನ ಮಾಲಿಕರು:

ಈ ಹಿಂದೆ ಕೊಪ್ಪಳದಿಂದ ಮುಂಡರಗಿಗೆ ಹೋಗಲು ಪ್ರಯಾಣಿಕರು 40 ರೂ. ನೀಡುತ್ತಿದ್ದರು. ಆದರೆ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಇಂದು ಖಾಸಗಿ ವಾಹನ ಮಾಲಿಕರು 20 ರೂ. ಹೆಚ್ಚು ಅಂದರೆ 60 ರೂಪಾಯಿಯನ್ನು ವಸೂಲಿ ಮಾಡುತ್ತಿದ್ದಾರೆ. ಕೊಪ್ಪಳದಿಂದ ಗದಗಕ್ಕೆ ಹೋಗಲು 65 ರೂ. ನೀಡುತ್ತಿದ್ದ ಜನರಿಂದ ಇದೀಗ 150 ರೂಪಾಯಿಯನ್ನು ವಸೂಲಿ ಮಾಡುತ್ತಿದ್ದಾರೆ.

ಮನೆಯಿಂದ ಹೊರಡುವಾಗ ರಾಜಧಾನಿ ಜನರೇ ಎಚ್ಚರ.. ಎಲ್ಲೆಲ್ಲಿ ಸಾರಿಗೆ ಪ್ರತಿಭಟನೆ ಬಿಸಿ ಹೇಗಿದೆ?

Published On - 10:37 am, Fri, 11 December 20

Follow Us
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್