AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನಗಳ ಫಿಟ್​ನೆಸ್ ಪರೀಕ್ಷೆಗೆ ಆಟೊಮ್ಯಾಟಿಕ್ ಟೆಸ್ಟಿಂಗ್ ಸ್ಟೇಶನ್: ಹೇಗಿರುತ್ತೆ ಹೊಸ ವ್ಯವಸ್ಥೆ?

ಕರ್ನಾಟಕದ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ವಾಹನಗಳ ಫಿಟ್‌ನೆಸ್ ಪರೀಕ್ಷೆಗೆ ಆಟೊಮ್ಯಾಟಿಕ್ ಟೆಸ್ಟಿಂಗ್ ಸ್ಟೇಶನ್​ಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಸರ್ಕಾರಿ-ಖಾಸಗಿ ಸಹಭಾಗಿತ್ವದಡಿ ಈ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ಇದರಿಂದ ಪಾರದರ್ಶಕತೆ ಹೆಚ್ಚಿ ಭ್ರಷ್ಟಾಚಾರ ಕಡಿಮೆಯಾಗುವ ನಿರೀಕ್ಷೆಯಿದೆ. ನೆಲಮಂಗಲದಲ್ಲಿ ರಾಜ್ಯದ ಮೊದಲ ಸ್ವಯಂಚಾಲಿತ ಪರೀಕ್ಷಾ ಕೇಂದ್ರವನ್ನು ಈಗಾಗಲೇ ಆರಂಭಿಸಲಾಗಿದೆ.

ವಾಹನಗಳ ಫಿಟ್​ನೆಸ್ ಪರೀಕ್ಷೆಗೆ ಆಟೊಮ್ಯಾಟಿಕ್ ಟೆಸ್ಟಿಂಗ್ ಸ್ಟೇಶನ್: ಹೇಗಿರುತ್ತೆ ಹೊಸ ವ್ಯವಸ್ಥೆ?
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Feb 24, 2025 | 12:56 PM

ಬೆಂಗಳೂರು, ಫೆಬ್ರವರಿ 24: ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಫಿಟ್‌ನೆಸ್ ಪ್ರಮಾಣಪತ್ರಗಳಿಗಾಗಿ ಬರುವ ವಾಹನಗಳ ಮ್ಯಾನುವಲ್ ಫಿಟ್​ನೆಸ್ ಪರೀಕ್ಷೆಗೆ ಬದಲಾಗಿ ಆಟೊಮ್ಯಾಟಿಕ್ ಟೆಸ್ಟಿಂಗ್ ಸ್ಟೇಶನ್​ಗಳನ್ನು ಆರಂಭಿಸಲು ಸಾರಿಗೆ ಇಲಾಖೆ ಚಿಂತನೆ ನಡೆಸಿರುವುದಾಗಿ ವರದಿಯಾಗಿದೆ. ಸರ್ಕಾರಿ ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ಆಟೊಮ್ಯಾಟಿಕ್ ಟೆಸ್ಟಿಂಗ್ ಸ್ಟೇಶನ್​ಗಳನ್ನು (ATS) ಸ್ಥಾಪಿಸಲು ಉದ್ದೇಶಿಸಲಾಗಿದೆ.

ಆಟೊಮ್ಯಾಟಿಕ್ ಟೆಸ್ಟಿಂಗ್ ಸ್ಟೇಶನ್​ಗಳು ನೇರವಾಗಿ ಪಾಸ್ ಅಥವಾ ಫೇಲ್ ಪ್ರಮಾಣಪತ್ರಗಳನ್ನು ನೀಡಲಿವೆ. ದಕ್ಷತೆ, ಪಾರದರ್ಶಕತೆಯನ್ನು ಹೆಚ್ಚಿಸುವುದು ಮತ್ತು ಭ್ರಷ್ಟಾಚಾರವನ್ನು ಕಡಿಮೆ ಮಾಡುವ ಉದ್ದೇಶದೊಂದಿಗೆ ಈ ಕ್ರಮಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ. ರಾಜ್ಯದ ಮೊದಲ ಅಂತಹ ಆಟೊಮ್ಯಾಟಿಕ್ ಟೆಸ್ಟಿಂಗ್ ಸ್ಟೇಶನ್​ ಅನ್ನು ನೆಲಮಂಗಲದಲ್ಲಿ ಪರಿಚಯಿಸಲಾಗಿದೆ.

ಪ್ರಸ್ತುತ, ಫಿಟ್‌ನೆಸ್ ಪ್ರಮಾಣಪತ್ರ ನವೀಕರಣಕ್ಕಾಗಿ ಬರುವ ವಾಹನಗಳನ್ನು ಮ್ಯಾನುವಲ್ ಆಗಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ನಾವು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮತ್ತು ಆಟೊಮ್ಯಾಟಿಕ್​ಗೆ ಬದಲಾಗುವ ಗುರಿಯನ್ನು ಹೊಂದಿದ್ದೇವೆ ಎಂದು ಸಾರಿಗೆ ಆಯುಕ್ತ ಯೋಗೀಶ್ ಎಎಂ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ. ಖಾಸಗಿ ವಾಹನಗಳಿಗೆ, ವಾಹನ ನೋಂದಣಿ ದಿನಾಂಕದಿಂದ 15 ವರ್ಷಗಳವರೆಗೆ ಎಫ್‌ಸಿ ಮಾನ್ಯವಾಗಿರುತ್ತದೆ ಮತ್ತು ನಂತರ ಪ್ರತಿ ಐದು ವರ್ಷಗಳಿಗೊಮ್ಮೆ ನವೀಕರಿಸಬೇಕು.

ಮತ್ತೊಂದೆಡೆ, ವಾಣಿಜ್ಯ ವಾಹನಗಳು ನೋಂದಣಿ ದಿನಾಂಕದಿಂದ ಎಂಟು ವರ್ಷಕ್ಕಿಂತ ಕಡಿಮೆ ಹಳೆಯದಾಗಿದ್ದರೆ ಪ್ರತಿ ಎರಡು ವರ್ಷಗಳಿಗೊಮ್ಮೆ ತಮ್ಮ ಎಫ್‌ಸಿಗಳನ್ನು ನವೀಕರಿಸಬೇಕು. ಎಂಟು ವರ್ಷಗಳ ನಂತರ, ವಾರ್ಷಿಕವಾಗಿ ನವೀಕರಣಗಳು ಅಗತ್ಯವಾಗಿರುತ್ತದೆ.

ಆಟೊಮ್ಯಾಟಿಕ್ ಎಫ್​ಸಿ ರಿನೀವಲ್ ಹೇಗೆ?

ಆಟೊಮ್ಯಾಟಿಕ್ ಟೆಸ್ಟಿಂಗ್​ನಲ್ಲಿ ವಾಹನಗಳನ್ನು ಯಂತ್ರದ ಮೂಲಕ ಸಂಪೂರ್ಣವಾಗಿ ಪರೀಕ್ಷಿಸಲಾಗುತ್ತದೆ. ಮಾನವ ಹಸ್ತಕ್ಷೇಪಗಳಿಗೆ ಇಲ್ಲಿ ಯಾವುದೇ ಅವಕಾಶವಿಲ್ಲ. ಅನೇಕ ಪರೀಕ್ಷೆಗಳು ಇರುತ್ತವೆ. ಸೂಕ್ತವಾದ ಮತ್ತು ಎಲ್ಲಾ ನಿಗದಿತ ಮಾನದಂಡಗಳನ್ನು ಅನುಸರಿಸುವ ವಾಹನಗಳಿಗೆ ಮಾತ್ರ ಫಿಟ್​ನೆಟ್ ಪಾಸ್ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ ಮತ್ತು ರಸ್ತೆಗಳಲ್ಲಿ ಕಾರ್ಯನಿರ್ವಹಿಸಬಹುದು ಎಂಬುದನ್ನು ಖಾತರಿಪಡಿಸಲಾಗುತ್ತದೆ ಎಂದು ಯೋಗೀಶ್ ಎಎಂ ಹೇಳಿದ್ದಾರೆ.

ಇದನ್ನೂ ಓದಿ: ಕುಡಿಯುವ ನೀರು ವ್ಯರ್ಥ ಮಾಡಿದವರಿಗೆ ಜಲಮಂಡಳಿ ದಂಡಾಸ್ತ್ರ: 5.60 ಲಕ್ಷ ರೂ ವಸೂಲಿ

ಇದಲ್ಲದೆ, ಸ್ಥಳಾವಕಾಶ ಲಭ್ಯವಿರುವ 13 ಸ್ಥಳಗಳಲ್ಲಿ ಆಟೊಮ್ಯಾಟಿಕ್ ಟೆಸ್ಟಿಂಗ್ ಸ್ಟೇಶನ್​ಗಳನ್ನು ಸ್ಥಾಪಿಸಲು ಇಲಾಖೆ ಯೋಜಿಸಿದೆ ಮತ್ತು ಅವುಗಳನ್ನು ಡಿಬಿಎಫ್‌ಒಟಿ ಮಾದರಿಯಡಿಯಲ್ಲಿ ಕಾರ್ಯಗತಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಸ್ಥಳಾವಕಾಶ ಲಭ್ಯವಿಲ್ಲದ 19 ಸ್ಥಳಗಳಲ್ಲಿ, ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ಐದು ಕ್ಲಸ್ಟರ್‌ಗಳಾಗಿ ಗುಂಪು ಮಾಡಿ ಬಿಒಒ ಮಾದರಿಯಡಿಯಲ್ಲಿ ಕೆಲಸಗಳನ್ನು ಕಾರ್ಯಗತಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:52 am, Mon, 24 February 25

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ