AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗ್ನಲ್ ಜಂಪ್ ಕೃತಿಗೆ ಕಸಾಪ ದತ್ತಿ ಪ್ರಶಸ್ತಿ

2024ರ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೂ ಪ್ರಕಟಗೊಂಡ ಕೃತಿಗಳನ್ನು ಒಟ್ಟು 54 ಪ್ರಕಾರದ ದತ್ತಿಗಳ 58 ಪ್ರಶಸ್ತಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ಆಯ್ಕೆ ಮಾಡಿದ್ದು, ಈ ಪೈಕಿ ಕನ್ನಡ ಟಿವಿ9 ಕ್ರಿಯೇಟಿವ್ ಪ್ರೊಡ್ಯೂಸರ್ ರವೀಂದ್ರ ಮುದ್ದಿ ಅವರ ಸಿಗ್ನಲ್ ಜಂಪ್ ಕಥಾ ಸಂಕಲನ ಪ್ರಕಟಿಸಿದ್ದ ಅವ್ವ ಪುಸ್ತಕಾಲಯದ ಅನಂತ ಕುಣಿಗಲ್ ಅವರಿಗೆ 2024ನೇ ಸಾಲಿನ ಪ್ರಕಾಶಕ ಆರ್. ಎನ್. ಹಬ್ಬು ದತ್ತಿ ಪ್ರಶಸ್ತಿ ಲಭಿಸಿದೆ.

ಸಿಗ್ನಲ್ ಜಂಪ್ ಕೃತಿಗೆ ಕಸಾಪ ದತ್ತಿ ಪ್ರಶಸ್ತಿ
Signal Jump
ರಮೇಶ್ ಬಿ. ಜವಳಗೇರಾ
|

Updated on:Feb 02, 2026 | 3:55 PM

Share

ಬೆಂಗಳೂರು, (ಫೆಬ್ರವರಿ 02): ಕನ್ನಡ ಟಿವಿ9 ಕ್ರಿಯೇಟಿವ್ ಪ್ರೊಡ್ಯೂಸರ್ ರವೀಂದ್ರ ಮುದ್ದಿ ಅವರ ಸಿಗ್ನಲ್ ಜಂಪ್ (Signal Jump) ಕಥಾ ಸಂಕಲನ ಪ್ರಕಟಿಸಿದ್ದ ಅವ್ವ ಪುಸ್ತಕಾಲಯದ ಅನಂತ ಕುಣಿಗಲ್ ಅವರಿಗೆ 2024ನೇ ಸಾಲಿನ ಪ್ರಕಾಶಕ ಆರ್. ಎನ್. ಹಬ್ಬು ದತ್ತಿ ಪ್ರಶಸ್ತಿ ಲಭಿಸಿದೆ. 2024ರ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೂ ಪ್ರಕಟಗೊಂಡ ಕೃತಿಗಳನ್ನು ಒಟ್ಟು 54 ಪ್ರಕಾರದ ದತ್ತಿಗಳ 58 ಪ್ರಶಸ್ತಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ಆಯ್ಕೆ ಮಾಡಿದೆ. ವಿವಿಧ ಪ್ರಕಾರದ ಸಾಹಿತ್ಯದ ಪ್ರಶಸ್ತಿಗಾಗಿ ಸುಮಾರು 900 ಕೃತಿಗಳಲ್ಲಿ ಬಂದಿದ್ದವು. ಸಾಹಿತಿ ಕೆ. ಮರುಳಸಿದ್ದಪ್ಪ ಅವರ ಅಧ್ಯಕ್ಷತೆಯ ಸಮಿತಿಯು ಪ್ರಕಾಶಕರಿಗೆ ನೀಡುವ ದತ್ತಿ ಪ್ರಶಸ್ತಿಗಾಗಿ ಸಿಗ್ನಲ್ ಜಂಪ್ ಕೃತಿ ಆಯ್ಕೆ ಮಾಡಿದೆ

ರವೀಂದ್ರ ಮುದ್ದಿ ಅವರು ಬರೆದ ವಿಭಿನ್ನ ಹಾಗೂ ಹೊಸತನ ಹೊಂದಿದ ಒಟ್ಟು ಕಥೆಗಳು ಸಿಗ್ನಲ್ ಜಂಪ್ ಕೃತಿಯಲ್ಲಿದ್ದು ಹಲವಾರು ಓದುಗರ ಮೆಚ್ಚುಗೆಗೆ ಪಾತ್ರವಾಗಿತ್ತು. ಈಗ ಈ ಕೃತಿಯ ಮೂಲಕ ಅವ್ವ ಪುಸ್ತಕಾಲಯಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ದತ್ತಿ ಪ್ರಶಸ್ತಿ ಸಿಕ್ಕಿದೆ.

2024ರ ಜನವರಿ 1ರಿಂದ ಡಿಸೆಂಬರ್ 31ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು, ಪ್ರಕಾಶಕರಿಂದ ದತ್ತಿ ಪ್ರಶಸ್ತಿಗೆ ಆಹ್ವಾನಿಸಲಾಗಿತ್ತು. ಈ ಪ್ರಶಸ್ತಿಗಳಿಗೆ 900 ಕೃತಿಗಳು ಬಂದಿದ್ದವು. ಸಾಹಿತಿ ಕೆ ಮರುಳುಸಿದ್ದಪ್ಪ ಅವರ ಅಧ್ಯಕ್ಷತೆಯ ಸಮಿತಿ ಸಾಹಿತಿದ ವಿವಿಧ ಪ್ರಕಾರಳಲ್ಲಿ ಕೃತಿಗಳನ್ನು ಆಯ್ಕೆ ಮಾಡಿದೆ.

ಸಿಗ್ನಲ್ ಜಂಪ್’ ನಲ್ಲಿ ನಾಡಿನ ಹತ್ತು ಬರಹಗಾರರು

ರವೀಂದ್ರ ಮುದ್ದಿ ಅವರು ಬರೆದ ‘ಸಿಗ್ನಲ್ ಜಂಪ್’ ಕಥಾ ಸಂಕಲನದಲ್ಲಿ ಒಟ್ಟು ವಿಭಿನ್ನ ಹತ್ತು ಕಥೆಗಳಿವೆ. ನಾಡಿನ ಹತ್ತು ಪ್ರಮುಖ ಬರಹಗಾರರು ಇಲ್ಲಿನ ಒಂದೊಂದು ಕಥೆಯನ್ನು ಒಬ್ಬೊಬ್ಬರು ಓದಿ ಆ ಕಥೆಯ ಬಗ್ಗೆ ಅವಲೋಕನ ಮಾಡಿದ್ದಾರೆ. ವಿಶೇಷ ಅಂದರೆ ಆ ಹತ್ತು ಬರಹಗಾರರು ಬರೆದ ಕಥೆಗಳ ಬಗೆಗಿನ ಅನಿಸಿಕೆ ಕೂಡಾ ರವೀಂದ್ರ ಮುದ್ದಿ ಅವರ ‘ಸಿಗ್ನಲ್ ಜಂಪ್’ ಕಥಾ ಸಂಕಲನದಲ್ಲಿ ಅಚ್ಚಾಗಿವೆ.

ಕನ್ನಡ ಟಿವಿ9 ಕ್ರಿಯೇಟಿವ್ ಪ್ರೊಡ್ಯೂಸರ್ ರವೀಂದ್ರ ಮುದ್ದಿ ಅವರ ‘ಸಿಗ್ನಲ್ ಜಂಪ್’ ಕಥಾ ಸಂಕಲನ ಕಳೆದ ಅಂದರೆ 2025ರ ಜುಲೈ 14ರಂದು ಅವ್ವ ಪುಸ್ತಕಾಲಯದಿಂದ ಬಿಡುಗಡೆಯಾಗಿತ್ತು. ಬಳಿಕ ಈ ಪುಸ್ತಕ ಸಾಕಷ್ಟು ಓದಗರ ಗಮನಸೆಳೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Mon, 2 February 26

ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು