ಸಿಗ್ನಲ್ ಜಂಪ್ ಕೃತಿಗೆ ಕಸಾಪ ದತ್ತಿ ಪ್ರಶಸ್ತಿ

2024ರ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೂ ಪ್ರಕಟಗೊಂಡ ಕೃತಿಗಳನ್ನು ಒಟ್ಟು 54 ಪ್ರಕಾರದ ದತ್ತಿಗಳ 58 ಪ್ರಶಸ್ತಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ಆಯ್ಕೆ ಮಾಡಿದ್ದು, ಈ ಪೈಕಿ ಕನ್ನಡ ಟಿವಿ9 ಕ್ರಿಯೇಟಿವ್ ಪ್ರೊಡ್ಯೂಸರ್ ರವೀಂದ್ರ ಮುದ್ದಿ ಅವರ ಸಿಗ್ನಲ್ ಜಂಪ್ ಕಥಾ ಸಂಕಲನ ಪ್ರಕಟಿಸಿದ್ದ ಅವ್ವ ಪುಸ್ತಕಾಲಯದ ಅನಂತ ಕುಣಿಗಲ್ ಅವರಿಗೆ 2024ನೇ ಸಾಲಿನ ಪ್ರಕಾಶಕ ಆರ್. ಎನ್. ಹಬ್ಬು ದತ್ತಿ ಪ್ರಶಸ್ತಿ ಲಭಿಸಿದೆ.

ಸಿಗ್ನಲ್ ಜಂಪ್ ಕೃತಿಗೆ ಕಸಾಪ ದತ್ತಿ ಪ್ರಶಸ್ತಿ

Updated on: Feb 02, 2026 | 3:55 PM

ಬೆಂಗಳೂರು, (ಫೆಬ್ರವರಿ 02): ಕನ್ನಡ ಟಿವಿ9 ಕ್ರಿಯೇಟಿವ್ ಪ್ರೊಡ್ಯೂಸರ್ ರವೀಂದ್ರ ಮುದ್ದಿ ಅವರ ಸಿಗ್ನಲ್ ಜಂಪ್ (Signal Jump) ಕಥಾ ಸಂಕಲನ ಪ್ರಕಟಿಸಿದ್ದ ಅವ್ವ ಪುಸ್ತಕಾಲಯದ ಅನಂತ ಕುಣಿಗಲ್ ಅವರಿಗೆ 2024ನೇ ಸಾಲಿನ ಪ್ರಕಾಶಕ ಆರ್. ಎನ್. ಹಬ್ಬು ದತ್ತಿ ಪ್ರಶಸ್ತಿ ಲಭಿಸಿದೆ. 2024ರ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೂ ಪ್ರಕಟಗೊಂಡ ಕೃತಿಗಳನ್ನು ಒಟ್ಟು 54 ಪ್ರಕಾರದ ದತ್ತಿಗಳ 58 ಪ್ರಶಸ್ತಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ಆಯ್ಕೆ ಮಾಡಿದೆ. ವಿವಿಧ ಪ್ರಕಾರದ ಸಾಹಿತ್ಯದ ಪ್ರಶಸ್ತಿಗಾಗಿ ಸುಮಾರು 900 ಕೃತಿಗಳಲ್ಲಿ ಬಂದಿದ್ದವು. ಸಾಹಿತಿ ಕೆ. ಮರುಳಸಿದ್ದಪ್ಪ ಅವರ ಅಧ್ಯಕ್ಷತೆಯ ಸಮಿತಿಯು ಪ್ರಕಾಶಕರಿಗೆ ನೀಡುವ ದತ್ತಿ ಪ್ರಶಸ್ತಿಗಾಗಿ ಸಿಗ್ನಲ್ ಜಂಪ್ ಕೃತಿ ಆಯ್ಕೆ ಮಾಡಿದೆ

ರವೀಂದ್ರ ಮುದ್ದಿ ಅವರು ಬರೆದ ವಿಭಿನ್ನ ಹಾಗೂ ಹೊಸತನ ಹೊಂದಿದ ಒಟ್ಟು ಕಥೆಗಳು ಸಿಗ್ನಲ್ ಜಂಪ್ ಕೃತಿಯಲ್ಲಿದ್ದು ಹಲವಾರು ಓದುಗರ ಮೆಚ್ಚುಗೆಗೆ ಪಾತ್ರವಾಗಿತ್ತು. ಈಗ ಈ ಕೃತಿಯ ಮೂಲಕ ಅವ್ವ ಪುಸ್ತಕಾಲಯಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ದತ್ತಿ ಪ್ರಶಸ್ತಿ ಸಿಕ್ಕಿದೆ.

2024ರ ಜನವರಿ 1ರಿಂದ ಡಿಸೆಂಬರ್ 31ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು, ಪ್ರಕಾಶಕರಿಂದ ದತ್ತಿ ಪ್ರಶಸ್ತಿಗೆ ಆಹ್ವಾನಿಸಲಾಗಿತ್ತು. ಈ ಪ್ರಶಸ್ತಿಗಳಿಗೆ 900 ಕೃತಿಗಳು ಬಂದಿದ್ದವು. ಸಾಹಿತಿ ಕೆ ಮರುಳುಸಿದ್ದಪ್ಪ ಅವರ ಅಧ್ಯಕ್ಷತೆಯ ಸಮಿತಿ ಸಾಹಿತಿದ ವಿವಿಧ ಪ್ರಕಾರಳಲ್ಲಿ ಕೃತಿಗಳನ್ನು ಆಯ್ಕೆ ಮಾಡಿದೆ.

ಸಿಗ್ನಲ್ ಜಂಪ್’ ನಲ್ಲಿ ನಾಡಿನ ಹತ್ತು ಬರಹಗಾರರು

ರವೀಂದ್ರ ಮುದ್ದಿ ಅವರು ಬರೆದ ‘ಸಿಗ್ನಲ್ ಜಂಪ್’ ಕಥಾ ಸಂಕಲನದಲ್ಲಿ ಒಟ್ಟು ವಿಭಿನ್ನ ಹತ್ತು ಕಥೆಗಳಿವೆ. ನಾಡಿನ ಹತ್ತು ಪ್ರಮುಖ ಬರಹಗಾರರು ಇಲ್ಲಿನ ಒಂದೊಂದು ಕಥೆಯನ್ನು ಒಬ್ಬೊಬ್ಬರು ಓದಿ ಆ ಕಥೆಯ ಬಗ್ಗೆ ಅವಲೋಕನ ಮಾಡಿದ್ದಾರೆ. ವಿಶೇಷ ಅಂದರೆ ಆ ಹತ್ತು ಬರಹಗಾರರು ಬರೆದ ಕಥೆಗಳ ಬಗೆಗಿನ ಅನಿಸಿಕೆ ಕೂಡಾ ರವೀಂದ್ರ ಮುದ್ದಿ ಅವರ ‘ಸಿಗ್ನಲ್ ಜಂಪ್’ ಕಥಾ ಸಂಕಲನದಲ್ಲಿ ಅಚ್ಚಾಗಿವೆ.

ಕನ್ನಡ ಟಿವಿ9 ಕ್ರಿಯೇಟಿವ್ ಪ್ರೊಡ್ಯೂಸರ್ ರವೀಂದ್ರ ಮುದ್ದಿ ಅವರ ‘ಸಿಗ್ನಲ್ ಜಂಪ್’ ಕಥಾ ಸಂಕಲನ ಕಳೆದ ಅಂದರೆ 2025ರ ಜುಲೈ 14ರಂದು ಅವ್ವ ಪುಸ್ತಕಾಲಯದಿಂದ ಬಿಡುಗಡೆಯಾಗಿತ್ತು. ಬಳಿಕ ಈ ಪುಸ್ತಕ ಸಾಕಷ್ಟು ಓದಗರ ಗಮನಸೆಳೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Mon, 2 February 26

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us