AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಉದ್ಘಾಟನೆ: ಕುಂಟಬೊಮ್ಮನಹಳ್ಳಿ ಸರ್ಕಾರಿ ಶಾಲೆಗೆ ಇಂದು ಅನಧಿಕೃತ ರಜೆ ಘೋಷಣೆ

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಹಾಗೂ ಬಾಲರಾಮನ ಪ್ರಾಣಾ ಪ್ರತಿಷ್ಠಾಪನೆಗೆ ಕೆಲವೊಂದು ರಾಜ್ಯಗಳಲ್ಲಿ ರಜೆ ಘೋಷಿಸಲಾಗಿದ್ದು, ಕರ್ನಾಟಕ ಸರ್ಕಾರವು ರಜೆ ಘೋಷಣೆ ಮಾಡಿಲ್ಲ. ಅದಾಗ್ಯೂ, ನೆಲಮಂಗಲ ತಾಲೂಕಿನ ಕುಂಟಬೊಮ್ಮನಹಳ್ಳಿ ಸರ್ಕಾರಿ ಶಾಲೆಗೆ ಅನಧಿಕೃತವಾಗಿ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ಶಿಕ್ಷಕರ ವಿರುದ್ಧ ಕ್ರಮಕ್ಕೆ ಬಿಇಒ ಮುಂದಾಗಿದ್ದಾರೆ.

ರಾಮ ಮಂದಿರ ಉದ್ಘಾಟನೆ: ಕುಂಟಬೊಮ್ಮನಹಳ್ಳಿ ಸರ್ಕಾರಿ ಶಾಲೆಗೆ ಇಂದು ಅನಧಿಕೃತ ರಜೆ ಘೋಷಣೆ
ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆ ಕುಂಟಬೊಮ್ಮನಹಳ್ಳಿ ಸರ್ಕಾರಿ ಶಾಲೆಗೆ ಇಂದು ಅನಧಿಕೃತ ರಜೆ ಘೋಷಣೆ
ಬಿ ಮೂರ್ತಿ, ನೆಲಮಂಗಲ
| Edited By: Rakesh Nayak Manchi|

Updated on:Jan 22, 2024 | 3:46 PM

Share

ನೆಲಮಂಗಲ, ಜ.22: ಅಯೋಧ್ಯೆ ರಾಮ ಮಂದಿರ (Ayodhya Ram Mandir) ಲೋಕಾರ್ಪಣೆ ಹಾಗೂ ಬಾಲರಾಮನ ಪ್ರಾಣಾ ಪ್ರತಿಷ್ಠಾಪನೆಗೆ ಕೆಲವೊಂದು ರಾಜ್ಯಗಳಲ್ಲಿ ರಜೆ ಘೋಷಿಸಲಾಗಿದ್ದು, ಕರ್ನಾಟಕ ಸರ್ಕಾರವು ರಜೆ ಘೋಷಣೆ ಮಾಡಿಲ್ಲ. ಅದಾಗ್ಯೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ಕುಂಟಬೊಮ್ಮನಹಳ್ಳಿ ಸರ್ಕಾರಿ ಶಾಲೆಗೆ ಅನಧಿಕೃತವಾಗಿ ರಜೆ ಘೋಷಣೆ ಮಾಡಲಾಗಿದೆ.

ಕುಂಟಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿವರೆಗೆ ಒಟ್ಟು 44 ಮಕ್ಕಳು ವ್ಯಾಸಾಂಗ ಮಾಡುತ್ತಿದ್ದಾರೆ. ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಮುಖ್ಯ ಶಿಕ್ಷಕ ಪುಟ್ಟರಾಜು, ಶಿಕ್ಷಕ ನಾರಾಯಣ್ ಶಾಲೆಗೆ ರಜೆ ಘೋಷಣೆ ಮಾಡಿದ್ದಾರೆ. ಶಿಕ್ಷಕರು ಕೂಡ ಶಾಲೆಗೆ ಗೈರಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಬಿಇಒ ತಿಮ್ಮಯ್ಯ ಅವರು, ವರದಿ ಪಡೆದು ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಹೋಲಿಕೆ ಮಾಡುತ್ತಾ ರಾಜ್ಯದಲ್ಲಿ ಇಂದು ರಜೆ ನೀಡದಿರುವುದನ್ನ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಗೆ ರಾಜ್ಯದಲ್ಲಿ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆಯೇ ಸ್ಪಷ್ಟಪಡಿಸಿದ್ದರು. ಇಂದು ಮತ್ತೆ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡ ಅವರು, ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ರಜೆ ನೀಡಿದ್ಯಾ? ಕಾರ್ಯಕ್ರಮ ನಡೆಯುತ್ತಿರುವುದು ಅಯೋಧ್ಯೆಯಲ್ಲಿ. ಆದರೆ ಕೇರಳ, ದೆಹಲಿ (ಜನವರಿ 22 ರಂದು ದೆಹಲಿ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ), ಪಶ್ಚಿಮ ಬಂಗಾಳದಲ್ಲಿ ರಜೆ ಇದ್ಯಾ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Mon, 22 January 24

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ