ರಾಮ ಮಂದಿರ ಉದ್ಘಾಟನೆ: ಕುಂಟಬೊಮ್ಮನಹಳ್ಳಿ ಸರ್ಕಾರಿ ಶಾಲೆಗೆ ಇಂದು ಅನಧಿಕೃತ ರಜೆ ಘೋಷಣೆ

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಹಾಗೂ ಬಾಲರಾಮನ ಪ್ರಾಣಾ ಪ್ರತಿಷ್ಠಾಪನೆಗೆ ಕೆಲವೊಂದು ರಾಜ್ಯಗಳಲ್ಲಿ ರಜೆ ಘೋಷಿಸಲಾಗಿದ್ದು, ಕರ್ನಾಟಕ ಸರ್ಕಾರವು ರಜೆ ಘೋಷಣೆ ಮಾಡಿಲ್ಲ. ಅದಾಗ್ಯೂ, ನೆಲಮಂಗಲ ತಾಲೂಕಿನ ಕುಂಟಬೊಮ್ಮನಹಳ್ಳಿ ಸರ್ಕಾರಿ ಶಾಲೆಗೆ ಅನಧಿಕೃತವಾಗಿ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ಶಿಕ್ಷಕರ ವಿರುದ್ಧ ಕ್ರಮಕ್ಕೆ ಬಿಇಒ ಮುಂದಾಗಿದ್ದಾರೆ.

ರಾಮ ಮಂದಿರ ಉದ್ಘಾಟನೆ: ಕುಂಟಬೊಮ್ಮನಹಳ್ಳಿ ಸರ್ಕಾರಿ ಶಾಲೆಗೆ ಇಂದು ಅನಧಿಕೃತ ರಜೆ ಘೋಷಣೆ
ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆ ಕುಂಟಬೊಮ್ಮನಹಳ್ಳಿ ಸರ್ಕಾರಿ ಶಾಲೆಗೆ ಇಂದು ಅನಧಿಕೃತ ರಜೆ ಘೋಷಣೆ
Edited By: Rakesh Nayak Manchi

Updated on: Jan 22, 2024 | 3:46 PM

ನೆಲಮಂಗಲ, ಜ.22: ಅಯೋಧ್ಯೆ ರಾಮ ಮಂದಿರ (Ayodhya Ram Mandir) ಲೋಕಾರ್ಪಣೆ ಹಾಗೂ ಬಾಲರಾಮನ ಪ್ರಾಣಾ ಪ್ರತಿಷ್ಠಾಪನೆಗೆ ಕೆಲವೊಂದು ರಾಜ್ಯಗಳಲ್ಲಿ ರಜೆ ಘೋಷಿಸಲಾಗಿದ್ದು, ಕರ್ನಾಟಕ ಸರ್ಕಾರವು ರಜೆ ಘೋಷಣೆ ಮಾಡಿಲ್ಲ. ಅದಾಗ್ಯೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ಕುಂಟಬೊಮ್ಮನಹಳ್ಳಿ ಸರ್ಕಾರಿ ಶಾಲೆಗೆ ಅನಧಿಕೃತವಾಗಿ ರಜೆ ಘೋಷಣೆ ಮಾಡಲಾಗಿದೆ.

ಕುಂಟಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿವರೆಗೆ ಒಟ್ಟು 44 ಮಕ್ಕಳು ವ್ಯಾಸಾಂಗ ಮಾಡುತ್ತಿದ್ದಾರೆ. ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಮುಖ್ಯ ಶಿಕ್ಷಕ ಪುಟ್ಟರಾಜು, ಶಿಕ್ಷಕ ನಾರಾಯಣ್ ಶಾಲೆಗೆ ರಜೆ ಘೋಷಣೆ ಮಾಡಿದ್ದಾರೆ. ಶಿಕ್ಷಕರು ಕೂಡ ಶಾಲೆಗೆ ಗೈರಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಬಿಇಒ ತಿಮ್ಮಯ್ಯ ಅವರು, ವರದಿ ಪಡೆದು ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಹೋಲಿಕೆ ಮಾಡುತ್ತಾ ರಾಜ್ಯದಲ್ಲಿ ಇಂದು ರಜೆ ನೀಡದಿರುವುದನ್ನ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಗೆ ರಾಜ್ಯದಲ್ಲಿ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆಯೇ ಸ್ಪಷ್ಟಪಡಿಸಿದ್ದರು. ಇಂದು ಮತ್ತೆ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡ ಅವರು, ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ರಜೆ ನೀಡಿದ್ಯಾ? ಕಾರ್ಯಕ್ರಮ ನಡೆಯುತ್ತಿರುವುದು ಅಯೋಧ್ಯೆಯಲ್ಲಿ. ಆದರೆ ಕೇರಳ, ದೆಹಲಿ (ಜನವರಿ 22 ರಂದು ದೆಹಲಿ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ), ಪಶ್ಚಿಮ ಬಂಗಾಳದಲ್ಲಿ ರಜೆ ಇದ್ಯಾ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Mon, 22 January 24

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us