ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ತಕ್ಕ ಉತ್ತರ ನೀಡಲಿದ್ದೇವೆ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಅರುಣ್​ ಕುಮಾರ್​ ಬೆಳ್ಳಿ

Updated on: Nov 11, 2023 | 11:59 AM

ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ನೇಮಕ ಮಾಡಿದ್ದು ರಾಜ್ಯದ ಎಲ್ಲ ಬಿಜೆಪಿ ನಾಯಕರಿಗೆ ಸಂತಸ ಉಂಟುಮಾಡಿಲ್ಲ. ಬಿಎಸ್ ಯಡಿಯೂರಪ್ಪ ಕುಟುಂಬವನ್ನು ನಖಶಿಖಾಂತ ದ್ವೇಷಿಸುವ ಬಸನಗೌಡ ಪಾಟೀಲ ಯತ್ನಾಳ್ ಮತ್ತು ಅವರಂಥ ಕೆಲ ನಾಯಕರನ್ನು ವಿಜಯೇಂದ್ರ ಹೇಗೆ ವಿಶ್ವಾಸಕ್ಕೆ ತೆಗೆದದುಕೊಳ್ಳುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ. ಯತ್ನಾಳ್ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು ಸುಳ್ಳಲ್ಲ.

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ಹೊಸ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಇಂದು ಬೆಂಗಳೂರಲ್ಲಿ ಗಾಂಧಿನಗರ ಬೂತ್ ನಂಬರ್ 23 ಅಧ್ಯಕ್ಷ ಶಶಿಧರ್ ಮನೆಗೆ ಭೇಟಿ ನೀಡಿ ಹೊರಬಂದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಸಿದ್ದರಾಮಯ್ಯ ಸರ್ಕಾರ (Siddaramaiah government) ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ಗಳನ್ನು ದಾಖಲಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರೇನೆ ಮಾಡಿದರೂ ಬಿಜೆಪಿ ಕಾರ್ಯಕರ್ತರು ಹೋರಾಟ ನಿಲ್ಲಿಸಲ್ಲ, ಬಿಜೆಪಿಯ ಪ್ರತಿ ಕಾರ್ಯಕರ್ತನ ರಕ್ತಕಣಗಳಲ್ಲಿ ಹೋರಾಟದ ಅಂಶವಿದೆ. ತಮ್ಮ ಕಾರ್ಯಕರ್ತರು ಯಾವತ್ತೂ ಹೆದರಲ್ಲ ಮತ್ತು ಹೋರಾಟದಿಂದ ಹಿಂತೆಗೆಯಲ್ಲ ಎಂದು ಹೇಳಿದರು. ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ (Lok Sabha polls) ಕಾಂಗ್ರೆಸ್ ತಕ್ಕ ಉತ್ತರ ನೀಡುವುದಾಗಿ ಹೇಳಿದ ವಿಜಯೇಂದ್ರ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ.

ಆದರೆ, ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ನೇಮಕ ಮಾಡಿದ್ದು ರಾಜ್ಯದ ಎಲ್ಲ ಬಿಜೆಪಿ ನಾಯಕರಿಗೆ ಸಂತಸ ಉಂಟುಮಾಡಿಲ್ಲ. ಬಿಎಸ್ ಯಡಿಯೂರಪ್ಪ ಕುಟುಂಬವನ್ನು ನಖಶಿಖಾಂತ ದ್ವೇಷಿಸುವ ಬಸನಗೌಡ ಪಾಟೀಲ ಯತ್ನಾಳ್ ಮತ್ತು ಅವರಂಥ ಕೆಲ ನಾಯಕರನ್ನು ವಿಜಯೇಂದ್ರ ಹೇಗೆ ವಿಶ್ವಾಸಕ್ಕೆ ತೆಗೆದದುಕೊಳ್ಳುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ. ಯತ್ನಾಳ್ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು ಸುಳ್ಳಲ್ಲ. ಸಂಸದ ಡಿವಿ ಸದಾನಂದ ಗೌಡ ನಿನ್ನೆಯಷ್ಟೇ ಕುಟಂಬ ರಾಜಕಾರಣವನ್ನು ಹೀಯಾಳಿಸುವ ಹೇಳಿಕೆ ನೀಡಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 11, 2023 11:57 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.