AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್ ಖರ್ಗೆ ಎಲ್ಲಾ ಇಲಾಖೆಗಳ ಸಚಿವ: ವಿಜಯೇಂದ್ರ ವ್ಯಂಗ್ಯ

ಯಾದಗಿರಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಅಪಾರ ಬೆಳೆ ಹಾನಿ ಉಂಟಾದ ಕಾರಣ, ಬೆಳೆಹಾನಿ ಪ್ರದೇಶಕ್ಕೆ ರಾಜ್ಯ ಬಿಜೆಪಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ವೇಳೆ ಸಿಎಂ ಮತ್ತು ಸಚಿವರ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದು, ಕೂಡಲೇ ವಿಶೇಷ ಪ್ಯಾಕೇಜ್​ ಘೋಷಣೆಗೆ ಒತ್ತಾಯಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಎಲ್ಲಾ ಇಲಾಖೆಗಳ ಸಚಿವ: ವಿಜಯೇಂದ್ರ ವ್ಯಂಗ್ಯ
ಪ್ರಿಯಾಂಕ್ ಖರ್ಗೆ ಎಲ್ಲಾ ಇಲಾಖೆಗಳ ಸಚಿವ: ವಿಜಯೇಂದ್ರ ವ್ಯಂಗ್ಯ
ಅಮೀನ್​ ಸಾಬ್​
| Edited By: |

Updated on: Sep 30, 2025 | 5:49 PM

Share

ಯಾದಗಿರಿ, ಸೆಪ್ಟೆಂಬರ್​ 30: ಪ್ರಿಯಾಂಕ್ ಖರ್ಗೆ (Priyank Kharge) ಎಲ್ಲಾ ಇಲಾಖೆಗಳ ಸಚಿವರೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ವ್ಯಂಗ್ಯವಾಡಿದ್ದಾರೆ. ಪ್ರವಾಹ ಪೀಡಿತ ಪ್ರದೇಗಳಿಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರೇ ನಿಮ್ಮ ಕ್ಷೇತ್ರದಲ್ಲಿ ಪರಿಸ್ಥಿತಿ ಏನಾಗಿದೆ ಮೊದಲು ನೋಡಿ. ಆನಂತರ ರಾಜ್ಯ, ಅಂತಾರಾಷ್ಟ್ರೀಯ ಮಟ್ಟದ ವಿಚಾರ ಮಾತನಾಡಿ ಎಂದಿದ್ದಾರೆ.

ವೈಮಾನಿಕ ಸಮೀಕ್ಷೆ ಮೂಲಕ ಪ್ರವಾಹ ಪೀಡಿತ ಪ್ರದೇಗಳನ್ನ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಇದೇ ವೇಳೆ ಕಿಡಿಕಾರಿದ ಬಿ.ವೈ. ವಿಜಯೇಂದ್ರ, ನಾನು ಈ ವಿಷಯ ಪ್ರಸ್ತಾಪಿಸಿದರೆ ರಾಜಕೀಯದ ಮಾತು ಅನಿಸುತ್ತೆ. ಆದರೆ, ಸಿಎಂ ಸಿದ್ದರಾಮಯ್ಯನವರೇ ರೈತರ ವಿಚಾರದಲ್ಲಿ ಉದಾಸೀನತೆ ಬೇಡ. ವೈಮಾನಿಕ ಸಮೀಕ್ಷೆ ನಡೆಸಿ ಕೇಂದ್ರಕ್ಕೆ ವರದಿ ಕೊಟ್ಟಿದ್ದೇವೆಂದರೆ ಸಾಲದು. ಕೇಂದ್ರದತ್ತ ಕೈತೋರಿಸಿ ಸಿಎಂ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು. ಕೇಂದ್ರ ಸರ್ಕಾರ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡಿರುವ ಉದಾಹರಣೆ ಇಲ್ಲದ ಕಾರಣ ರೈತರು ಸಂಕಷ್ಟದಲ್ಲಿದ್ದಾಗ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: 4 ನಿಗಮ ಮಂಡಳಿಗೆ ಪದಾಧಿಕಾರಿಗಳ ನೇಮಕ: ಯಾರ್ಯಾರಿಗೆ ಜವಾಬ್ದಾರಿ?

2019ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದಾಗ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು. NDRF ನಿಯಮದಲ್ಲಿ ಒಣಭೂಮಿಗೆ ₹6,000 ಇತ್ತು ₹16,000 ನೀಡಿದ್ದರು. ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು ಎಂಬುದನ್ನೂ ಈ ವೇಳೆ ವಿಜಯೇಂದ್ರ ನೆನಪಿಸಿದ್ದಾರೆ. ಅಲ್ಲದೆ, ಸದ್ಯ ಪ್ರತಿ ಎಕರೆಗೆ ಕನಿಷ್ಠ 25-30 ಸಾವಿರ ರೂ. ಪರಿಹಾರ ನೀಡಬೇಕು. ಸಮಸ್ಯೆ ಇರುವಲ್ಲಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ ನೀಡಬೇಕು ಎಂದೂ ಆಗ್ರಹಿಸಿದ್ದಾರೆ.

ವಿಶೇಷ ಪ್ಯಾಕೇಜ್​ಗೆ ಬೇಡಿಕೆ

ಕಂದಾಯ, ಕೃಷಿ ಸಚಿವರಿಗೆ ಕಲಬುರಗಿ, ಯಾದಗಿರಿ ಜಿಲ್ಲೆ ನೆನಪಾಗ್ತಿಲ್ವಾ ಎಂದು ಪ್ರಶ್ನಿಸಿರುವ ವಿಜಯೇಂದ್ರ, ಕಲ್ಯಾಣ ಕರ್ನಾಟಕ ಭಾಗದ ರೈತರು ಮತ್ತು ಬಡವರ ಬಗ್ಗೆ ತಾತ್ಸಾರ ಯಾಕೆ? ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ಹೇಳುವ ಜೊತೆಗೆ, ಕಲ್ಯಾಣ ಕರ್ನಾಟಕ ಭಾಗಕ್ಕೆ ಸರ್ಕಾರ ವಿಶೇಷ ಪ್ಯಾಕೇಜ್ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಅಪಾರ ಬೆಳೆ ಹಾನಿ ಉಂಟಾದ ಕಾರಣ, ಬೆಳೆಹಾನಿ ಪ್ರದೇಶಕ್ಕೆ ರಾಜ್ಯ ಬಿಜೆಪಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಶಹಾಪುರ ತಾಲೂಕಿನ ಸಾದ್ಯಾಪುರ ಗ್ರಾಮಕ್ಕೆ ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಭೇಟಿ ವೇಳೆ ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ. 3 ಬಾರಿ ಹತ್ತಿ ನಾಟಿ ಮಾಡಿದ್ವಿ, ಆದ್ರೆ ಎಲ್ಲವೂ ಈಗ ನೀರುಪಾಲಾಗಿದೆ. ಹೀಗಾಗಿ ನಮಗೆ ಸೂಕ್ತ ಪರಿಹಾರ ಕೊಡಿಸಿ ಎಂದು ರೈತರು ಅಲವತ್ತುಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?