AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಾಬಾಬುಡನ್ ಗಿರಿ ಅರ್ಚಕರಿಗಿಲ್ಲ ಸಂಬಳ; ಭಿಕ್ಷಾಟನೆ ಮಾಡಿ ಹಣ ಸಂಗ್ರಹಿಸಲು ಬಿಜೆಪಿ ಚಿಂತನೆ

ದಕ್ಷಿಣ ಭಾರತದ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ರಾಜ್ಯ ಸರ್ಕಾರದ ನಡೆಯಿಂದ ಮತ್ತೊಂದು ವಿವಾದ ಮುನ್ನೆಲೆಗೆ ಬಂದಿದೆ. ಬಿಜೆಪಿ ಸರ್ಕಾರ ನೇಮಕ ಮಾಡಿದ್ದ ಅರ್ಚಕರಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಸಂಬಳ ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದ್ದು, ಅರ್ಚಕರಿಗೆ ಸಂಬಳ ನೀಡದೆ ಇದ್ರೆ ಭಿಕ್ಷಾಟನೆ ಮೂಲಕ ಹಣ ಸಂಗ್ರಹಿಸಿ ಸಂಬಳ ನೀಡಲು ಬಿಜೆಪಿ, ಹಿಂದೂ ಸಂಘಟನೆ ಪ್ಲಾನ್ ಮಾಡಿದೆ.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಾಬಾಬುಡನ್ ಗಿರಿ ಅರ್ಚಕರಿಗಿಲ್ಲ ಸಂಬಳ; ಭಿಕ್ಷಾಟನೆ ಮಾಡಿ ಹಣ ಸಂಗ್ರಹಿಸಲು ಬಿಜೆಪಿ ಚಿಂತನೆ
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಾಬಾಬುಡನ್ ಗಿರಿ ಅರ್ಚಕರಿಗಿಲ್ಲ ಸಂಬಳ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಆಯೇಷಾ ಬಾನು|

Updated on: Jun 13, 2024 | 11:22 AM

Share

ಚಿಕ್ಕಮಗಳೂರು, ಜೂನ್.13: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ದಕ್ಷಿಣ ಭಾರತದ ಅತಿದೊಡ್ಡ ವಿವಾದಿತ ಸ್ಥಳ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ(Baba Budangiri Dargah) ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ (Congress Government) ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿರುವ ಮುಜಾವರ್ ಗಳಿಗೆ ಸಂಬಳ ನೀಡಿ, ಆರ್ಚಕರಿಗೆ ಸಂಬಳ ನೀಡುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಇದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದು ಆರ್ಚಕರ ಸಂಬಳದ ವಿವಾದ ಹೊಸ ತಿರುವು ಪಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡಿ ಹಿಂದೂಗಳಿಗೆ ಅನ್ಯಾಯ ಮಾಡಲಾಗಿದೆ ಎಂಬ ಆರೋಪವನ್ನ MLC ಸಿ.ಟಿ. ರವಿ ಮಾಡಿದ್ದು ರಾಜ್ಯ ಸರ್ಕಾರದ ವಿರುದ್ಧ ಭಿಕ್ಷಾಟನೆ ಅಸ್ತ್ರ ಪ್ರಯೋಗಿಸಿದೆ.

ಬಿಜೆಪಿ ಸರ್ಕಾರ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಹಿಂದೂ ಸಂಘಟನೆಗಳ ಒತ್ತಾಯಕ್ಕೆ ಮಣಿದು ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಇಬ್ಬರು ಆರ್ಚಕರನ್ನ ನೇಮಕ ಮಾಡಿತ್ತು. ಬಳಿಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಒಂದೂವರೆ ವರ್ಷ ಕಳೆದ್ರು ಸಂಬಳ ನೀಡಿಲ್ಲ ಎಂಬುದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಭಿಕ್ಷಾಟನೆ ಮೂಲಕ ಹಣ ಸಂಗ್ರಹಿಸಿ ಆರ್ಚಕರಿಗೆ ನೀಡುವ ಅಭಿಯಾನಕ್ಕೆ ಪ್ಲಾನ್ ಮಾಡಿದ್ದು ಬಿಜೆಪಿ ಕೂಡ ಕೈ ಜೋಡಿಸಲಿದೆ.

ಇದನ್ನೂ ಓದಿ: ಕಳೆದ 5 ತಿಂಗಳಿಂದ ಬಿಡುಗಡೆ ಆಗದ ಹಾಲಿನ ಪ್ರೋತ್ಸಾಹ ಧನ; ಸರ್ಕಾರದ ವಿರುದ್ಧ ರೈತರ ಆಕ್ರೋಶ

ಅರ್ಚಕರ ನೇಮಕದಿಂದ ಖುಷಿಯಾಗಿದ್ದ ಹಿಂದೂ ಸಂಘಟನೆಗಳು ಅರ್ಚಕರಿಗೆ ಸಂಬಳ ನೀಡುತ್ತಿಲ್ಲ ಎಂಬ ವಿಚಾರಕ್ಕೆ ಆಕ್ರೋಶಗೊಂಡಿದ್ದು, ದಶಕಗಳ ಕಾಲ‌ ನಡೆದಿದ್ದ ಹೋರಾಟವನ್ನ ಮತ್ತಷ್ಟು ವಿಭಿನ್ನಗೊಳಿಸಿ ರಾಜ್ಯ ಸರ್ಕಾರವನ್ನ ಮುಜುಗರ ಪಡಿಸಲು ಪ್ಲಾನ್ ಮಾಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ