AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಾಬಾಬುಡನ್ ಗಿರಿ ಅರ್ಚಕರಿಗಿಲ್ಲ ಸಂಬಳ; ಭಿಕ್ಷಾಟನೆ ಮಾಡಿ ಹಣ ಸಂಗ್ರಹಿಸಲು ಬಿಜೆಪಿ ಚಿಂತನೆ

ದಕ್ಷಿಣ ಭಾರತದ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ರಾಜ್ಯ ಸರ್ಕಾರದ ನಡೆಯಿಂದ ಮತ್ತೊಂದು ವಿವಾದ ಮುನ್ನೆಲೆಗೆ ಬಂದಿದೆ. ಬಿಜೆಪಿ ಸರ್ಕಾರ ನೇಮಕ ಮಾಡಿದ್ದ ಅರ್ಚಕರಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಸಂಬಳ ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದ್ದು, ಅರ್ಚಕರಿಗೆ ಸಂಬಳ ನೀಡದೆ ಇದ್ರೆ ಭಿಕ್ಷಾಟನೆ ಮೂಲಕ ಹಣ ಸಂಗ್ರಹಿಸಿ ಸಂಬಳ ನೀಡಲು ಬಿಜೆಪಿ, ಹಿಂದೂ ಸಂಘಟನೆ ಪ್ಲಾನ್ ಮಾಡಿದೆ.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಾಬಾಬುಡನ್ ಗಿರಿ ಅರ್ಚಕರಿಗಿಲ್ಲ ಸಂಬಳ; ಭಿಕ್ಷಾಟನೆ ಮಾಡಿ ಹಣ ಸಂಗ್ರಹಿಸಲು ಬಿಜೆಪಿ ಚಿಂತನೆ
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಾಬಾಬುಡನ್ ಗಿರಿ ಅರ್ಚಕರಿಗಿಲ್ಲ ಸಂಬಳ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು|

Updated on: Jun 13, 2024 | 11:22 AM

Share

ಚಿಕ್ಕಮಗಳೂರು, ಜೂನ್.13: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ದಕ್ಷಿಣ ಭಾರತದ ಅತಿದೊಡ್ಡ ವಿವಾದಿತ ಸ್ಥಳ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ(Baba Budangiri Dargah) ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ (Congress Government) ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿರುವ ಮುಜಾವರ್ ಗಳಿಗೆ ಸಂಬಳ ನೀಡಿ, ಆರ್ಚಕರಿಗೆ ಸಂಬಳ ನೀಡುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಇದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದು ಆರ್ಚಕರ ಸಂಬಳದ ವಿವಾದ ಹೊಸ ತಿರುವು ಪಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡಿ ಹಿಂದೂಗಳಿಗೆ ಅನ್ಯಾಯ ಮಾಡಲಾಗಿದೆ ಎಂಬ ಆರೋಪವನ್ನ MLC ಸಿ.ಟಿ. ರವಿ ಮಾಡಿದ್ದು ರಾಜ್ಯ ಸರ್ಕಾರದ ವಿರುದ್ಧ ಭಿಕ್ಷಾಟನೆ ಅಸ್ತ್ರ ಪ್ರಯೋಗಿಸಿದೆ.

ಬಿಜೆಪಿ ಸರ್ಕಾರ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಹಿಂದೂ ಸಂಘಟನೆಗಳ ಒತ್ತಾಯಕ್ಕೆ ಮಣಿದು ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಇಬ್ಬರು ಆರ್ಚಕರನ್ನ ನೇಮಕ ಮಾಡಿತ್ತು. ಬಳಿಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಒಂದೂವರೆ ವರ್ಷ ಕಳೆದ್ರು ಸಂಬಳ ನೀಡಿಲ್ಲ ಎಂಬುದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಭಿಕ್ಷಾಟನೆ ಮೂಲಕ ಹಣ ಸಂಗ್ರಹಿಸಿ ಆರ್ಚಕರಿಗೆ ನೀಡುವ ಅಭಿಯಾನಕ್ಕೆ ಪ್ಲಾನ್ ಮಾಡಿದ್ದು ಬಿಜೆಪಿ ಕೂಡ ಕೈ ಜೋಡಿಸಲಿದೆ.

ಇದನ್ನೂ ಓದಿ: ಕಳೆದ 5 ತಿಂಗಳಿಂದ ಬಿಡುಗಡೆ ಆಗದ ಹಾಲಿನ ಪ್ರೋತ್ಸಾಹ ಧನ; ಸರ್ಕಾರದ ವಿರುದ್ಧ ರೈತರ ಆಕ್ರೋಶ

ಅರ್ಚಕರ ನೇಮಕದಿಂದ ಖುಷಿಯಾಗಿದ್ದ ಹಿಂದೂ ಸಂಘಟನೆಗಳು ಅರ್ಚಕರಿಗೆ ಸಂಬಳ ನೀಡುತ್ತಿಲ್ಲ ಎಂಬ ವಿಚಾರಕ್ಕೆ ಆಕ್ರೋಶಗೊಂಡಿದ್ದು, ದಶಕಗಳ ಕಾಲ‌ ನಡೆದಿದ್ದ ಹೋರಾಟವನ್ನ ಮತ್ತಷ್ಟು ವಿಭಿನ್ನಗೊಳಿಸಿ ರಾಜ್ಯ ಸರ್ಕಾರವನ್ನ ಮುಜುಗರ ಪಡಿಸಲು ಪ್ಲಾನ್ ಮಾಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?