AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಓಲೈಕೆ ಆರೋಪದಿಂದ ಹಿನ್ನಡೆ: ಎಚ್ಚರಿಕೆ ಹೆಜ್ಜೆ ಇಟ್ಟ ಕಾಂಗ್ರೆಸ್ ಸರ್ಕಾರ, ಕೆಲ ನಿರ್ಧಾರಗಳಿಗೆ ತಡೆ

ಉಪಚುನಾವಣೆ ಸಂದರ್ಭದಲ್ಲಿ ಪ್ರತಿಕ್ಷ ಬಿಜೆಪಿ ‘ಮುಸ್ಲಿಂ ಓಲೈಕೆ’ ವಿಚಾರ ಮುಂದಿಟ್ಟುಕೊಂಡು ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತ್ತು. ಅದಕ್ಕೆ ಪೂರಕವಾಗಿ ವಕ್ಫ್ ವಿವಾದವೂ ಭುಗಿಲೆದ್ದಿದ್ದು ಕಾಂಗ್ರೆಸ್​ಗೆ ತುಸು ಹಿನ್ನಡೆಯಾಗಿದೆ ಎಂದೇ ವಿಶ್ಲೇಷಿಸಲಾಗಿತ್ತು. ಇದೀಗ ಎಚ್ಚರಿಕೆಯ ಹೆಜ್ಜೆ ಇಟ್ಟಿರುವ ಸರ್ಕಾರ, ಕೆಲವೊಂದು ನಿರ್ಧಾರಗಳನ್ನು ಕೈಗೊಳ್ಳುವುದನ್ನು ಸದ್ಯಕ್ಕೆ ತಡೆ ಹಿಡಿದಿದೆ. ಅವುಗಳು ಯಾವುವು? ಇಲ್ಲಿದೆ ವಿವರ.

ಮುಸ್ಲಿಂ ಓಲೈಕೆ ಆರೋಪದಿಂದ ಹಿನ್ನಡೆ: ಎಚ್ಚರಿಕೆ ಹೆಜ್ಜೆ ಇಟ್ಟ ಕಾಂಗ್ರೆಸ್ ಸರ್ಕಾರ, ಕೆಲ ನಿರ್ಧಾರಗಳಿಗೆ ತಡೆ
ವಿಪಕ್ಷಗಳ ಮುಸ್ಲಿಂ ಓಲೈಕೆ ಅಸ್ತ್ರಕ್ಕೆ ತಣ್ಣಗಾಯ್ತೇ ಕಾಂಗ್ರೆಸ್ ಸರ್ಕಾರ?
ಪ್ರಸನ್ನ ಗಾಂವ್ಕರ್​
| Edited By: |

Updated on: Nov 16, 2024 | 7:55 AM

Share

ಬೆಂಗಳೂರು, ನವೆಂಬರ್ 16: ಅತಿಯಾದರೆ ಅಮೃತವೂ ವಿಷವಾಗುತ್ತದೆ. ಸದ್ಯ ರಾಜ್ಯ ಕಾಂಗ್ರೆಸ್ ಸರ್ಕಾರದ ಕಥೆ ಹಾಗೆಯೇ ಆಗಿದೆ. ಒಂದಲ್ಲ ಒಂದು ಕಾರಣದಿಂದ ಒಂದು ನಿಗದಿತ ವರ್ಗವನ್ನು ಓಲೈಸುತ್ತಿರುವ ಕಾಂಗ್ರೆಸ್​ಗೆ ಪದೇ ಪದೇ ವಿಪಕ್ಷಗಳ ಬಾಣ ಬಂದು ಬಡಿಯುತ್ತಿದೆ. ಹೀಗಾಗಿ ಅಲ್ಪಸಂಖ್ಯಾತ ಸಮುದಾಯದ ವಿಚಾರದಲ್ಲಿ ಕಾಂಗ್ರೆಸ್ ಎಚ್ಚರಿಕೆ ಹೆಜ್ಜೆ ಇಡಲು ನಿರ್ಧರಿಸಿದಂತಿದೆ. ಗುರುವಾರ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಕೆಲವು ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳುವುದನ್ನು ಸಚಿವ ಸಂಪುಟ ಸದ್ಯಕ್ಕೆ ತಡೆ ಹಿಡಿದಿರುವುದೂ ಇದಕ್ಕೆ ಪುಷ್ಟಿ ನೀಡಿದೆ.

ವಿಪಕ್ಷಗಳ ಮುಸ್ಲಿಂ ಓಲೈಕೆ ಅಸ್ತ್ರಕ್ಕೆ ತಣ್ಣಗಾಯ್ತೇ ಕಾಂಗ್ರೆಸ್ ಸರ್ಕಾರ?

ವಕ್ಫ್ ಆಸ್ತಿ ನೊಂದಣಿ ವಿಚಾರದಲ್ಲಿ ಮುಸ್ಲಿಂ ಓಲೈಕೆ ಎಂಬ ಟೀಕೆಗೆ ಗುರಿಯಾಗಿದ್ದ ಸರ್ಕಾರಕ್ಕೆ ಉಪ ಚುನಾವಣೆ ವೇಳೆ ಭಾರೀ ಪ್ರತಿರೋಧ ವ್ಯಕ್ತವಾಗಿತ್ತು. ಸರ್ಕಾರದ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ 4 ಮೀಸಲಾತಿ ನೀಡುವ ವಿಚಾರದಲ್ಲೂ ಓಲೈಕೆ ಎಂಬ ಟೀಕೆಗೆ ಗುರಿಯಾಗಿತ್ತು ರಾಜ್ಯ ಸರ್ಕಾರ. ಇದೆಲ್ಲದರ ಜೊತೆಗೆ ಅಲ್ಪಸಂಖ್ಯಾತ ಸಮುದಾಯದ ನಾಯಕ ಜಮೀರ್ ಅಹಮದ್ ಖಾನ್ ಒಕ್ಕಲಿಗ ನಾಯಕರ ಬಗ್ಗೆ ಆಡಿದ ಮಾತು ಚುನಾವಣೆ ಮೇಲೆ ನೇರ ಪರಿಣಾಮ ಬೀರಿದೆ.

ಹೀಗೆ ವಿಪಕ್ಷಗಳ ಟೀಕೆಯಿಂದಾಗಿ ಕ್ಯಾಬಿನೆಟ್​ನಲ್ಲೂ ಕೆಲವು ವಿಷಯಗಳ ನಿರ್ಧಾರ ಕೈಗೊಳ್ಳುವುದನ್ನು ರಾಜ್ಯ ಸರ್ಕಾರ ಮುಂದೂಡಿದೆ. ಅಲ್ಪಸಂಖ್ಯಾತ ಇಲಾಖೆಯ ವಿಷಯಗಳ ಮೇಲೆ ನಿರ್ಧಾರ ಕೈಗೊಳ್ಳುವುದಕ್ಕೆ ಕ್ಯಾಬಿನೆಟ್ ಹಿಂದೇಟು ಹಾಕಿದೆ.‌ ಗುರುವಾರ ನಡೆದ ಕ್ಯಾಬಿನೆಟ್‌ ಮೀಟಿಂಗ್​ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸಂಬಂಧಿಸಿದ ಮೂರು ವಿಷಯಗಳ ಪ್ರಸ್ತಾವನೆ ಇತ್ತು.‌ ಅವುಗಳನ್ನು ಮುಂದೂಡಿದ ಸಂಪುಟ, ಅಲ್ಪಸಂಖ್ಯಾತ ಸಮುದಾಯ ವಿಷಯಗಳ ಯಾವುದೇ ನಿರ್ಣಯ ಕೈಗೊಳ್ಳದೇ ಮುಂದೂಡಿಕೆ ಮಾಡಿದೆ. ಮುಸ್ಲಿಂ ಓಲೈಕೆ ಎಂಬ ಟೀಕೆಗೆ ಗುರಿಯಾಗಿರುವ ಸರ್ಕಾರ ಎಚ್ಚರಿಕೆ ಹೆಜ್ಜೆ ಇಟ್ಟಿದೆ.

ಸಂಪುಟ ಸಭೆಯಲ್ಲಿ ಮುಂದೂಡಿಕೆಯಾದ ಪ್ರಸ್ತಾವನೆಗಳು

  1. ಕರ್ನಾಟಕ ಶಿಕ್ಷಣ ಸಂಸ್ಥೆಗಳು (ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ನಿಬಂಧನೆ ಮತ್ತು ಷರತ್ತುಗಳು) (ಕಾಲೇಜು ಶಿಕ್ಷಣ) (ತಿದ್ದುಪಡಿ) ನಿಯಮಗಳು, 2024ಕ್ಕೆ ಅನುಮೋದನೆ ನೀಡುವುದು.
  2. ಕರ್ನಾಟಕ ಶಿಕ್ಷಣ ಸಂಸ್ಥೆಗಳು (ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ನಿಬಂಧನೆ ಮತ್ತು ಷರತ್ತುಗಳು) (ತಾಂತ್ರಿಕ ಶಿಕ್ಷಣ) (ತಿದ್ದುಪಡಿ) ನಿಯಮಗಳು, 2024″ಕ್ಕೆ ಅನುಮೋದನೆ ನೀಡುವುದು.
  3. ರಾಜ್ಯದಲ್ಲಿ ಅಲ್ಪಸಂಖ್ಯಾತ ಶೈಕ್ಷಣಿಕ ಸಂಸ್ಥೆಗಳೆಂದು ಘೋಷಿಸಲು ಇರುವ ನಿಯಮ / ಆದೇಶಗಳನ್ನು ಪರಿಷ್ಕರಿಸುವ ಬಗ್ಗೆ.

ಇದನ್ನೂ ಓದಿ: ಸರ್ಕಾರೀ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಪ್ರಸ್ತಾವನೆ ಇಲ್ಲ: ಶಿವಕುಮಾರ್

ಈ ಮೂರು ವಿಚಾರಗಳ ಮೇಲೆ ಯಾವುದೇ ನಿರ್ಣಯ ಕೈಗೊಳ್ಳದೆ ಸಚಿವ ಸಂಪುಟ ಇವುಗಳನ್ನು ಮುಂದೂಡಿಕೆ ಮಾಡಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಕಾಮಗಾರಿಗಳಲ್ಲಿ ಮೀಸಲಾತಿ ನೀಡುವ ವಿಚಾರಕ್ಕೆ ಸರ್ಕಾರ ಯಾವುದೇ ಮುಜುಗರವಿಲ್ಲದೇ ಎದೆ ತಟ್ಟಿ ಸತ್ಯ ಹೇಳಬೇಕಿತ್ತು. ಆದರೆ ಮುಸ್ಲಿಂ ಮೀಸಲಾತಿಯನ್ನೂ ಕೂಡ ಎಲ್ಲೋ ಒಂದು ಕಡೆ ಅಳುಕಿನಿಂದಲೇ ಅಲ್ಲಗಳೆದ ಕಾಂಗ್ರೆಸ್, ಬಹುಸಂಖ್ಯಾತರ ಸಿಟ್ಟಿಗೆ ಗುರಿಯಾಗುವ ಆತಂಕದಲ್ಲಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ