AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಓಲೈಕೆ ಆರೋಪದಿಂದ ಹಿನ್ನಡೆ: ಎಚ್ಚರಿಕೆ ಹೆಜ್ಜೆ ಇಟ್ಟ ಕಾಂಗ್ರೆಸ್ ಸರ್ಕಾರ, ಕೆಲ ನಿರ್ಧಾರಗಳಿಗೆ ತಡೆ

ಉಪಚುನಾವಣೆ ಸಂದರ್ಭದಲ್ಲಿ ಪ್ರತಿಕ್ಷ ಬಿಜೆಪಿ ‘ಮುಸ್ಲಿಂ ಓಲೈಕೆ’ ವಿಚಾರ ಮುಂದಿಟ್ಟುಕೊಂಡು ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತ್ತು. ಅದಕ್ಕೆ ಪೂರಕವಾಗಿ ವಕ್ಫ್ ವಿವಾದವೂ ಭುಗಿಲೆದ್ದಿದ್ದು ಕಾಂಗ್ರೆಸ್​ಗೆ ತುಸು ಹಿನ್ನಡೆಯಾಗಿದೆ ಎಂದೇ ವಿಶ್ಲೇಷಿಸಲಾಗಿತ್ತು. ಇದೀಗ ಎಚ್ಚರಿಕೆಯ ಹೆಜ್ಜೆ ಇಟ್ಟಿರುವ ಸರ್ಕಾರ, ಕೆಲವೊಂದು ನಿರ್ಧಾರಗಳನ್ನು ಕೈಗೊಳ್ಳುವುದನ್ನು ಸದ್ಯಕ್ಕೆ ತಡೆ ಹಿಡಿದಿದೆ. ಅವುಗಳು ಯಾವುವು? ಇಲ್ಲಿದೆ ವಿವರ.

ಮುಸ್ಲಿಂ ಓಲೈಕೆ ಆರೋಪದಿಂದ ಹಿನ್ನಡೆ: ಎಚ್ಚರಿಕೆ ಹೆಜ್ಜೆ ಇಟ್ಟ ಕಾಂಗ್ರೆಸ್ ಸರ್ಕಾರ, ಕೆಲ ನಿರ್ಧಾರಗಳಿಗೆ ತಡೆ
ವಿಪಕ್ಷಗಳ ಮುಸ್ಲಿಂ ಓಲೈಕೆ ಅಸ್ತ್ರಕ್ಕೆ ತಣ್ಣಗಾಯ್ತೇ ಕಾಂಗ್ರೆಸ್ ಸರ್ಕಾರ?
ಪ್ರಸನ್ನ ಗಾಂವ್ಕರ್​
| Edited By: |

Updated on: Nov 16, 2024 | 7:55 AM

Share

ಬೆಂಗಳೂರು, ನವೆಂಬರ್ 16: ಅತಿಯಾದರೆ ಅಮೃತವೂ ವಿಷವಾಗುತ್ತದೆ. ಸದ್ಯ ರಾಜ್ಯ ಕಾಂಗ್ರೆಸ್ ಸರ್ಕಾರದ ಕಥೆ ಹಾಗೆಯೇ ಆಗಿದೆ. ಒಂದಲ್ಲ ಒಂದು ಕಾರಣದಿಂದ ಒಂದು ನಿಗದಿತ ವರ್ಗವನ್ನು ಓಲೈಸುತ್ತಿರುವ ಕಾಂಗ್ರೆಸ್​ಗೆ ಪದೇ ಪದೇ ವಿಪಕ್ಷಗಳ ಬಾಣ ಬಂದು ಬಡಿಯುತ್ತಿದೆ. ಹೀಗಾಗಿ ಅಲ್ಪಸಂಖ್ಯಾತ ಸಮುದಾಯದ ವಿಚಾರದಲ್ಲಿ ಕಾಂಗ್ರೆಸ್ ಎಚ್ಚರಿಕೆ ಹೆಜ್ಜೆ ಇಡಲು ನಿರ್ಧರಿಸಿದಂತಿದೆ. ಗುರುವಾರ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಕೆಲವು ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳುವುದನ್ನು ಸಚಿವ ಸಂಪುಟ ಸದ್ಯಕ್ಕೆ ತಡೆ ಹಿಡಿದಿರುವುದೂ ಇದಕ್ಕೆ ಪುಷ್ಟಿ ನೀಡಿದೆ.

ವಿಪಕ್ಷಗಳ ಮುಸ್ಲಿಂ ಓಲೈಕೆ ಅಸ್ತ್ರಕ್ಕೆ ತಣ್ಣಗಾಯ್ತೇ ಕಾಂಗ್ರೆಸ್ ಸರ್ಕಾರ?

ವಕ್ಫ್ ಆಸ್ತಿ ನೊಂದಣಿ ವಿಚಾರದಲ್ಲಿ ಮುಸ್ಲಿಂ ಓಲೈಕೆ ಎಂಬ ಟೀಕೆಗೆ ಗುರಿಯಾಗಿದ್ದ ಸರ್ಕಾರಕ್ಕೆ ಉಪ ಚುನಾವಣೆ ವೇಳೆ ಭಾರೀ ಪ್ರತಿರೋಧ ವ್ಯಕ್ತವಾಗಿತ್ತು. ಸರ್ಕಾರದ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ 4 ಮೀಸಲಾತಿ ನೀಡುವ ವಿಚಾರದಲ್ಲೂ ಓಲೈಕೆ ಎಂಬ ಟೀಕೆಗೆ ಗುರಿಯಾಗಿತ್ತು ರಾಜ್ಯ ಸರ್ಕಾರ. ಇದೆಲ್ಲದರ ಜೊತೆಗೆ ಅಲ್ಪಸಂಖ್ಯಾತ ಸಮುದಾಯದ ನಾಯಕ ಜಮೀರ್ ಅಹಮದ್ ಖಾನ್ ಒಕ್ಕಲಿಗ ನಾಯಕರ ಬಗ್ಗೆ ಆಡಿದ ಮಾತು ಚುನಾವಣೆ ಮೇಲೆ ನೇರ ಪರಿಣಾಮ ಬೀರಿದೆ.

ಹೀಗೆ ವಿಪಕ್ಷಗಳ ಟೀಕೆಯಿಂದಾಗಿ ಕ್ಯಾಬಿನೆಟ್​ನಲ್ಲೂ ಕೆಲವು ವಿಷಯಗಳ ನಿರ್ಧಾರ ಕೈಗೊಳ್ಳುವುದನ್ನು ರಾಜ್ಯ ಸರ್ಕಾರ ಮುಂದೂಡಿದೆ. ಅಲ್ಪಸಂಖ್ಯಾತ ಇಲಾಖೆಯ ವಿಷಯಗಳ ಮೇಲೆ ನಿರ್ಧಾರ ಕೈಗೊಳ್ಳುವುದಕ್ಕೆ ಕ್ಯಾಬಿನೆಟ್ ಹಿಂದೇಟು ಹಾಕಿದೆ.‌ ಗುರುವಾರ ನಡೆದ ಕ್ಯಾಬಿನೆಟ್‌ ಮೀಟಿಂಗ್​ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸಂಬಂಧಿಸಿದ ಮೂರು ವಿಷಯಗಳ ಪ್ರಸ್ತಾವನೆ ಇತ್ತು.‌ ಅವುಗಳನ್ನು ಮುಂದೂಡಿದ ಸಂಪುಟ, ಅಲ್ಪಸಂಖ್ಯಾತ ಸಮುದಾಯ ವಿಷಯಗಳ ಯಾವುದೇ ನಿರ್ಣಯ ಕೈಗೊಳ್ಳದೇ ಮುಂದೂಡಿಕೆ ಮಾಡಿದೆ. ಮುಸ್ಲಿಂ ಓಲೈಕೆ ಎಂಬ ಟೀಕೆಗೆ ಗುರಿಯಾಗಿರುವ ಸರ್ಕಾರ ಎಚ್ಚರಿಕೆ ಹೆಜ್ಜೆ ಇಟ್ಟಿದೆ.

ಸಂಪುಟ ಸಭೆಯಲ್ಲಿ ಮುಂದೂಡಿಕೆಯಾದ ಪ್ರಸ್ತಾವನೆಗಳು

  1. ಕರ್ನಾಟಕ ಶಿಕ್ಷಣ ಸಂಸ್ಥೆಗಳು (ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ನಿಬಂಧನೆ ಮತ್ತು ಷರತ್ತುಗಳು) (ಕಾಲೇಜು ಶಿಕ್ಷಣ) (ತಿದ್ದುಪಡಿ) ನಿಯಮಗಳು, 2024ಕ್ಕೆ ಅನುಮೋದನೆ ನೀಡುವುದು.
  2. ಕರ್ನಾಟಕ ಶಿಕ್ಷಣ ಸಂಸ್ಥೆಗಳು (ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ನಿಬಂಧನೆ ಮತ್ತು ಷರತ್ತುಗಳು) (ತಾಂತ್ರಿಕ ಶಿಕ್ಷಣ) (ತಿದ್ದುಪಡಿ) ನಿಯಮಗಳು, 2024″ಕ್ಕೆ ಅನುಮೋದನೆ ನೀಡುವುದು.
  3. ರಾಜ್ಯದಲ್ಲಿ ಅಲ್ಪಸಂಖ್ಯಾತ ಶೈಕ್ಷಣಿಕ ಸಂಸ್ಥೆಗಳೆಂದು ಘೋಷಿಸಲು ಇರುವ ನಿಯಮ / ಆದೇಶಗಳನ್ನು ಪರಿಷ್ಕರಿಸುವ ಬಗ್ಗೆ.

ಇದನ್ನೂ ಓದಿ: ಸರ್ಕಾರೀ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಪ್ರಸ್ತಾವನೆ ಇಲ್ಲ: ಶಿವಕುಮಾರ್

ಈ ಮೂರು ವಿಚಾರಗಳ ಮೇಲೆ ಯಾವುದೇ ನಿರ್ಣಯ ಕೈಗೊಳ್ಳದೆ ಸಚಿವ ಸಂಪುಟ ಇವುಗಳನ್ನು ಮುಂದೂಡಿಕೆ ಮಾಡಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಕಾಮಗಾರಿಗಳಲ್ಲಿ ಮೀಸಲಾತಿ ನೀಡುವ ವಿಚಾರಕ್ಕೆ ಸರ್ಕಾರ ಯಾವುದೇ ಮುಜುಗರವಿಲ್ಲದೇ ಎದೆ ತಟ್ಟಿ ಸತ್ಯ ಹೇಳಬೇಕಿತ್ತು. ಆದರೆ ಮುಸ್ಲಿಂ ಮೀಸಲಾತಿಯನ್ನೂ ಕೂಡ ಎಲ್ಲೋ ಒಂದು ಕಡೆ ಅಳುಕಿನಿಂದಲೇ ಅಲ್ಲಗಳೆದ ಕಾಂಗ್ರೆಸ್, ಬಹುಸಂಖ್ಯಾತರ ಸಿಟ್ಟಿಗೆ ಗುರಿಯಾಗುವ ಆತಂಕದಲ್ಲಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ