AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಕೈ ಸೇರಿದ ಹಿಂದುಳಿದ ವರ್ಗಗಳ ಆಯೋಗದ ಮೀಸಲಾತಿ ವರದಿ, ಆಯೋಗ ಏನೆಲ್ಲ ಶಿಫಾರಸು ಮಾಡಿದೆ? ಇಲ್ಲಿದೆ ವಿವರ

ಜಯಪ್ರಕಾಶ್ ಹೆಗ್ಡೆ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ವಿವಿಧ ಜಾತಿಗಳಿಗೆ ಮೀಸಲಾತಿ ನೀಡುವ ಕುರಿತು 32 ವರದಿಗಳನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಗಳಲ್ಲಿ ಏನೆಲ್ಲಾ ಶಿಫಾರಸು ಮಾಡಲಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಸಿಎಂ ಕೈ ಸೇರಿದ ಹಿಂದುಳಿದ ವರ್ಗಗಳ ಆಯೋಗದ ಮೀಸಲಾತಿ ವರದಿ, ಆಯೋಗ ಏನೆಲ್ಲ ಶಿಫಾರಸು ಮಾಡಿದೆ? ಇಲ್ಲಿದೆ ವಿವರ
ವಿಧಾನಸೌಧ
ವಿವೇಕ ಬಿರಾದಾರ
|

Updated on:Mar 15, 2023 | 9:48 AM

Share

ಬೆಂಗಳೂರು: ವಿವಿಧ ಜಾತಿಗಳಿಗೆ ಮೀಸಲಾತಿ ನೀಡುವ ವಿಚಾರವಾಗಿ,ಹಿಂದುಳಿದ ವರ್ಗಗಳ ಶಾಶ್ವತ ಆಯೋಗ (Backward Classes Commission), ವರದಿಯನ್ನು ಸಿದ್ದಪಡಿಸಿ ರಾಜ್ಯಸರ್ಕಾರಕ್ಕೆ (Karnataka Governmnet) ಸಲ್ಲಿಸಿದೆ. ಜಯಪ್ರಕಾಶ್ ಹೆಗ್ಡೆ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ರಚಿಸಲಾಗಿತ್ತು. ಇದೀಗ ಆಯೋಗ ವಿವಿಧ ವಿಷಯಗಳಿಗೆ ಸಂಬಂಧಿಸಿದ ಒಟ್ಟು 32 ವರದಿಗಳನ್ನು ಸಿದ್ಧಪಡಿಸಿ ಸರ್ಕಾರಕ್ಕೆ ನೀಡಿದೆ. ಸಣ್ಣ ಪುಟ್ಟ ಜಾತಿಗಳು ಮೀಸಲಾತಿ ವಂಚಿತವಾಗಿರುವ ಮತ್ತು ಲಿಂಗಾಯತ ಸಮುದಾಯಕ್ಕೆ ಸೇರಿದ ವಿವಿಧ ಸಣ್ಣ ಪುಟ್ಟ ಪಂಗಡಗಳ ಬಗ್ಗೆ ವರದಿಯಲ್ಲಿ ವಿವರಣೆ ನೀಡಲಾಗಿದೆ. ಹಾಗೆ ಹಿಂದುಳಿದ ಜಾತಿಗೆ ಸೇರುವ ಸಣ್ಣ ಸಣ್ಣ ಸಮುದಾಯಗಳಿಗೆ ಮೀಸಲಾತಿ ನೀಡಲು ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

ಇನ್ನು ವರದಿಯಲ್ಲಿ ಕೆಲವು ಸಣ್ಣ ಜಾತಿಗಳ ಜೀವನ ಶೈಲಿ ಮತ್ತು ಕಡಿಮೆ ಜನಸಂಖ್ಯೆ ಹೊಂದಿರುವ ಜನ ಸಮುದಾಯದ ಕುರಿತು ಉಲ್ಲೇಖಿಸಲಾಗಿದೆ. ಕಾಡುಗೊಲ್ಲ, ಹಟ್ಟಿಗೊಲ್ಲ, ಚಪ್ಪರ್‌ ಬಂದ್‌, ಕುಡುಬಿ, ಮುಖಾರಿ, ಮುವಾರಿ, ಪೊಮ್ಮಲ, ಮರುತ್ತುವರ್‌, ಪರಿಯಾಳ ಜಾತಿಗಳ ಬಗ್ಗೆ ಪ್ರಸ್ತಾಪ ಮಾಡಲಾಗಿದೆ.

ಕೊರೊನಾ ಸೇರಿದಂತೆ ಇತರ ಕಾರಣಗಳಿಂದ ಅನಾಥರಾದ ಮಕ್ಕಳಿಗೆ ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡು ‌ಮಾದರಿಯಲ್ಲಿ ವಿಶೇಷ ಮೀಸಲಾತಿ ನೀಡಬೇಕೆಂದು ಆಯೋಗ ಹೇಳಿದೆ. ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿ ಬಗ್ಗೆಯೂ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ದೊಡ್ಡ ಸಮುದಾಯಗಳಿಗೆ ಮೀಸಲಾತಿ ನೀಡುವ ಕುರಿತು ಆಯೋಗ ಕೆಲವು ಸಲಹೆ ನೀಡಿದೆ. ಇನ್ನು ಮೀಸಲಾತಿ ಬಯಸುವ ಸಮುದಾಯಗಳ ಪೂರ್ಣ ಪ್ರಮಾಣದ ಅಧ್ಯಯನ ಅಗತ್ಯ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು, ಹಲವು ದಿನಗಳಿಂದ ಸಮುದಾಯ ಪ್ರತಿಭಟನೆ ಮಾಡುತ್ತಿದೆ. ಈ ಸಂಬಂಧ ಸಮುದಾಯದ ಮುಖಂಡರು ರಾಜ್ಯಸರ್ಕಾದ ಮೇಲೆ ಒತ್ತಡ ಹಾಕುತ್ತಿದ್ದು, ಮಾರ್ಚ್​ 15ರ ವರೆಗು ಗಡುವು ನೀಡಿದ್ದರು. ಇದಕ್ಕೆ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದತ್ತ ಬೊಟ್ಟು ಮಾಡಿ ತೋರಿಸಿತ್ತು. ಈಗ ಆಯೋಗ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿದ್ದು, ಪಂಚಮಸಾಲಿ ಸಮುದಾಯಕ್ಕೆ ಸಿಹಿ ಸುದ್ದಿ ಸಿಗುತ್ತಾ ಎಂದು ಕಾದು ನೋಡಬೇಕಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:35 am, Wed, 15 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!