AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಇನ್ನೋವಾ ಕಾರು ಮತ್ತು ಟಂಟಂ ನಡುವೆ ಭೀಕರ ಅಪಘಾತ; ಇಬ್ಬರ ದುರ್ಮರಣ

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ಇನ್ನೋವಾ ಕಾರು ಮತ್ತು ಟಂಟಂ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿರುವಂತಹ ಘಟನೆ ನಡೆದಿದೆ. ಮೂವರು ಗಂಭೀರ ಗಾಯಗೊಂಡಿದ್ದಾರೆ. ಕಾರು ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಾಗಲಕೋಟೆ: ಇನ್ನೋವಾ ಕಾರು ಮತ್ತು ಟಂಟಂ ನಡುವೆ ಭೀಕರ ಅಪಘಾತ; ಇಬ್ಬರ ದುರ್ಮರಣ
ಮೃತ ಮಹೇಶ್ ನಾಯರ್ (27) ಮತ್ತು ಮೆಹಬೂಬ್ ಶೇಖ್ (30)
ರವಿ ಹೆಚ್ ಮೂಕಿ, ಕಲಘಟಗಿ
| Updated By: ಭಾವನಾ ಹೆಗಡೆ|

Updated on:Sep 29, 2025 | 10:15 AM

Share

ಬಾಗಲಕೋಟೆ, ಸೆಪ್ಟೆಂಬರ್ 29: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ಭೀಕರ ದುರ್ಘಟನೆಯೊಂದು ನಡೆದಿದೆ. ಇನ್ನೋವಾ ಕಾರು ಮತ್ತು ಟಂಟಂ ವಾಹನಗಳ ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹೇಶ್ ನಾಯ್ಕರ್ (27) ಮತ್ತು ಮೆಹಬೂಬ್ ಶೇಖ್‌ (30) ಮೃತ ದುರ್ದೈವಿಗಳು. ಗಾಯಗೊಂಡವರನ್ನು ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೋವಾ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ

ಊಟಕ್ಕೆಂದು ಸಮೀಪದ ವಿಜಯಪುರ ಜಿಲ್ಲೆಯ ಕೊಲ್ಹಾರಕ್ಕೆ ತೆರಳಿದ್ದ ಐವರಿದ್ದ ಟಂಟಂ ವಾಹನ ತಡರಾತ್ರಿ ​ ಬಾಗಲಕೋಟೆ ಕಡೆಗೆ ವಾಪಸ್ ಹೊರಟಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮಹೇಶ್ ನಾಯ್ಕರ್ (27) ಮತ್ತು ಮೆಹಬೂಬ್ ಶೇಖ್‌ (30) ಮೃತ ದುರ್ದೈವಿಗಳು. ವಿಶಾಲ್ ವರತಿಲ್ಲೆ, ವಿಜಯಕುಮಾರ್ ಭೋವಿ, ಗುರುಪ್ರಸಾದ್ ಸುಂಕದ ಗಾಯಾಳುಗಳು.

ಮೃತರು ಮತ್ತು ಗಾಯಾಳುಗಳು ನವನಗರದ 45 ನೇ ಸೆಕ್ಟರ್ ನಿವಾಸಿಗಳೇ ಆಗಿದ್ದು, ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ಇನ್ನೋವಾ ಕಾರು ಚಾಲಕನ ಅಜಾಗರೂಕತೆ ಚಾಲನೆ ಕಾರಣ ಎಂದು ಹೇಳಲಾಗುತ್ತಿದೆ.  ಮುಂದೆ ಹೋಗುತ್ತಿದ್ದ ಮಹಿಂದ್ರಾ ಪಿಕ್ ಅಪ್ ವಾಹನ್ ಡಿಕ್ಕಿ ತಪ್ಪಿಸಲು ಹೋಗಿ ಎದುರಿಗೆ ಬರುತ್ತಿದ್ದ ಟಂ ಟಂ ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ ಹಾಸನ: ಬೈಕ್​​ಗೆ ಕೆಎಸ್​​​ಆರ್​​ಟಿಸಿ ಬಸ್​ ಡಿಕ್ಕಿ; ಮೂವರು ಯುವಕರು ಸಾವು

ಕೋಲಾರದಲ್ಲಿ ವ್ಯಾಗನಾರ್ ಕಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಕೋಲಾರ ಜಿಲ್ಲೆ ಮುಳಬಾಗಿಲು ತಾಲುಕಿನ ಒಮ್ಮಸಂದ್ರ ಗ್ರಾಮದ ಬಳಿ ವ್ಯಾಗನಾರ್ ಕಾರು ಮತ್ತು ಬೈಕ್​ನ ನಡುವೆ ಡಿಕ್ಕಿಯಾಗಿದೆ. ಇದರ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆಂದ್ರದ ರಾಮಕುಪ್ಪಂ ನಿವಾಸಿ ಗಂಗಿರೆಡ್ಡಿ ಮೃತ ಬೈಕ್ ಸವಾರ. ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಗಂಗಿರೆಡ್ಡಿ ಕೆಲಸದ ನಿಮಿತ್ತ ತನ್ನ ಹುಟ್ಟೂರಾದ ರಾಮಕುಪ್ಪಂಗೆ ಬಂದಿದ್ದ.

ಈ ವೇಳೆ ಮುಳಬಾಗಿಲಿಗೆ ಬಂದು ವಾಪಸ್ ಹೋಗುವ ಸಂದರ್ಭದಲ್ಲಿ ಒಮ್ಮಸಂದ್ರ ಗ್ರಾಮದ ಬಳಿ ವ್ಯಾಗನಾರ್ ಕಾರ್ ಡಿಕ್ಕಿಯಾಗಿ ಗಂಗಿರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಂಗಿರೆಡ್ಡಿ ತಲೆಗೆ ಹೆಲ್ಮೆಟ್ ಧರಿಸಿದ್ದರೂ ಸಹ ತಲೆಗೆ ಗಂಭೀರಾವಾದ ಗಾಯಗಳಾಗಿತ್ತು. ಈ ಘಟನೆ ಸಂಬಂಧ ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:03 am, Mon, 29 September 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ