AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಧೋಳ: ದಿಬ್ಬಣದ ಬಸ್​ಗೆ ಲಾರಿ ಡಿಕ್ಕಿ- ಹೊತ್ತಿ ಉರಿದ ಬಸ್​ನಲ್ಲಿದ್ದ ಇಬ್ಬರು ಸಜೀವ ದಹನ

ಅಪಘಾತದಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ.  ಮೃತರನ್ನು ಈರವ್ವ ಗಾಣಿಗೇರ (70) ಹಾಗೂ ಅಣ್ಣವ್ವ ಗಾಣಿಗೇರ (58) ಎಂದು ಗುರುತಿಸಲಾಗಿದೆ.

ಮುಧೋಳ: ದಿಬ್ಬಣದ ಬಸ್​ಗೆ ಲಾರಿ ಡಿಕ್ಕಿ- ಹೊತ್ತಿ ಉರಿದ ಬಸ್​ನಲ್ಲಿದ್ದ ಇಬ್ಬರು ಸಜೀವ ದಹನ
ಹೊತ್ತಿ ಉರಿದ ಬಸ್​
ರಾಜೇಶ್ ದುಗ್ಗುಮನೆ
|

Updated on:Mar 03, 2021 | 7:53 PM

Share

ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಉತ್ತೂರು ಸಮೀಪ ಇಂದು ಸಂಜೆ ಲಾರಿ ಹಾಗೂ ಮಿನಿ ಲಕ್ಸುರಿ ಬಸ್​ ನಡುವೆ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಬಸ್​ ಹೊತ್ತಿ ಉರಿದಿದೆ. ಈ ವೇಳೆ ಇಬ್ಬರು ಸಜೀವ ದಹನವಾಗಿದ್ದಾರೆ. 

ಮುಧೋಳ-ಯಾದವಾಡದ ರಸ್ತೆಯ ಉತ್ತೂರು ಫ್ಯಾಕ್ಟರಿ ಬಳಿ ಲಾರಿ ಹಾಗೂ ಬಸ್​ಗಳು ವಿರುದ್ಧ ದಿಕ್ಕಿನಿಂದ ಬರುತ್ತಿದ್ದವು. ಈ ವೇಳೆ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದು, ಮಿನಿ ಲಕ್ಸುರಿ ಬಸ್ ಪಲ್ಟಿ ಆಗಿದೆ. ಬಸ್​ ಬೀಳುತ್ತಿದ್ದಂತೆ, ಹೊಗೆ ಕಾಣಿಸಿಕೊಂಡಿದೆ. ಇದರಿಂದ ಭಯಗೊಂಡ ಪ್ರಯಾಣಿಕರು ಬಸ್​ನಿಂದ ಇಳಿದಿದ್ದಾರೆ.

ನಂತರ ನೋಡ ನೋಡುತ್ತಿದ್ದಂತೆ ಬಸ್​ ಹೊತ್ತಿ ಉರಿದಿದೆ. ಅಪಘಾತದಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ.  ಮೃತರನ್ನು ಈರವ್ವ ಗಾಣಿಗೇರ (70) ಹಾಗೂ ಅಣ್ಣವ್ವ ಗಾಣಿಗೇರ (58) ಎಂದು ಗುರುತಿಸಲಾಗಿದೆ. ಇವರು ಬೆಳಗಾವಿ ಜಿಲ್ಲೆ ಯಾದವಾಡ ಗ್ರಾಮದವರು. ಅಥಣಿ ತಾಲ್ಲೂಕಿನ ಚಮಕೇರಿ ಗ್ರಾಮಕ್ಕೆ ಮದುವೆಗೆ ಹೋಗಿದ್ದರು. ಚಮಕೇರಿ ಗ್ರಾಮದಿಂದ ಯಾದವಾಡ ಗ್ರಾಮಕ್ಕೆ ವಾಪಸ್ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಮುಧೋಳ ಪೊಲೀಸರು ಭೇಟಿ ನೀಡಿದ್ದಾರೆ. ಮುಧೋಳ ಅಗ್ನಿಶಾಮಕ ದಳ‌ ಸಿಬ್ಬಂದಿ ಕೂಡ ಭೇಟಿ ನೀಡಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ‌ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ.

ಇದನ್ನೂ ಓದಿ: Rishab Shetty | ಶೂಟಿಂಗ್​ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ನಟ ರಿಷಬ್ ಶೆಟ್ಟಿಗೆ ಬೆನ್ನು, ತಲೆಗೆ ಬೆಂಕಿ

Published On - 7:50 pm, Wed, 3 March 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ